ತಾಲೂಕು ಆಡಳಿತದ ಆದೇಶಕ್ಕೆ ಕಿಮ್ಮತ್ತಿಲ್ಲ

ಕೆಲವೆಡೆ ತಂಬಾಕು ಉತ್ಪನ್ನ ಮಾರಾಟ: ಕ್ರಮ ಕೈಗೊಳ್ಳದ ಅಧಿಕಾರಿಗಳು

Team Udayavani, Apr 29, 2020, 2:39 PM IST

ತಾಲೂಕು ಆಡಳಿತದ ಆದೇಶಕ್ಕೆ ಕಿಮ್ಮತ್ತಿಲ್ಲ

ಸಾಂದರ್ಭಿಕ ಚಿತ್ರ

ಚಿಕ್ಕನಾಯಕನಹಳ್ಳಿ: ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ವೈರಸ್‌ ತಡೆಗಟ್ಟಲು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೊಳಿಸಿದ ಕೆಲ ಆದೇಶ ಪತ್ರಗಳು ಹಾಗೂ ತಿಳಿವಳಿಕೆ ಪತ್ರಗಳು ಅನುಷ್ಠಾನಕ್ಕೆ ತರುವಲ್ಲಿ ವಿಫ‌ಲವಾಗಿದೆ. ಕೋವಿಡ್ ತಡೆಗಟ್ಟಲು ತಾಲೂಕು ಆಡಳಿತ ಅನೇಕ ಮುಂಜಾಗ್ರತ ಕ್ರಮಗಳನ್ನು ಜಾರಿಗೊಳಿಸಿದ್ದು ಹಾಗೂ ಲಾಕ್‌ಡೌನ್‌ನಿಂದ ಸಾರ್ವಜನಿಕರಿಗೆ ಅನಾನುಕೂಲಗಳು ಸಂಭವಿಸಬಾರದು ಎಂದು ಕೆಲ ಮಾರ್ಗ ಸೂಚನೆಯನ್ನು ಹೊರಡಿಸಲಾಗಿತ್ತು. ಆದರೇ ತಾಲೂಕು ಆಡಳಿತದ ಮಾರ್ಗಸೂಚನೆಗೆ ಬೆಲೆ ಇಲ್ಲದಂತಾಗಿದೆ.

ನೋಟಿಸ್‌ಗಳಿಗೆ ಬೆಲೆ ಇಲ್ಲ: ತಾಲೂಕು ಆಡಳಿತ ಕೋವಿಡ್ ತಡೆಗಟ್ಟಲು ಹಗಲಿರುಳು ಶ್ರಮ ಹಾಕುತ್ತಿರುವುದರಲ್ಲಿ ಎರಡು ಮಾತಿಲ್ಲ, ಆದರೇ ಕಟ್ಟುನಿಟ್ಟಿನ ಆದೇಶಗಳಿಗೆ ತಾಲೂಕಿನಲ್ಲಿ ಬೆಲೆ
ಇಲ್ಲದಂತಾಗಿದೆ. ದಿನಸಿ ಸಾಮಗ್ರಿಗಳ ಬೆಲೆ ಅಂಗಡಿಗಳ ಮೇಲೆ ಪ್ರಕಟಣೆ ಮಾಡಬೇಕು. ನಿಗದಿ ದರಕ್ಕಿಂತ ಹೆಚ್ಚಿಗೆಯಾಗಿ ಮಾರಾಟ ಮಾಡುವಂತಿಲ್ಲ ಎಂದು ಪ್ರಕಟಣೆ ನೀಡಲಾಗಿತ್ತು. ಆದರೇ ದಿನಸಿ ಅಂಗಡಿಗಳಿಗೆ ನೋಟಿಸ್‌ ಪ್ರತಿಗಳನ್ನು ನೀಡಿಲ್ಲ ಹಾಗೂ ಯಾವ ಅಧಿಕಾರಿಗಳು ಒಂದು ದಿನಸಿ ಅಂಗಡಿಗಳ ತಪಾಸಣಾ ಕಾರ್ಯ ನಡೆಸಿಲ್ಲ.

ಅಕ್ರಮ ಗುಟ್ಕಾ ಹಾಗೂ ಧೂಮಪಾನ ಮಾರಾಟ ಮಾಡಬಾರದು ಎಂದು ಆದೇಶ ನೀಡಿದ್ದು, ಕೆಲ ಹಳ್ಳಿಗಳಲ್ಲಿ ಸಣ್ಣ ಸಣ್ಣ ಅಂಗಡಿಗಳಲ್ಲಿ ಬೀಡಿ, ಸಿಗರೇಟ್‌ ವಶಪಡಿಸಿಕೊಂಡಿದ್ದು ಬಿಟ್ಟರೆ ಬೇರೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ, ಔಷಧಿ ಅಂಗಡಿ ಗಳಲ್ಲಿ ವೈದ್ಯರು ನೀಡಿದ ಚೀಟಿಗಳ ಆಧಾರದ ಮೇಲೆ ಮಾತ್ರ ಔಷಧಗಳನ್ನು ನೀಡಬೇಕು ಎಂದು ತಾಲೂಕು ಆಡಳಿತ ಆದೇಶ ನೀಡಿತ್ತು. ಆದರೆ ಇದು ಯಾವ ಔಷಧ ಅಂಗಡಿಗಳಲ್ಲಿ ಅನುಷ್ಠಾನವಾಗಿಲ್ಲ. ಸರ್ಕಾರ ಬೇಕರಿಗಳನ್ನು ಲಾಕ್‌ಡೌನ್‌ ಸಮಯದಲ್ಲಿ ತೆರೆಯಲು ಆವಕಾಶ ನೀಡಿದ್ದು, ಕೆಲ ಮಾರ್ಗ ಸೂಚನೆಯನ್ನು ಸಹ ನೀಡಿದೆ ಅದರೇ ತಾಲೂಕಿನಲ್ಲಿನ ಬೇಕರಿಗಳಲ್ಲಿ ಯಾವ ಯಾವ ತಿನಿಸುಗಳನ್ನು ಮಾರಾಟ ಮಾಡಲಾಗುತ್ತಿದೆ ಎಷ್ಟು ದಿನ ಅವುಗಳನ್ನು ಇರಿಸಲಾಗಿರುತ್ತದೆ ಎಂಬ ತಪಾಸನೆ ಕಾರ್ಯ ನಡೆದಿಲ್ಲ. ತಾಲೂಕು ಆಡಳಿತ ಜಾರಿ ಗೊಳಿಸಿದ್ದ ಎಲ್ಲಾ ಆದೇಶಗಳು ಜನಪರವಾಗಿದ್ದು, ಆದರೆ ಆದೇಶಗಳು ಹಲ್ಲು ಕಿತ್ತ ಹಾವಿನಂತಾಗಿವೆ.

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.