ಸರ್ಕಾರಿ ಆಸ್ಪತ್ರೆ ಗುತ್ತಿಗೆ ನೌಕರರಿಗೆ ಸಿಗುತ್ತಿಲ್ಲ ಸಂಬಳ!

ಐದು ತಿಂಗಳಿನಿಂದ ವೇತನ ನೀಡದೇ ನಿರ್ಲಕ್ಷ್ಯ

Team Udayavani, Sep 20, 2019, 5:45 PM IST

tk-tdy-2

ಹುಳಿಯಾರು: ಹೋಬಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ ತಾಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ ಸಿಬ್ಬಂದಿಗೆ ಏಳೆಂಟು ತಿಂಗಳಿಂದ ಸಂಬಳ ನೀಡದೇ ನಿರ್ಲಕ್ಷಿಸಲಾಗಿದೆ.

ಚಿಕ್ಕನಾಯಕನಹಳ್ಳಿ ಜನರಲ್‌ ಆಸ್ಪತ್ರೆ ಸೇರಿ ಜೆ.ಸಿ.ಪುರ, ಹುಳಿಯಾರು, ದಸೂಡಿ, ಯಳನಡು, ಹಂದನಕೆರೆ, ಮತಿಘಟ್ಟ, ಶೆಟ್ಟಿಕೆರೆ, ತೀರ್ಥ ಪುರ, ತಿಮ್ಮನಹಳ್ಳಿ, ಕಂದಿಕೆರೆ, ಗೋಡೆಕೆರೆ ಆಸ್ಪತ್ರೆಗಳಲ್ಲಿ ಗುತ್ತಿಗೆ ನೌಕರರು ಕೆಲಸ ನಿರ್ವ ಹಿಸುತ್ತಿದ್ದಾರೆ. ಚಿ.ನಾ.ಹಳ್ಳಿಯಲ್ಲಿ 6 ಹಾಗೂ ಹುಳಿಯಾರಿನಲ್ಲಿ 4 ಸಿಬ್ಬಂದಿ ಬಿಟ್ಟರೆ ಉಳಿದ ಆಸ್ಪತ್ರೆಯಲ್ಲಿ ಒಬ್ಬರು ಅಥವಾ ಇಬ್ಬರು ಕೆಲಸ ನಿರ್ವಹಿಸುತ್ತಿದ್ದು ಒಟ್ಟು 25 ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ.

ಆರೋಗ್ಯ ಸೇವೆಯಲ್ಲಿ ವ್ಯತ್ಯಯ: ಕಳೆದ ವರ್ಷ ಟೋಟಲ್‌ ಸೆಲ್ಯೂಷನ್‌ನಿಂದ ತಾಲೂಕಿನ ಆಸ್ಪತ್ರೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೌಕರರ ನಿಯೋಜಿಸ ಲಾಗಿದ್ದು, ಜೂನ್‌ 2019ರಿಂದ ಕಿಯೋನಿಕ್ಸ್‌ ವತಿಯಿಂದ ಹೊರ ಗುತ್ತಿಗೆ ಆಧಾರದ ಮೇಲೆ ನೇಮಿಸಿ ಕೊಳ್ಳಲಾಗಿದೆ. ಇವರೆಲ್ಲರಿಗೂ ಕಿಯೋನಿಕ್ಸ್‌ 10ರಿಂದ 11 ಸಾವಿರ ರೂ. ಸಂಭಾವನೆ ಪ್ರತಿ ತಿಂಗಳ 5ನೇ ತಾರೀಕಿನೊಳಗೆ ಸಂಭಾವನೆ ಕೊಡುವುದಾಗಿಯೂ ಭರವಸೆ ನೀಡಿ ನೇಮಕ ಮಾಡಿಕೊಂಡಿದೆ. ಹಿಂದಿನ ಟೋಟಲ್‌ ಸೆಲ್ಯೂಷನ್‌ 5 ತಿಂಗಳು ವೇತನ ನೀಡದೆ ನಿರ್ಲಕ್ಷಿಸಿದ್ದರೆ, ಕಿಯೋನಿಕ್ಸ್‌ 3 ತಿಂಗಳಿಂದ ವೇತನ ನೀಡದೆ ಸತಾಯಿಸುತ್ತಿದೆ. ಹಾಗಾಗಿಯೇ ಕೆಲವರು ಕೆಲಸವನ್ನೇ ಬಿಟ್ಟಿದ್ದಾರೆ. ಇದರಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾದರೂ ಮೇಲಧಿ ಕಾರಿಗಳು, ಜನಪ್ರತಿನಿಧಿಗಳು ಕಂಡೂ ಕಾಣದಂತೆ

