ನೀರು, ಮೇವಿಲ್ಲದೇ ಜಾನುವಾರುಗಳಿಗೆ ಸಂಕಷ್ಟ

ಜಿಲ್ಲೆ ಬಿಟ್ಟು ವಲಸೆ ಹೋಗುತ್ತಿದ್ದಾರೆ ಕುರಿಗಾಯಿಗಳು • ದನಕರುಗಳನ್ನು ಉಳಿಸಿಕೊಳ್ಳಲು ರೈತರು ಪರದಾಟ

Team Udayavani, May 18, 2019, 4:48 PM IST

tumkur-tdy-1..

ಮೇವು, ನೀರಿ ಇಲ್ಲದೇ ಅಲೆದಾಡುತ್ತಿರುವ ಕುರಿಗಳು

ತುಮಕೂರು: ಬಹುತೇಕ ಬಯಲು ಸೀಮೆ ಪ್ರದೇಶ ವಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಬರದ ಸಿಡಿಲು ಜಾನುವಾರುಗಳ ಮೇಲೆ ತೀವ್ರವಾಗಿ ಪರಿಣಾಮ ಬೀರಿದೆ. ದನ, ಕರುಗಳನ್ನು ಸಾಕಲು ರೈತರು ಪಡಬಾರದ ಪಾಟಲು ಬೀಳುತ್ತಿದ್ದಾರೆ. ಎಲ್ಲಿ ಹೋದರೂ ಮೇವಿಲ್ಲ, ನೀರಿಲ್ಲ. ಅಲ್ಪ ಸ್ವಲ್ಪ ಮೇವಾ ದರೂ ಹೊಲದಲ್ಲಿ ಬರುತ್ತದೆ ಎಂದು ನಿರೀಕ್ಷಿಸಿದ್ದವರಿಗೆ ಅದು ಇಲ್ಲದಂತಾಗಿ ಮೇವು ಬ್ಯಾಂಕ್‌ಗಳು ತೆರೆದಿ ದ್ದರೂ, ದೂರದ ಊರಿನ ಜನರು ಜಾನುವಾರುಗಳಿಗೆ ಮೇವು ತರಲು ತೊಂದರೆಯಾಗು ತ್ತಿದೆ. ಮೇ ನಂತರ ಬಿಸಿಲಿನ ಬೇಗೆ ಇನ್ನೂ ಹೆಚ್ಚಾದರೆ, ಜಾನುವಾರುಗಳ ಕುಡಿಯುವ ನೀರು, ಮೇವಿಗಾಗಿ ರೈತರು ತೀವ್ರ ತೊಂದರೆ ಅನುಭವಿಸಲಿದ್ದಾರೆ.

ಕೃಷಿ ಪ್ರಧಾನವಾಗಿರುವ ಜಿಲ್ಲೆಯ ರೈತರು ದನಕರು ಗಳನ್ನು ಕಟ್ಟಿಕೊಂಡು ಕೃಷಿ ಚಟುವಟಿಕೆ ಈ ಹಿಂದಿ ನಿಂದಲೂ ಮಾಡಿಕೊಂಡು ಬರುತ್ತಿದ್ದು, ಇತ್ತೀಚಿನ ವೈಜ್ಞಾನಿಕತೆ ಬೆಳೆದಂತೆ ಹೆಚ್ಚು ಕೃಷಿ ಕೆಲಸದಲ್ಲಿ ತೊಡಗುತ್ತಿದ್ದ ಸ್ವದೇಶಿ ತಳಿಗಳಾದ ಅಮೃತ್‌ ಮಹಲ್, ಹಳ್ಳಿಕಾರ್‌ ತಳಿಗಳನ್ನು ಸಾಕಲಾರದೆ ದಿನೇ ದಿನೆ ಮಾರಾಟ ಮಾಡುತ್ತಿದ್ದಾರೆ. ಅಳಿದುಳಿದು ಇರುವ ದನಕರುಗಳನ್ನು ಉಳಿಸಿಕೊಂಡರೆ ಸಾಕಪ್ಪಾ ಎನ್ನುವುದು ರೈತರ ಮನದಾಳದ ಮಾತಾಗಿದೆ.

