2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

ಸಿದ್ದರಾಮಯ್ಯರನ್ನು ಸಿಎಂ ಮಾಡಲು 86 ಶಾಸಕರ ಸಹಿ ಹಾಕಿಸಿ ದೇವೇಗೌಡರಿಗೆ ಕೊಟ್ಟಿದ್ದು ನಾನೇ: ಸೋಮಣ್ಣ

Team Udayavani, Apr 15, 2024, 7:36 PM IST

1-aaaa

ಕೊರಟಗೆರೆ: ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲೂ ನಮ್ಮ ಮೈತ್ರಿ ಅಭ್ಯರ್ಥಿಗಳೇ ಗೆಲ್ಲುತ್ತಾರೆ. ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಗೆಲ್ಲಿಸಿ ಪಾರ್ಲಿಮೆಂಟ್‌ಗೆ ಕಳಿಸಿಕೊಡುವ ಶಕ್ತಿ ನನಗಿನ್ನೂ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಶ್ವಾಸದ ನುಡಿಗಳನ್ನಾಡಿದ್ದಾರೆ.

ಕೊರಟಗೆರೆ ಪಟ್ಟಣದ ಊರ್ಡಿಗೆರೆ ಸಮೀಪದ ಖಾಸಗಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕಾರ್ಯಕರ್ತರ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಆಗುವ ಅರ್ಹತೆ ಯಾರಿಗೇ ಇದೇ ಹೇಳಿ. ತುಮಕೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಗೆದ್ದರೇ ನಿಮ್ಮ ದೇವೇಗೌಡರೇ ಗೆದ್ದಂತೆ ಎಂದರು.

ನಾನು ಕಾವೇರಿ ವಿಚಾರದಲ್ಲಿ ಮೋದಿಯನ್ನು ನಂಬಿದ್ದೇನೆ.1962 ರಿಂದ ನಾನು ಕಾವೇರಿ ನೀರಿಗಾಗಿ ಹೋರಾಟ ಮಾಡಿದ್ದೇನೆ. ವಿ.ಸೋಮಣ್ಣ ಗೆದ್ರೇ ತಲೆ ಎತ್ತಿ ನಾನು ಮೋದಿಗೆ ಕಾವೇರಿ ನೀರು ಮತ್ತು ಮೇಕೆದಾಟಿನ ಬಗ್ಗೆ ಪ್ರಶ್ನೆ ಮಾಡ್ತಿನಿ. ತಮಿಳುನಾಡಿನ ಸ್ಟಾಲಿನ್ ನೀರಿನ ವೈರತ್ವದ ಬಗ್ಗೆ ಪ್ರಧಾನಿ ಮೋದಿಗೂ ಅರ್ಥ ಆಗಿದೆ. ನಾನು 2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ ಆದರೇ ಈಬಾರಿ ವಿ.ಸೋಮಣ್ಣ ಗೆದ್ದು ದೆಹಲಿಗೆ ಹೋಗಬೇಕಿದೆ ಎಂದು ಮನವಿ ಮಾಡಿದರು.

ಸಿದ್ದರಾಮಯ್ಯನವರೇ ನೀವು ರಾಜ್ಯದ 7 ಕೋಟಿ ಜನರ ಮುಖ್ಯಮಂತ್ರಿ. 150 ಕೋಟಿ ಜನರ ಪ್ರಧಾನಮಂತ್ರಿ ನರೇಂದ್ರಮೋದಿ ಬಗ್ಗೆ ಮಾತನಾಡುವ ಮುನ್ನ ಎಚ್ಚರವಹಿಸಿ. ಸೋಮಣ್ಣ ಎಲ್ಲಿಯವನು ಅಂತಾ ನೀವು ಕೇಳ್ತಿರಾ. ನೀವು ಎಲ್ಲಿಯವರು ಬಾದಾಮಿಗೆ ಯಾಕೆ ಹೋದ್ರಿ ಹೇಳಿ. ಹೆಗಡೆ ಸಿಎಂ ಆಗಿದ್ದಾಗ ಬರಗಾಲ ಇತ್ತು ಆಗ ಅವರ ಕೇಂದ್ರ ಎಷ್ಟು ಹಣ ಕೊಡ್ತು ಅಂತಾ ಸಿದ್ದರಾಮಯ್ಯ ಹೇಳಲಿ. ನಾನು ತುಮಕೂರಿಗೆ ನೀರು ಕೋಡೋದಿಲ್ಲ ಅಂತೇಳಿ ನನ್ನ ಸೋಲಿಸಿದರು. ಈಗ ಬೆಂಗಳೂರಿನಲ್ಲಿ ಕುಡಿಯೋ ನೀರಿನ ದಂಧೆ ಎಷ್ಟು ನಡೆಯುತ್ತಿದೆ ಎಂಬುದು ಮೋದಿಯ ಗಮನಕ್ಕೆ ಹೋಗಿದೆ ಎಂದರು.

