ಟೋಲ್‌ ಕಾಮಗಾರಿಗೆ ವಿರೋಧ


Team Udayavani, Feb 15, 2020, 5:57 PM IST

tk-tdy-1

ಕೊರಟಗೆರೆ: ಪಾವಗಡ, ಮಧುಗಿರಿ ಮತ್ತು ಕೊರಟಗೆರೆ ಕ್ಷೇತ್ರದಿಂದ ತುಮಕೂರು ನಗರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಅನಧಿಕೃತ ಮತ್ತು ಅವೈಜ್ಞಾನಿಕವಾಗಿ ಟೋಲ್‌ ಕಾಮಗಾರಿ ನಡೆಯುತ್ತಿದೆ ಎಂದು ಆರೋಪಿಸಿ ಕನ್ನಡಪರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತುಮಕೂರು ನಗರದಿಂದ ಪಾವಗಡ ಮತ್ತು ಬೆಂಗಳೂರಿನಿಂದ ದಾಬಸ್‌ಪೇಟೆ ಮೂಲಕ ಮಧುಗಿರಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ರಸ್ತೆಯೇ ಅವೈಜ್ಞಾನಿಕವಾಗಿದ್ದು, ರಸ್ತೆ ಕಾಮಗಾರಿ ಪೂರ್ಣ ಆಗುವ ಮೊದಲೇ ರಸ್ತೆ ಕಾಮಗಾರಿ ನಾಮಫ‌ಲಕ ಹಾಕಿ ಟೋಲ್‌ ಸಂಗ್ರಹಕ್ಕೆ ಮುಂದಾಗಿರುವ ಖಾಸಗಿ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರವೇ ತಾಲೂಕು ಘಟಕದ ಅಧ್ಯಕ್ಷ ನಟರಾಜು ಮಾತನಾಡಿ, ರೈತಾಪಿ ವರ್ಗ ಮತ್ತು ಬಡಜನತೆ ಸಂಚರಿಸುವ ರಾಜ್ಯ ಹೆದ್ದಾರಿಯಲ್ಲಿ ಹಣ ದೋಚುವ ಉದ್ದೇಶದಿಂದ ಕಳ್ಳತನದಿಂದ ರಾತ್ರೋರಾತ್ರಿ ಟೋಲ್‌ ಕಾಮಗಾರಿ ಮಾಡಲಾಗುತ್ತಿದೆ. ಪಾವಗಡ, ಮಧುಗಿರಿ, ಕೊರಟಗೆರೆ ಮತ್ತು ತುಮಕೂರು ಗ್ರಾಮಾಂತರ ಶಾಸಕರು ಟೋಲ್‌ ವಿರುದ್ಧದ ಹೋರಾಟಕ್ಕೆ ಪಕ್ಷಾತೀತ ಬೆಂಬಲ ಸೂಚಿಸಬೇಕು ಎಂದು ಒತ್ತಾಯಿಸಿದರು.

ತಾಲೂಕು ಯುವ ಘಟಕದ ಅಧ್ಯಕ್ಷ ದಾಸರಹಳ್ಳಿ ಚೇತನ್‌ ಮಾತನಾಡಿ, ಕೆಶಿಪ್‌ ಅವೈಜ್ಞಾನಿಕ ರಾಜ್ಯ ಹೆದ್ದಾರಿ ಕಾಮಗಾರಿಯಿಂದ ಕಳೆದ ನಾಲ್ಕೆ çದು ವರ್ಷದಿಂದ 110 ಅಪಘಾತವಾಗಿ 70 ಜನ ಮೃತಪಟ್ಟು 200ಕ್ಕೂ ಹೆಚ್ಚು ಜನರ ಕೈ-ಕಾಲು ಕಳೆದುಕೊಂಡಿದ್ದಾರೆ. ಪರವಾನಗಿ ಇಲ್ಲದೇ ಅನಧಿಕೃತ ಟೋಲ್‌ ಕಾಮಗಾರಿ ನಡೆಯುತ್ತಿದೆ ಎಂದು ಆರೋಪಿಸಿದರು.

ಪಾವಗಡ ಬಿಎಸ್‌ಪಿ ಅಧ್ಯಕ್ಷ ಮಂಜುನಾಥ ಮಾತನಾಡಿ, ಟೋಲ್‌ ಘಟಕದಿಂದ ರೈತರಿಂದ ಸಮಸ್ಯೆ ಆಗಲಿದೆ. ಸರ್ಕಾರದ ಆದೇಶ ಇಲ್ಲದಿರುವ ಕಾಮಗಾರಿ ಅವೈಜ್ಞಾನಿಕವಾಗಿದೆ. ರಸ್ತೆ ಕಾಮಗಾರಿ ನಾಮಫ‌ಲಕ ಹಾಕಿ ಟೋಲ್‌ ಕಾಮಗಾರಿ ಕೆಲಸ ನಡೆಸುತ್ತಿದ್ದಾರೆ. ಟೋಲ್‌ ಕಾಮಗಾರಿ ತಕ್ಷಣ ನಿಲ್ಲಿಸಿದಿದ್ದರೆ ಪಾವಗಡ, ಮಧುಗಿರಿ ಮತ್ತು ಕೊರಟಗೆರೆ ಬಂದ್‌ಗೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಮ್ಮ ಕರ್ನಾಟಕ ಅಧ್ಯಕ್ಷ ದೇವರಾಜು, ಕರವೇ ಕಾರ್ಯದರ್ಶಿ ಕಲೀಂವುಲ್ಲಾ, ಕಾರ್ಯಕರ್ತರಾದ ಮಂಜುನಾಥ, ವಿನಯ್‌, ಪಕ್ರುದ್ದೀನ್‌, ಚಾಂದುಪಾಷ, ಲಕ್ಷ್ಮಣ್‌, ರಾಮಚಂದ್ರ, ಅನಿಲ್‌, ವಜೀರ್‌ಅಹಮ್ಮದ್‌, ಪುನೀತ್‌, ಮೂರ್ತಿ, ರಕ್ಷಿತ್‌, ಪ್ರವೀಣ್‌ ಶೆಟ್ಟಿ, ಮುತ್ತುರಾಜು, ಗಣೇಶ್‌, ರಾಜು ಇತರರು ಇದ್ದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.