ಯಾವ ಹಳ್ಳಿಗೆ ಹೋದರೂ ದನಕರುಗಳ ಹಿಂಡು, ಹಿಂಡು ಗೋ ಮಾಳದ ಕಡೆಗೆ ಮೇಯಲು ಹೋಗು ತ್ತಿದ್ದುದು ಸಾಮಾನ್ಯವಾಗಿ ಕಂಡು ಬರುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಗೋ ಮಾಳಗಳು, ಗೋ ಕಟ್ಟೆಗಳನ್ನು ಭೂಗಳ್ಳರು ಅಕ್ರಮವಾಗಿ ವಶಪಡಿಸಿ ಕೊಂಡಿರುವಂತೆಯೇ ಸಕಾಲದಲ್ಲಿ ಮಳೆಯಾಗದೇ ದನಕರುಗಳಿಗೆ ಮೇವು ಸಿಗದೆ ಸಂಕಷ್ಟ ದಿನಗಳು ದಿನೇ ದಿನೆ ಹೆಚ್ಚುತ್ತಿವೆ.

ಜಿಲ್ಲೆಯಲ್ಲಿ ಎಷ್ಟಿವೆ ಜಾನುವಾರುಗಳು?: ಜಿಲ್ಲೆಯಲ್ಲಿ ಕಳೆದ 2012ರ ಜಾನುವಾರು ಜನಗಣತಿಯಂತೆ ಜಿಲ್ಲೆಯಲ್ಲಿ 5.27.067 ದನಗಳಿದ್ದು, 1.81.118 ಎಮ್ಮೆಗಳಿವೆ. ಇದಲ್ಲದೇ 10.61.330 ಕುರಿಗಳು, 3.26.890 ಮೇಕೆಗಳು ಜಿಲ್ಲೆಯಲ್ಲಿವೆ. ರಾಜ್ಯದಲ್ಲೇ ಅತಿ ಹೆಚ್ಚು ಕುರಿ ಸಾಕಾಣಿಕೆಯ ಜಿಲ್ಲೆ ಎನ್ನುವ ಹೆಸರು ಪಡೆದಿದ್ದು, ಜಿಲ್ಲೆಯಲ್ಲಿ 10.61.330 ಕುರಿಗಳಿರುವುದು ವಿಶೇಷವಾಗಿದೆ.

ಪ್ರತಿವರ್ಷ ಮಳೆಗಾಲದಲ್ಲಿ ಕನಿಷ್ಠ ದನಕರುಗಳಿಗೆ ಮೇವಾಗುವಂತೆ ಅಲ್ಲಲ್ಲಿ ಮಳೆಯಾಗುತ್ತಿತ್ತು. ತುಂತುರು ಮಳೆ ಬಿದ್ದು ಕನಿಷ್ಠ ಸೈಕ್ಲೋನ್‌ ಆದರೂ ಬಂದು ಅಲ್ಲಲ್ಲಿ ಹಸಿರು ಹುಲ್ಲು ದನ, ಎಮ್ಮೆ, ಕುರಿ ಮೇಕೆಗಳಿಗೆ ಸಿಗುತ್ತಿತ್ತು. ಆದರೆ, ಈ ವರ್ಷ ಮೇ ತಿಂಗಳು ಬಂದರೂ ಮಳೆ ಕೊರತೆಯುಂಟಾಗಿ ಬಿಸಿಲ ಝಳ ತೀವ್ರವಾಗಿ ದನ ಕರುಗೆ ಮೇವು ಸಿಗದಂತಾಗಿದೆ.

