ಕುಣಿಗಲ್: ಬಾಲ್ಯ ವಿವಾಹವನ್ನು ತಡೆದ ಅಧಿಕಾರಿಗಳು
Team Udayavani, Jun 21, 2022, 1:07 PM IST
ಕುಣಿಗಲ್: ತುಮಕೂರು ತಾಲೂಕು ಹೆಬ್ಬೂರು ಹೋಬಳಿ ದೊಡ್ಡಯ್ಯನಕಟ್ಟೆ ಪಾಳ್ಯದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ಕಾರ್ಯಚರಣೆ ನಡೆಸಿ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹೆಬ್ಬೂರು ಹೋಬಳಿ ರಾಜಾಪುರ ಗ್ರಾಮದ ಯುವಕ ಕುಣಿಗಲ್ ಪಟ್ಟಣದ ವಾರ್ಡ್ ನಂ 1 ಬಿದನಗೆರೆ ಗ್ರಾಮದ ಯುವತಿಯೊಂದಿಗೆ ನಿಶ್ಚಿತವಾಗಿದ್ದ.
ತಾಲೂಕಿನ ಹೆಬ್ಬೂರು ಹೋಬಳಿ ದೊಡ್ಡಯ್ಯನಕಟ್ಟೆ ಪಾಳ್ಯ ಗ್ರಾಮದ ಲಕ್ಷ್ಮಿವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಪ್ರಥಮ ಶಾಸ್ತ್ರ ಹಾಗೂ ಬುಧವಾರ ಮುಹೂರ್ತ ಇಟ್ಟುಕೊಳ್ಳಲಾಗಿತ್ತು, ಯುವತಿಗೆ 17 ವರ್ಷ 2 ತಿಂಗಳಾಗಿದ್ದು ಯುವತಿಗೆ 18 ವರ್ಷ ತುಂಬದ ಹಿನ್ನೆಲೆಯಲ್ಲಿ ಬಾಲ್ಯ ವಿವಾಹವಾಗಿರುವ ಬಗ್ಗೆ ಸ್ಥಳೀಯರು ದೂರು ನೀಡಿದ್ದರು.
ನೀಡಿದ ದೂರಿನ ಅನ್ವಯ ಸಿಡಿಪಿಓ ಅನುಷಾ, ಪಿಎಸ್ಐ ಲಕ್ಷ್ಮಣ್ , ಬಾಲ್ಯ ವಿವಾಹವಾದರೆ ಕಾನೂನು ಪ್ರಕಾರ ಕಠಿಣ ಕ್ರಮಕ್ಕೆ ಒಳಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಅಧಿಕಾರಿಗಳು, ಬಳಿಕ ವಧು ಹಾಗೂ ವರನ ಪೋಷಕರಿಂದ ಮುಚ್ಚಳಿಕೆ ಬರೆಸಿಕೊಂಡು ವಿವಾಹವನ್ನು ತಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !