![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ವಾರಕ್ಕೆರಡು ಬಾರಿ ತಾಲೂಕಿಗೆ ಭೇಟಿ ನೀಡಿ
Team Udayavani, Sep 8, 2020, 4:30 PM IST
![ವಾರಕ್ಕೆರಡು ಬಾರಿ ತಾಲೂಕಿಗೆ ಭೇಟಿ ನೀಡಿ](https://www.udayavani.com/wp-content/uploads/2020/09/TK-TDY-1-6-620x372.jpg)
ತುಮಕೂರು: ಲಾಕ್ಡೌನ್ ನಿಯಮಗಳ ಪಾಲನೆ ಮತ್ತು ಸ್ಮಾರ್ಟ್ಸಿಟಿ ಕಾಮಗಾರಿಗಳ ಹಿನ್ನೆಲೆಯಲ್ಲಿ ವ್ಯವಹಾರವಿಲ್ಲದೆ ಇರುವುದರಿಂದ ಬಾಡಿಗೆ ಮನ್ನಾ ಮಾಡುವಂತೆ ಒತ್ತಾಯಿಸಿ ಖಾಸಗಿ ಬಸ್ ನಿಲ್ದಾಣದ ಮಳಿಗೆಗಳ ಬಾಡಿಗೆದಾರರು ಮಹಾ ನಗರ ಪಾಲಿಕೆ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಮಳಿಗೆಗಳನ್ನು ಬಾಡಿಗೆ ಪಡೆದ ಕೆಲ ದಿನಗಳಲ್ಲೇ ಲಾಕ್ ಡೌನ್ ಘೋಷಿಸಲಾಯಿತು. ಸರ್ಕಾರಿ ಆದೇಶದಂತೆ ಮಳಿಗೆಗಳನ್ನು ಬಂದ್ ಮಾಡಿದೆವು. ಇದರ ನಡುವೆ ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಲೇ ಇವೆ. ಅಂಗಡಿಗಳ ಬಾಗಿಲು ಮುಚ್ಚಿದ್ದು ಆರ್ಥಿಕ ನಷ್ಟವನ್ನು ಅನುಭವಿಸುತ್ತಿದ್ದೇವೆ. ಇದರಿಂದ ಚೇತರಿಸಿಕೊಳ್ಳಲು ಹಲವು ತಿಂಗಳುಗಳೇ ಬೇಕು. ಹಾಗಾಗಿ ಬಾಡಿಗೆ ಮನ್ನ ಮಾಡಿ ವ್ಯಾಪಾರಿಗಳ ನೆರವಿಗೆ ಬರುವಂತೆ ಆಗ್ರಹಿಸಿದರು.
ಕಾಮಗಾರಿ ನಡೆಯುತ್ತಿರುವುದರಿಂದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇರುವ ಅಂಗಡಿ ಮಳಿಗೆಗಳ ಬಾಡಿಗೆ ಹಣವನ್ನು ನಿಗಮವು ಮನ್ನಾ ಮಾಡಿ ಬಾಡಿಗೆದಾರರಿಗೆ ಅನುಕೂಲ ಮಾಡಿಕೊಟ್ಟಿದೆ. ಅದೇ ರೀತಿ ಖಾಸಗಿ ಬಸ್ ನಿಲ್ದಾಣದಲ್ಲಿನ ಮಳಿಗೆಗಳ ಬಾಡಿಗೆದಾರರೂ ಕೂಡಾ ವ್ಯವಹಾರವಿಲ್ಲದೆ ಸಂಕಷ್ಟದಲ್ಲಿದ್ದು ಮಾರ್ಚ್-ಆಗಸ್ಟ್ ವರೆಗಿನ ಬಾಡಿಗೆ ಮನ್ನ ಮಾಡಬೇಕು ಎಂದು ಮನವಿ ಮಾಡಿದರು. ವ್ಯಾಪಾರವಿಲ್ಲದೇ ಬಾಡಿಗೆ ಹಣವನ್ನು ಕಟ್ಟಲು ಸಾಧ್ಯವಿಲ್ಲ. ಪಾಲಿಕೆ ಮತ್ತು ಸರ್ಕಾರ ನಮ್ಮ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು. ಸೆಪ್ಟೆಂಬರ್ ನಿಂದ ಡಿಸೆಂಬರ್ 31ರವರೆಗೆ ಬಾಡಿಗೆ ಹಣದಲ್ಲಿ ಶೇ.10ರಷ್ಟು ಹಣವನ್ನು ಬಾಡಿಗೆ ರೂಪದಲ್ಲಿ ಕಟ್ಟಲು ಅವಕಾಶ ಮಾಡಿಕೊಡಬೇಕು. ಮಾಸಿಕ ಸೇವಾ ಸುಂಕವನ್ನು ಶೇ.18ರಷ್ಟು ಪಡೆಯುತ್ತಿದ್ದು ಅದನ್ನು ವರ್ಷಕ್ಕೊಮ್ಮೆ ಮಾತ್ರೆ ತೆಗೆದುಕೊಳ್ಳಬೇಕು. ಲಾಕ್ಡೌನ್ಗೂ ಹಿಂದೆ ಇದ್ದ ಬಾಡಿಗೆ ಹಣವನ್ನು ಕಟ್ಟಲು ಬಡ್ಡಿರಹಿತವಾಗಿ ಒಂದು ವರ್ಷ ಕಾಲಾವಕಾಶ ನೀಡಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.