ಒಮಿಕ್ರಾನ್‌: ಮೈಮರೆತು ಓಡಾಡುತ್ತಿರುವ ಜನ


Team Udayavani, Dec 24, 2021, 1:31 PM IST

omicron

Representative Image used

ತುಮಕೂರು: ಕಲ್ಪತರು ನಾಡಿನಲ್ಲಿ ಹಂತ-ಹಂತವಾಗಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಮಿಕ್ರಾನ್‌ ಸೋಂಕಿತರು ಕಂಡು ಬಂದಿದ್ದು, ಸದ್ಯ ಇನ್ನು ಜಿಲ್ಲೆಗೆ ಈ ಸೋಂಕು ವ್ಯಾಪಿಸಿಲ್ಲ. ಆದರೆ, ಜಿಲ್ಲೆಯ ಜನ ಕೊರೊನಾ ಮರೆತು ಎಂದಿನಂತೆ ಅಡ್ಡಾಡು ತ್ತಿರುವುದು ಮತ್ತೆ ಎಲ್ಲಿ ಕೊರೊನಾ ಒಕ್ಕರಿಸುತ್ತೋ ಎನ್ನುವ ಭೀತಿ ಉಂಟಾಗಿದೆ.

ಕೊರೊನಾ ವೈರಸ್‌ ನಿಯಂತ್ರಣ ಆಗಬೇಕಾದರೆ 18 ವರ್ಷ ಮೇಲ್ಪಟ್ಟವರಿಂದ ಎಲ್ಲರಿಗೂ ಲಸಿಕೆ ನೀಡುತ್ತಿದ್ದು, ಜಿಲ್ಲೆಯಲ್ಲಿ ಜನ ಕೊರೊನಾ ನಿಯಂತ್ರಣ ಮಾಡಲು ಶೇ.95ರಷ್ಟು ಮೊದಲ ಡೋಸ್‌ ಲಸಿಕೆ ಪಡೆದು ಕೊಂಡಿದ್ದಾರೆ. ಆದರೆ, ಎರಡನೇ ಡೋಸ್‌ ಇನ್ನು ಶೇ.71ರಷ್ಟು ಜನ ಪಡೆದಿದ್ದು, ಕೊರೊನಾ, ಒಮಿಕ್ರಾನ್‌ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆಯುವುದು ಅತೀ ಮುಖ್ಯವಾಗಿದೆ.

ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಮನವಿ: ಕೆಲವು ಜನರು ಇನ್ನು ಮೂಢನಂಬಿಕೆಗೆ ಕಟ್ಟು ಬಿದ್ದಿದ್ದು, ಎಷ್ಟೇ ಪ್ರಚಾರ ಮಾಡಿದರೂ ಜನ ಲಸಿಕೆ ಪಡೆಯಲು ಬರಲಿಲ್ಲ, ಲಸಿಕಾ ಅಭಿಯಾನದ ಮೂಲಕ ಜಿಲ್ಲಾಡಳಿತ ಎಲ್ಲ ರೀತಿಯಿಂದಲೂ ಜನರಿಗೆ ಲಸಿಕೆ ನೀಡುತ್ತಿದೆ. ಪ್ರಾರಂಭದಿಂದಲೂ ಜನರಿಗೆ ಕೊರೊನಾ ಲಸಿಕೆಯನ್ನು ನೀಡುತ್ತಲೇ ಬಂದಿದ್ದು, ಈಗ ಸಾಕಷ್ಟು ಲಸಿಕೆ ಇರುವುದರಿಂದ ಜನರು ಲಸಿಕೆ ಹಾಕಿಸಿಕೊಳ್ಳಲು ಎಲ್ಲಿಯೂ ಕಾಯುವ ಅಗತ್ಯವಿಲ್ಲ.

ಲಸಿಕಾ ಕೇಂದ್ರಕ್ಕೆ ಹೋದ ತಕ್ಷಣ ಲಸಿಕೆ ಹಾಕುತ್ತಿದ್ದು, ಮೊದಲನೇ ಡೋಸ್‌ ಪಡೆಯದಿದ್ದರೆ ಅವರೂ ಮತ್ತು ಎರಡನೇ ಡೋಸ್‌ ಲಸಿಕೆ ಪಡೆಯಬೇಕಾದವರು ಕೊರೊನಾ ಲಸಿಕೆ ಪಡೆದು ರೋಗ ಹರಡದಂತೆ ಜಾಗೃತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ್‌ ಮನವಿ ಮಾಡಿದ್ದಾರೆ.

33.24 ಲಕ್ಷ ಜನರಿಗೆ ಲಸಿಕೆ: ಜಿಲ್ಲೆಯಲ್ಲಿ ಡಿ. 21ಕ್ಕೆ ಮೊದಲ ಮತ್ತು ಎರಡನೇ ಡೋಸ್‌ ಕೊರೊನಾ ಲಸಿಕೆ ಸೇರಿ 33,24, 420 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. 10 ತಾಲೂಕುಗಳಲ್ಲೂ ಜನರಿಗೆ ತಕ್ಷಣ ಲಸಿಕೆ ಸಿಗುವ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ಕಡೆ ಮೊದಲ ಡೋಸ್‌ ಲಸಿಕೆ ಶೇ. 95ಕ್ಕೂ ಹೆಚ್ಚು ಪ್ರಗತಿ ಆಗಿದೆ.

ಯಾವುದೇ ಅಡ್ಡ ಪರಿಣಾಮ ವಿಲ್ಲದ ಲಸಿಕೆಯನ್ನು ಪಡೆದುಕೊಳ್ಳುವ ಮೂಲಕ ಕೊರೊನಾ ಸೋಂಕು ಬಂದರೂ ಗುಣಮುಖರಾಗುತ್ತಿರುವುದನ್ನು ಗಮನಿಸಿದ ಜನರು, ಈಗ ಕೋವಿಡ್‌ ಲಸಿಕಾ ಕೇಂದ್ರಗಳಿಗೆ ಬಂದು ಲಸಿಕೆ ಪಡೆಯಲು ಮುಂದಾಗ ಬೇಕಾಗಿದೆ. ಮೊದಲ ಡೋಸ್‌ 19.04 ಲಕ್ಷ ಜನರು ಪಡೆದಿದ್ದು, ಶೇ. 95ರಷ್ಟು ಎರಡನೇ ಡೋಸ್‌ 14.20 ಲಕ್ಷ ಜನರು ಪಡೆದು ಶೇ. 71ರಷ್ಟು ಪ್ರಗತಿ ಸಾಧಿಸಲಾಗಿದೆ. ಎರಡೂ ಡೋಸ್‌ ಪಡೆಯಬೇಕಾದ್ದು ನಾಗರಿಕರ ಕರ್ತವ್ಯವಾಗಿದ್ದು, ಮೊದಲನೇ ಲಸಿಕೆ ಪಡೆದಿರುವ ಅನೇಕರು ಇನ್ನು ಎರಡನೇ ಡೋಸ್‌ ಪಡೆದಿಲ್ಲ.

ಲಸಿಕೆ ತಪ್ಪದೇ ಪಡೆಯಿರಿ: ಜಿಲ್ಲೆಯ ತುಮಕೂರು, ತುರುವೇಕೆರೆ ತಿಪಟೂರು, ಚಿಕ್ಕನಾಯಕನಹಳ್ಳಿ, ಕುಣಿಗಲ್‌, ಮಧುಗಿರಿ, ಗುಬ್ಬಿ ಭಾಗಗಳಲ್ಲಿ ಲಸಿಕೆ ಪಡೆಯುವಲ್ಲಿ ಉತ್ತಮ ಸಾಧನೆ ಆಗುತ್ತಿದೆ. ಆದರೆ, ಪಾವಗಡ ತಾಲೂಕಿನಲ್ಲಿ ಜನ ಲಸಿಕೆ ಪಡೆಯಲು ಹೆದರುತ್ತಿದ್ದು, ಅಲ್ಲಿ ಅತೀ ಕಡಿಮೆ ಶೇ. 85ರಷ್ಟು ಪ್ರಗತಿ ಸಾಧಿಸಲಾಗಿದೆ.

ಶಿರಾ ತಾಲೂಕಿನಲ್ಲಿ ಉತ್ತಮ ಸ್ಪಂದನೆ ದೊರೆತ್ತಿದೆ. ಎರಡೂ ಡೋಸ್‌ ಸೇರಿ ಶೇ. 99ರಷ್ಟು ಪ್ರಗತಿ ಸಾಧಿಸಲಾಗಿದೆ. ನಮ್ಮ ನಿರೀಕ್ಷೆ ಯಷ್ಟು ಲಸಿಕೆ ಬರುತ್ತಿದೆ. ಜನರು ಲಸಿಕಾ ಕೇಂದ್ರಕ್ಕೆ ಬಂದು ತಪ್ಪದೇ ಎರಡೂ ಡೋಸ್‌ ಲಸಿಕೆ ತಪ್ಪದೇ ಪಡೆಯಿರಿ ಎಂದು ಲಸಿಕೆ ವಿತರಣೆ ನಿರ್ವಹಣಾಧಿಕಾರಿ ಡಾ.ಕೇಶವರಾಜ್‌ ಮನವಿ ಮಾಡಿದ್ದಾರೆ.

“ಜಿಲ್ಲೆಯಲ್ಲಿ ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಈಗ ಕೊರೊನಾ ನಿಯಂತ್ರಣದಲ್ಲಿದೆ. ಆದರೆ, ಬೇರೆ ಬೇರೆ ಕಡೆ ಕೊರೊನಾ ಜೊತೆಗೆ ಒಮಿಕ್ರಾನ್‌ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಅದಕ್ಕೆ ಬೇಕಾದ ಸೂಕ್ತ ಕ್ರಮವನ್ನು ಜಿಲ್ಲಾಡಳಿತದಿಂದ ಕೈಗೊಂಡಿದೆ.” ವೈ.ಎಸ್‌. ಪಾಟೀಲ್‌, ಜಿಲ್ಲಾಧಿಕಾರಿ.

“ಒಮಿಕ್ರಾನ್‌ ಈಗ ಎಲ್ಲ ಕಡೆ ಹರಡುತ್ತಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಸೋಂಕು ಹರಡದಂತೆ ಕಾಪಾಡಲು ಪ್ರತಿ ಯೊಬ್ಬರೂ ಕೊರೊನಾ ಲಸಿಕೆ ಪಡೆಯ ಬೇಕು. ಮೊದಲನೇ ಕೊರೊನಾ ಲಸಿಕೆ ಪಡೆದವರು ತಪ್ಪದೇ ಎರಡನೇ ಲಸಿಕೆ ಪಡೆಯಬೇಕು. ಜಿಲ್ಲೆಯ ಕೊರೊನಾ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗು ತ್ತಿದೆ. ಜಿಲ್ಲೆಯಲ್ಲಿ ಶೇ.95ರಷ್ಟು ಜನರು ಲಸಿಕೆ ಪಡೆದಿದ್ದಾರೆ.” ಡಾ. ಕೇಶವರಾಜ್‌, ಕೊರೊನಾ ಲಸಿಕಾ ವಿತರಣಾ ಅಧಿಕಾರಿ.

– ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.