‘ಇನ್ನಾದರೂ ಸುಳ್ಳು ಹೇಳುವುದನ್ನು ನಿಲ್ಲಿಸಿ’: ಶಾಸಕ ಶ್ರೀನಿವಾಸ್- ಸಂಸದ ಬಸವರಾಜ್ ಮಾತಿನ ಸಮರ
Team Udayavani, Aug 14, 2021, 3:21 PM IST
ತುಮಕೂರು: 500 ಕೋಟಿ ರೂಪಾಯಿ ಅನುದಾನ ವಿಚಾರವಾಗಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಮತ್ತು ಸಂಸದ ಜಿ.ಎಸ್.ಬಸವರಾಜ್ ನಡುವೆ ಮಾತಿನ ಜಟಾಪಟಿ ನಡೆದ ಪ್ರಸಂಗ ಶನಿವಾರ ನಡೆಯಿತು.
ಗುಬ್ಬಿ ತಾಲೂಕಿನ ಸಿ. ನಂದಿಹಳ್ಳಿಯಲ್ಲಿ ಬೆಸ್ಕಾಂ ವಿದ್ಯುತ್ ಎಂಎಸ್ಎಸ್ ಘಟಕ ಉದ್ಘಾಟನಾ ಸಮಾರಂಭದ ವೇಳೆ ಈ ಘಟನೆ ನಡೆದಿದೆ.
ಭಾಷಣ ಮಾಡುವ ವೇಳೆ ಸಂಸದ ಬಸವರಾಜು ಅವರು, ಚೇಳೂರು ಹೋಬಳಿಯಲ್ಲಿ ಚೆಕ್ ಡ್ಯಾಂ ನಿರ್ಮಿಸಲು ಕೇಂದ್ರ ಸರ್ಕಾರದಿಂದ 550 ಕೋಟಿ ರೂಪಾಯಿ ಅನುದಾನ ತಂದಿದ್ದೇನೆ ಎಂದರು. ಇದರಿಂದ ಕುಪಿತರಾದ ಶಾಸಕ ಶ್ರೀನಿವಾಸ್, ರೈತರಿಗೆ ಸುಳ್ಳು ಯಾಕೆ ಹೇಳುತ್ತೀರಿ? ನಿಮಗೆ ವಯಸ್ಸಾಗಿದೆ ಈಗಲಾದರೂ ಸುಳ್ಳು ಹೇಳುವುದನ್ನು ನಿಲ್ಲಿಸಿ ಎಂದಿದ್ದಾರೆ.
ಇದನ್ನೂ ಓದಿ:ಎಂ.ಟಿ.ಬಿ, ನಿರಾಣಿ ಸೇರಿ ಬಿಜೆಪಿಯ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಈಶ್ವರ್ ಖಂಡ್ರೆ
ಇದರಿಂದ ಕೋಪಗೊಂಡ ಸಂಸದರು, ನಾನು ಜೀವನದಲ್ಲಿ ಸುಳ್ಳು ಹೇಳಿಲ್ಲ. ಇವರ ಮಾತು ನಂಬಬೇಡಿ ನಾನು ಹಲವು ಯೋಜನೆಗಳನ್ನು ತಂದಿದ್ದೇನೆ. 550 ಕೋಟಿ ರೂ ಅನುದಾನ ತಂದಿದ್ದೇನೆ ಎಂದು ಹೇಳಿದರು.
ಕುಪಿತರಾದ ಶಾಸಕ ಶ್ರೀನಿವಾಸ್, ನಿನ್ನ ಯೋಗ್ಯತೆಗೆ ಬೆಂಕಿ ಹಾಕಾ! ಬರಿ ಸುಳ್ಳು ಹೇಳಿಕೊಂಡು ಕಾಲ ಕಳೆಯುತ್ತಿದ್ದೀರಿ. ವಯಸ್ಸಾಗಿದೆ ಈಗಲಾದರೂ ಮಾನ ಮರ್ಯಾದೆಯಿಂದ ಇರಬಾರದೇ? 550 ಕೋಟಿ ಯಾರು ನಿಮ್ಮ ತಾತ ತಂದಿದ್ದನಾ? 550 ಕೋಟಿ ಎಲ್ಲಿ ತಂದಿದ್ದೀರಿ ತೋರಿಸಿ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