ತುಮಕೂರಿನಲ್ಲಿ ಇಂದು ಯಾವುದೇ ಹೊಸ ಕೋವಿಡ್ ಪ್ರಕರಣವಿಲ್ಲ: ಜಿಲ್ಲಾಧಿಕಾರಿ
Team Udayavani, May 23, 2020, 3:42 PM IST
ತುಮಕೂರು: ಕಲ್ಪತರು ನಾಡಿನಲ್ಲಿ ಶನಿವಾರ ಯಾವುದೇ ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲೆಗೆ ಹೊರ ರಾಜ್ಯದಿಂದ 462 ಮಂದಿ ಬಂದಿದ್ದು ಅದರಲ್ಲಿ ಆಂಧ್ರ ಪ್ರದೇಶದಿಂದಲೇ ಅತಿ ಹೆಚ್ಚು ಬಂದಿದ್ದಾರೆ ಎಂದು ತಿಳಿಸಿದರು. ಅದರಲ್ಲಿ 133 ಮಂದಿ ಆಂಧ್ರ ಪ್ರದೇಶ, 113 ಮಹಾರಾಷ್ಟ್ರ, 103 ಮಂದಿ ತಮಿಳುನಾಡಿನಿಂದ ಜಿಲ್ಲೆಗೆ ಆಗಮಿಸಿದ್ದಾರೆ.
ಭಾನುವಾರ ಲಾಕ್ ಡೌನ್ ಅವಧಿಯಲ್ಲಿ ಆಸ್ಪತ್ರೆ, ಮೆಡಿಕಲ್ ಸ್ಟೋರ್, ಹಾಲು ತರಕಾರಿ, ದಿನಸಿ ಅಂಗಡಿ, ಪಾರ್ಸಲ್ ನೀಡುವ ಹೊಟೇಲ್ ಗಳು ಸೇರಿದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆ ಯಾವುದು ಇರುವುದಿಲ್ಲ. ಜನರು ಮನೆ ಬಿಟ್ಟು ಹೊರ ಬರಬಾರದು ಎಂದರು.
ಜಿಲ್ಲೆಯಲ್ಲಿ ಈವರೆಗೆ 24 ಸೋಂಕಿತರು ಇದ್ದು ಇಬ್ಬರು ಮೃತಪಟ್ಟಿದ್ದಾರೆ. ಐವರು ಗುಣಮುಖರಾಗಿದ್ದಾರೆ ಉಳಿದವರಿಗೆ ಜಿಲ್ಲಾ ಕೋವಿಡ್ 19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