ಜಾನುವಾರಿಗೆ ಮೇವಿನ ಭೀಕರತೆ ಹೆಚ್ಚಲಿದೆ: ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಈ ವರ್ಷ ಮಳೆ ಇಲ್ಲದೇ ಯಾವ ರೈತರು ಬಣವೆಗಳನ್ನು ಒಟ್ಟಿ ಹುಲ್ಲು ಶೇಖರಣೆ ಮಾಡಿಕೊಂಡಿಲ್ಲ. ಅಲ್ಲಲ್ಲಿ ಅಲ್ಪ, ಸ್ವಲ್ಪ ಇದ್ದ ಮೇವನ್ನು ಮಾರ್ಚ್‌ವರೆಗೆ ಕೆಲ ತಾಲೂಕುಗಳಲ್ಲಿ ರೈತರು ಜಾನುವಾರುಗಳ ನಿಗಾ ವಹಿಸುವರು. ಆದರೆ, ಮೇ ಅಂತ್ಯಕ್ಕೆ ಜಾನುವಾರುಗಳಿಗೆ ಮೇವಿನ ಸಮಸ್ಯೆ ಇನ್ನೂ ತೀವ್ರಗೊಳ್ಳಲಿದೆ. ಇಲಾಖೆ ಅಧಿಕಾರಿಗಳು ಹೇಳುವಂತೆ ಇನ್ನು 11 ವಾರಗಳು ಅಲ್ಲಲ್ಲಿ ಮೇವು ಲಭ್ಯವಾಗಲಿದೆ ಎನ್ನುತ್ತಾರೆ. 264519 ಟನ್‌ ಒಣ ಮೇವು ಇದೆ, 586771 ಟನ್‌ ಹಸಿ ಮೇವು ಉತ್ಪಾದನೆಯಾಗುತ್ತದೆ ಎಂದು ಹೇಳುತ್ತಾರೆ.

ಜಿಲ್ಲೆಯ ಮಧುಗಿರಿ, ಕೊರಟಗೆರೆ, ಪಾವಗಡ, ಚಿಕ್ಕನಾಯಕನಹಳ್ಳಿ, ಸಿರಾ ಮತ್ತು ತಿಪಟೂರು ತಾಲೂಕುಗಳಲ್ಲಿ 21 ಮೇವು ಬ್ಯಾಂಕ್‌ಗಳನ್ನು ತೆರೆಯ ಲಾಗಿದೆ. ಇನ್ನು 8 ಮೇವು ಬ್ಯಾಂಕ್‌ ತೆರೆಯಲು ಸ್ಥಳ ಗುರುತಿಸಲಾಗಿದೆ. ಜಾನುವಾರುಗಳಿಗೆ ಕುಡಿಯುವ ನೀರನ ವ್ಯವಸ್ಥೆಗಾಗಿ ಜನವಸತಿ ಪ್ರದೇಶದಲ್ಲಿ ನೀರಿನ ತೊಟ್ಟಿಗಳನ್ನು ನಿರ್ಮಾಣ ಮಾಡಲಾಗಿದೆ.

13 ಲಕ್ಷ ಕುರಿ ಮೇಕೆಗಳು ಮೇವಿಗಾಗಿ ಪರದಾಟ: ರಾಜ್ಯದಲ್ಲಿಯೇ ಅತಿ ಹೆಚ್ಚು ಕುರಿಸಾಕಾಣಿಕೆ ಹೆಸರಾಗಿ ರುವ ತುಮಕೂರು ಜಿಲ್ಲೆಯಲ್ಲಿ ಕುರಿ ಸಾಕಾಣಿಕೆ ದಾರರು ಈಗ ಸಂಕಷ್ಟ ಪಡುವ ದಿನ ಎದುರಾರಿದೆ. ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 10.61.330 ಕುರಿಗಳಿದ್ದು, ಈಗ ಈ ಕುರಿಗಳ ಸಂಖ್ಯೆ ಇನ್ನು ಹೆಚ್ಚಾಗಿದೆ. ಜಿಲ್ಲೆಯ ಸಿರಾ, ಮಧುಗಿರಿ, ಚಿಕ್ಕನಾಯಕನ ಹಳ್ಳಿ, ಪಾವಗಡ ಸೇರಿದಂತೆ ವಿವಿಧ ಕಡೆಗಳಲ್ಲಿ ಹೆಚ್ಚು ಕುರಿ, ಮೇಕೆ, ಸಾಕಾಣಿಕೆಗಾರರು ಇದ್ದು, ತಮ್ಮ ಗ್ರಾಮ ದಲ್ಲಿ ಸಿಗುವ ಹಸಿಮೇವನ್ನು ತಿನ್ನಿಸಿ, ಸಾಕಿ ಸಲುಹಿ, ತಮ್ಮಗೆ ಹಣದ ಅವಶ್ಯಕತೆ ಇರುವಾಗ ಮಾರಾಟ ಮಾಡುತ್ತಿದ್ದರು. ಆದರೆ, ಈಗ ಬರದಿಂದ ಮೇವು ಸಿಗದಂತಾಗಿದೆ. ಕುರಿ ಹಿಂಡನ್ನು ಬೇರೆ ಬೇರೆ ಭಾಗ ಗಳಿಗೆ ಹೊಡೆದುಕೊಂಡು ಹೋಗಿ ಸಾಕುವ ಪರಿಸ್ಥಿತಿ ಬಂದಿದೆ. ನೂರಾರು ಕುರಿಗಳೊಂದಿಗೆ ಕುರಿಗಾಹಿಗಳು ಹುಲ್ಲು ಸಿಗುವ ಕಡೆಗಳಿಗೆ ಹೋಗುತ್ತಿರುವುದು, ಜಿಲ್ಲೆಯಲ್ಲಿ ಕಂಡುಬಂದಿದೆ.