ವಿ.ಸೋಮಣ್ಣ ಮಾತನಾಡಿ, ಸಿದ್ದರಾಮಯ್ಯ ಸಿಎಂ ಮಾಡಲು 86 ಶಾಸಕರ ಸಹಿ ಹಾಕಿಸಿ ದೇವೇಗೌಡರಿಗೆ ಕೊಟ್ಟಿದ್ದು ಇದೇ ಸೋಮಣ್ಣ. ಒಂದೇ ಬೂತ್‌ನಲ್ಲಿ 2 ಸಾವಿರ ಮತಗಳ ಲೀಡ್ ಕೊಡಿಸಿದ್ದು ಇದೇ ಸೋಮಣ್ಣ. ನೀವು ಮಾತನಾಡುವಾಗ ಅವರ ಅರ್ಹತೆ ಬಗ್ಗೆ ತಿಳಿಯಬೇಕಿದೆ. ನಿಮಗೇ ಅವಕಾಶ ಸಿಗ್ತು.  ನೀವು ಮುಖ್ಯಮಂತ್ರಿ ಆಗಿದ್ದೀರಿ. ಅರ್ಹತೆ ಇದ್ದೋರಿಗೆ ಸರಿಯಾದ ಅವಕಾಶ ಸಿಗೋದಿಲ್ಲ. ನೀವು ಎಲ್ಲೋ ಕೂತಿದ್ದೀರಿ ಅಂತಾ ಇನ್ನೊಬ್ಬರನ್ನು ಟೀಕೆ ಮಾಡಬೇಡಿ ಎಂದು ಕಿಡಿಕಾರಿದರು.

ನಾವು ಬಡವರ ಮಕ್ಕಳು ನಿಮ್ಮ ಹಾಗೆ ಶ್ರೀಮಂತರ ಮಕ್ಕಳಲ್ಲ. ನಾವು ಇನ್ನೊಬ್ಬರ ಬಗ್ಗೆ ರಾಜಕೀಯ ಪ್ರೇರಿತವಾಗಿ ಮಾತನಾಡಲ್ಲ. ಸೋಮಣ್ಣ ಹಿಂದೆ ಇಡೀ ಭಾರತ ದೇಶ ಇದೆ. ನರೇಂದ್ರ ಮೋದಿ, ಅಮಿತ್‌ಶಾ ಅಂತಹ ನಾಯಕರು ಇದಾರೇ. ನನಗೇ ಸಂಸ್ಕಾರ ಹೇಳಿಕೊಟ್ಟ ದೇವೇಗೌಡರು ಜತೆಗಿದ್ದಾರೆ. ನಾನು ಯಾರ ಬಗ್ಗೆ ಟೀಕೆ ಮಾಡೋದಿಲ್ಲ ಎಂದು ಪರೋಕ್ಷವಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್‌ಗೆ ಟಾಂಗ್ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಗೋಪಾಲಯ್ಯ, ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್, ಬಿಜೆಪಿ ಮುಖಂಡ ಅನಿಲ್‌ಕುಮಾರ್, ಎಂಎಲ್‌ಸಿ ನಾರಾಯಣಸ್ವಾಮಿ, ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜಿನಪ್ಪ, ಬಿಜೆಪಿ ಯುವಧ್ಯಕ್ಷ ಶಿವಕುಮಾರ್, ಮಾಜಿ ಅಧ್ಯಕ್ಷ ಪವನಕುಮಾರ್, ಗುರುಧತ್, ದಾಸಲುಕುಂಟೆ ರಘು ಸೇರಿದಂತೆ ಇತರರು ಇದ್ದರು.

3 ಗಂಟೆ ತಡವಾಗಿ ಸಮಾವೇಶ ಆರಂಭ
ಮೈತ್ರಿಪಕ್ಷದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸೋಮವಾರ ಬೆ. 10 ಗಂಟೆಗೆ ಬರಬೇಕಿತ್ತು. ಆದರೇ ಕೆಲವು ಕಾರಣದಿಂದ 3 ಗಂಟೆ ತಡವಾಗಿ ಮಧ್ಯಾಹ್ನ 1 ಗಂಟೆಗೆ ಆಗಮಿಸಿದ ಪರಿಣಾಮ ಸಮವೇಶ ತಡವಾಗಿ ಆರಂಭವಾಯಿತು. ಹಳ್ಳಿಗಳಿಂದ ಆಗಮಿಸಿದ್ದ ನೂರಾರು ಜನ ಮುಖಂಡರು ಮತ್ತು ಕಾರ್ಯಕರ್ತರು ಬಿಸಿಲಿನ ತಾಪಕ್ಕೆ ಕಾದು ಕಾದು ಬೇಜಾರಿನಿಂದ ಹಿಂದಿರುಗಿದ ಘಟನೆ ನಡೆಯಿತು.

ಹಾಲಿ ಸಂಸದ ಬಸವರಾಜು ಗೈರು
ಮೈತ್ರಿಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಾವೇಶದಲ್ಲೂ ಗೈರಾಗಿದ್ದ ತುಮಕೂರು ಹಾಲಿ ಸಂಸದ ಜಿ.ಎಸ್.ಬಸವರಾಜು ಕೊರಟಗೆರೆಯಲ್ಲಿ ಸೋಮವಾರ ನಡೆದ ಮಾಜಿ ಪ್ರಧಾನಿಗಳ ಸಮಾವೇಶದಲ್ಲೂ ಮತ್ತೆ ಗೈರು. ಕೊರಟಗೆರೆಯಲ್ಲಿ ನಡೆದ ವಿ.ಸೋಮಣ್ಣನವರ ಸುದ್ದಿಗೋಷ್ಟಿ ಸೇರಿದಂತೆ ಕೊರಟಗೆರೆ ಕ್ಷೇತ್ರದ ಬೂತ್‌ಮಟ್ಟದ ಸಭೆ ಮತ್ತು ಗ್ರಾಪಂಮಟ್ಟದ ಯಾವುದೇ ಸಮಾರಂಭದಲ್ಲಿ ಭಾಗವಹಿಸದೇ ಇರುವುದು ಹಲವು ಅನುಮಾನಕ್ಕೆ ಕಾರಣವಾಗಿ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.