ಅನಧಿಕೃತ ಟೋಲ್‌ ನಿರ್ಮಾಣಕ್ಕೆ ವಿರೋಧ


Team Udayavani, Jan 7, 2020, 2:41 PM IST

tk-tdy-1

ಕುಣಿಗಲ್‌: ತಾಲೂಕಿನ ಕುಣಿಗಲ್‌- ಹುಲಿಯೂರು ದುರ್ಗ ರಾಜ್ಯ ಹೆದ್ದಾರಿ 33 ಮಾರ್ಗದ ದೊಡ್ಡ ಮಾವತ್ತೂರು ಬಳಿ ಕೆಶಿಫ್‌ ರಸ್ತೆಯಲ್ಲಿ ಅನಧಿಕೃತವಾಗಿ ಟೋಲ್‌ ನಿರ್ಮಿಸುತ್ತಿರುವ ಕೆಆರ್‌ ಐಡಿಎಲ್‌ ವಿರುದ್ಧ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ಹಾಗೂ ರೈತರು ಸೋಮವಾರ ಟಿ.ಎಂ. ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಜಿಲ್ಲಾ ರೈತ ಸಂಘದ ಅಧ್ಯಕ್ಷ ಆನಂದ್‌ ಪಟೇಲ್‌, ತಾಲೂಕು ಅಧ್ಯಕ್ಷ ಅನಿಲ್‌ಗೌಡ ಹಾಗೂ ಮಾನವ ಹಕ್ಕು ಮತ್ತು ಭ್ರಷ್ಟಾಚಾರ ನಿರ್ಮೂಲನೆ ವೇದಿಕೆ ಅಧ್ಯಕ್ಷ ನಿಡಸಾಲೆ ಸತೀಶ್‌ ನೇತೃತ್ವದಲ್ಲಿ ಹುಲಿಯೂರು ದುರ್ಗ ಪ್ರವಾಸಿ ಮಂದಿರದ ಆವರಣದಲ್ಲಿ ಸಮಾವೇಶಗೊಂಡ ರೈತರು ಹಾಗೂ ಸಂಘದ ಪದಾಧಿ ಕಾರಿಗಳು ಬಳಿಕ ದೊಡ್ಡಮಾವತ್ತೂರು ಬಳಿ ಟೋಲ್‌ ನಿರ್ಮಾಣ ಸ್ಥಳಕ್ಕೆ ತೆರಳಿ ಕೆಶಿಪ್‌ ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಆನಂದ್‌ ಪಟೇಲ್‌ ಮಾತನಾಡಿ, ಸರ್ವೀಸ್‌ ರಸ್ತೆ ಸೇರಿ ಯಾವುದೇ ಮೂಲಸೌಕರ್ಯ ಕಲ್ಪಿಸದೇ ಅಧಿಕಾರಿಗಳು ಅವೈಜ್ಞಾನಿಕ ಹಾಗೂ ಅಕ್ರಮವಾಗಿ ಟೋಲ್‌ ನಿರ್ಮಿಸುತ್ತಿರುವುದು ಖಂಡನೀಯ. ರಸ್ತೆ ಕೆಶಿಫ್‌ಗೆ ಸೇರಿದರೂ ಅನುಮತಿ ಪಡೆಯದೇ ಕೆಆರ್‌ ಐಡಿಎಲ್‌ನ ಅಧಿಕಾರಿಗಳು ಅಕ್ರಮವಾಗಿ ಟೋಲ್‌ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿದರು. ರೈತರು ಹಾಗೂ ಸಾರ್ವಜನಿಕರ ಸಂಚಾರ ದೃಷ್ಟಿ ಯಿಂದ ಕೃಷಿ ಜಮೀನು ಬಿಟ್ಟು ಕೊಟ್ಟು ಕೆಶಿಫ್‌ ರಸ್ತೆ ನಿರ್ಮಿಸಲಾಗಿದೆ. ರೈತರು ಜಮೀನು ಬಿಟ್ಟುಕೊಟ್ಟಿರು ವುದಲ್ಲದೇ ಟೋಲ್‌ ಕಟ್ಟಿ ಸಂಚರಿಸುವ ಸ್ಥಿತಿಗೆ ಬಂದು ನಿಂತ್ತಿದ್ದಾರೆ. ವಾಹನ ಖರೀದಿಸುವಾಗ ಸರ್ಕಾರಕ್ಕೆ ತೆರೆಗೆ ಕಟ್ಟಿದ್ದೇವೆ. ಈಗ ಸಂಚಾರಕ್ಕೂ ತೆರಿಗೆ ಕಟ್ಟ ಬೇಕಿದೆ. ಸರ್ಕಾರ ಜನರ ಭಿಕ್ಷೆಗೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

ನಮ್ಮದೇ ತೆರಿಗೆ ಹಣ: ನಿಡಸಾಲೆ ಸತೀಶ್‌ ಮಾತನಾಡಿ, ಕೆಶಿಪ್‌ ರಸ್ತೆ ನಿರ್ಮಿಸಲು ನಮ್ಮದೇ ತೆರಿಗೆ ಹಣ ವೆಚ್ಚ ಮಾಡಲಾಗಿದೆ. ಜೊತೆಗೆ ಸುತಮುತ್ತಲಿನ ಬೆಟ್ಟ ಗುಡ್ಡ ಕಡಿದು ರಸ್ತೆಗೆ ಜೆಲ್ಲಿ ಹಾಕಲಾಗಿದೆ. ರೈತರ ಜಮೀನಿನ ಮಣ್ಣನ್ನೇ ಬಳಸಿ ರಸ್ತೆ ನಿರ್ಮಿಸಲಾಗಿದೆ. ಎಲ್ಲವನ್ನೂ ನಮ್ಮಿಂದಲೇ ಪಡೆದು ರಸ್ತೆ ನಿರ್ಮಿಸಿ ನಮ್ಮಿಂದಲೇ ಟೋಲ್‌ ವಸೂಲಿ ಮಾಡಲು ಸರ್ಕಾರ ಮುಂದಾಗಿದೆ ಎಂದು ಹರಿಹಾಯ್ದರು. ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದ ತಾಲೂಕಿನ= ವಿವಿಧೆಡೆ ರಸ್ತೆ ಅಪಘಾತ ಸಂಭವಿಸಿ ಹತ್ತಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಕೆಶಿಪ್‌ ಅಧಿಕಾರಿ ಗಳೇ ಕಾರಣ. ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು ಮಾಡಬೇಕೆಂದು ಒತ್ತಾಯಿಸಿದರು.

ರೈತ ಸಂಘದ ಕಾರ್ಯದರ್ಶಿ ವೆಂಕಟೇಶ್‌ಗೌಡ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಲಕ್ಷ್ಮಣ್‌, ಮಾನವ ಹಕ್ಕು ಮತ್ತು ಭ್ರಷ್ಟಚಾರ ನಿರ್ಮೂಲನೆ ವೇದಿಕೆ ಕಾರ್ಯದರ್ಶಿ ಎಂ.ಎಂ.ಯೋಗೀಶ್‌, ಮುಖಂಡ ನಿಡಸಾಲೆ ಪ್ರಸಾದ್‌ ಇತರರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.