ತುಮಕೂರಿನಲ್ಲಿ ಶಂಕಿತ ಉಗ್ರ ವಶಕ್ಕೆ
Team Udayavani, Jul 31, 2022, 5:20 PM IST
ತುಮಕೂರು: ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಭಾನುವಾರ ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದ ಶಂಕಿತ ಉಗ್ರ ಮಹಾರಾಷ್ಟ್ರ ಮೂಲದ ಸಾಜಿದ್ ಮಕ್ರಾನಿ ಎಂದು ತಿಳಿದು ಬಂದಿದೆ. ತಮಕೂರಿನ ಕಾಲೇಜೊಂದರ ವಿದ್ಯಾರ್ಥಿ.
ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂಬ ಶಂಕೆ ಮೇಲೆ ತುಮಕೂರಿನಲ್ಲಿ ಸಾಜಿದ್ ನನ್ನು ಎನ್ ಐ ಎ ತಂಡ ವಶಕ್ಕೆ ಪಡೆದಿದೆ. ಈತ ಸದಾಶಿವ ನಗರದ 9ನೇ ತಿರುವಿನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ವಾಸ ಇದ್ದ. ಒಟ್ಟು ನಾಲ್ಕು ಜನ ಸ್ನೇಹಿತರು ಜೊತೆಯಲ್ಲಿ ಇದ್ದರು.
ಇದನ್ನೂ ಓದಿ: ಸಾಗರ: ಬೇಳೂರಿನಲ್ಲಿ ಆರು ಶತಮಾನಗಳ ಹಿಂದಿನ ದೇವಾಲಯ ಸಮುಚ್ಛಯ ಬೆಳಕಿಗೆ
ಭಾನುವಾರ ಬೆಳಗಿನ ಜಾವ 4 ಗಂಟೆಗೆ ಬಂದ 20 ಜನ ಎನ್ ಐ ಎ ತಂಡ ಸತತ 6 ಗಂಟೆಗಳ ಕಾಲ ವಿಚಾರಣೆ ಮಾಡಿದೆ. ಆತನ ಬಳಿಯಿದ್ದ ಲ್ಯಾಪ್ ಟಾಪ್, ಮೊಬೈಲ್ ,ಎಲೆಕ್ಟ್ರಾನಿಕ್ ವಸ್ತುಗಳನ್ನು ಸೀಜ್ ಮಾಡಿ ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ.
ಮನೆ ಮಾಲೀಕ ಹೇಳುವಂತೆ, ಸಾಜಿದ್ ಮಕ್ರಾನಿ ಸೇರಿ ಒಟ್ಟು ನಾಲ್ಕು ಜನ ಬಾಡಿಗೆ ಪಡೆದಿದ್ದರು. ಕಳೆದ 6 ತಿಂಗಳಿಂದ ಬಾಡಿಗೆ ಇದ್ದರು. ಅವರ ಪೂರ್ವಾಪರ ನಾವು ತಿಳಿದುಕೊಂಡಿರಲಿಲ್ಲ. ಇಂದು ಬೆಳಗ್ಗೆ 20 ಜನ ಅಧಿಕಾರಿಗಳ ತಂಡ ಬಂದಿತ್ತು. ಬೆಳಗಿನ ಜಾವ 4 ಗಂಟೆಯಿಂದ 10 ಗಂಟೆವರೆಗೆ ವಿಚಾರಣೆ ಮಾಡಿದ್ದಾರೆ ಲ್ಯಾಪ್ ಟಾಪ್, ಪಾಸ್ ಪೋರ್ಟ್ ಎಲ್ಲವನ್ನೂ ಸೀಜ್ ಮಾಡಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