ಮೌನಕ್ಕೆ ಶರಣಾಗಿದ್ದಾರೆ.

ಸಂಬಳವಿಲ್ಲದೆ ಶೋಚನೀಯ ಸ್ಥಿತಿ: ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ದಿನನಿತ್ಯ ಆಸ್ಪತ್ರೆ ಸ್ವತ್ಛತೆ, ವೈದ್ಯರಿಗೆ ಸಕಾಲಕ್ಕೆ ಟೀ, ಕಾಫಿ, ಬಿಸ್ಕೇಟ್‌, ರೋಗಿಗಳ ಬಗ್ಗೆ ಕಾಳಜಿ, ಲ್ಯಾಬೋ ರೇಟರಿಯಲ್ಲಿ ಉತ್ಪತ್ತಿಯಾದ ತ್ಯಾಜ್ಯ, ರಕ್ತ ಪರೀಕ್ಷೆ ಮಾಡುವ ಸ್ಲೆ çಡ್‌ ತೊಳೆಯುವುದು, ಆಸ್ಪತ್ರೆಯಲ್ಲಿನ ಬೆಡ್‌ ಸ್ವತ್ಛವಾಗಿಡುವುದು, ನೆಲ ಒರೆಸುವುದು ಸೇರಿ ಹತ್ತು ಹಲವಾರು ಕೆಲಸಗಳಲ್ಲಿ ತೊಡಗಿಕೊಂಡವರ ಸ್ಥಿತಿ ಸಂಬಳವಿಲ್ಲದೆ ಶೋಚನೀಯವಾಗಿದೆ.

ಸಾಲ ಪಡೆಯುವ ದುಸ್ಥಿತಿ: ಈ ಕೆಲಸವನ್ನೇ ನೆಚ್ಚಿಕೊಂಡಿರುವ ನೌಕರರ ಪಾಡು ಹೇಳತೀರದಾಗಿದೆ. ಮಕ್ಕಳ ಶಾಲೆಯ ಶುಲ್ಕ, ಪೋಷಕರ ಔಷಧೋಪಚಾರ ಹಾಗೂ ತಿಂಗಳ ರೇಷನ್‌ ತರುವುದಕ್ಕೂ ಕಷ್ಟವಾಗಿ ಮತ್ತೂಬ್ಬರ ಬಳಿ ಕೈಯೊಡ್ಡುವ ದುಸ್ಥಿತಿ ನಿರ್ಮಾಣ ವಾಗಿದೆ. ಐದಾರು ತಿಂಗಳಿಂದ ಸಾಲ ಮಾಡಿ ಸಂಸಾರ ತೂಗಿಸಿದ್ದು, ಈಗ ಕೆಲವರು ಸಾಲ ಹಿಂದಿರುಗಿಸು ವಂತೆಯೂ, ಹೊಸದಾಗಿ ಮತ್ಯಾರೂ ಸಾಲ ಕೊಡದಂತೆಯೂ ಆಗಿದ್ದು, ನಮ್ಮ ಬಗ್ಗೆ ತಲೆಕೆಡಿಸಿ ಕೊಳ್ಳುವವರೇ ಇಲ್ಲದಂತಾಗಿದೆ ಎಂದು ಕೆಲ ನೌಕರರು ಅಳಲು ತೋಡಿಕೊಂಡಿದ್ದಾರೆ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.