ಇದಲ್ಲದೇ 3.26.890 ಮೇಕೆಗಳು ಜಿಲ್ಲೆಯಲ್ಲಿದ್ದು, ಈ ಮೇಕೆಗಳನ್ನು ಬೇರೆಕಡೆ ಹೊಡೆದುಕೊಂಡು ಹೋಗಲು ಸಾಧ್ಯವಾಗದೇ ಸ್ಥಳೀಯ ವಾಗಿಯೇ ಸಿಗುವ ಸೊಪ್ಪು ಸೆದೆಗಳನ್ನು ತಿಂದು ಬದುಕುತ್ತಿದ್ದವು. ಆದರೆ, ಈಗ ಈ ಮೇಕೆಗಳಿಗೂ ಸೊಪ್ಪು ಸಿಗದ ಸ್ಥಿತಿಯಾಗಿದೆ. ಆದರಿಂದ ಕುರಿ, ಮೇಕೆಗಳು ಮೇವು ಮತ್ತು ಕುಡಿಯುವ ನೀರಿಗಾಗಿ ಪರಿತಪ್ಪಿಸುತ್ತಿವೆ.

ಜಿಲ್ಲೆಯಲ್ಲಿ ಆವರಿಸಿದೆ ಭೀಕರ ಬರ: ಕಳೆದ 40 ವರ್ಷಗಳಲ್ಲಿ ಕಂಡಿರದಷ್ಟು ಭೀಕರ ಬರ ಜಿಲ್ಲೆಯನ್ನು ಆವರಿಸಿದ್ದು, 10 ತಾಲೂಕುಗಳಲ್ಲಿಯೂ ಬರ ಪೀಡಿತ ತಾಲೂಕುಗಳಾಗಿವೆ. ಜಾನುವಾರುಗಳಿಗೆ ನೀರು ಮೇವಿನ ಸಂಕಷ್ಟ ತೀವ್ರವಾಗಿದೆ. ಜಿಲ್ಲೆಯ 21 ಕಡೆಗಳಲ್ಲಿ ಆರಂಭ ಮಾಡಿರುವ ಮೇವು ಬ್ಯಾಂಕ್‌ಗಳು ಇನ್ನು ಹೆಚ್ಚು ಕಡೆಗಳಲ್ಲಿ ಪ್ರಾರಂಭ ಮಾಡಬೇಕು. ಅಗತ್ಯವಿರುವ ಕಡೆ ಗೋ ಶಾಲೆಗಳನ್ನು ಆರಂಭಿಸ ಬೇಕು. ಕುರಿಮೇಕೆಗಳಿಗೂ ನೀರು ಮತ್ತು ಮೇವಿಗೆ ತೊಂದರೆಯಾಗದಂತೆ ಜಿಲ್ಲಾಡಳಿತ ಇನ್ನು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.

● ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.