ಪಿಂಚಿಣಿ ಹಣ ನೇರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ: ಸಚಿವ
Team Udayavani, Sep 11, 2020, 2:48 PM IST
ಶಿರಾ: ಪಿಂಚಿಣಿ ಹಣವನ್ನು ನೇರ ಫಲಾನುಭವಿಗಳ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ನಗರದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಮಿನಿವಿಧಾನಸೌಧದ ಉದ್ಘಾಟನೆ ಮಾಡಿ ಮಾತನಾಡಿ, ಕಾಂಗ್ರೆಸ್ ಪಕ್ಷ ಮೊದಲು ರಾಷ್ಟ್ರೀಯ ಅಧ್ಯಕ್ಷರನ್ನು ಹುಡುಕಿಕೊಳ್ಳಲಿ, ತದನಂತರ ನಮ್ಮ ಪಕ್ಷದ ಬಗ್ಗೆ ಟೀಕೆ ಮಾಡಲಿ ಎಂದು ಸಲಹೆ ನೀಡಿದರು. ಹಳೆಯ ಕಟ್ಟಡ ಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಮಳೆ ಹೆಚ್ಚಾಗಿ ಬರುತ್ತಿರುವ ಕಾರಣ ಕಚೇರಿ ಕೆಲಸಕ್ಕೆ ಯೋಗ್ಯವಾಗಿರುವುದಿಲ್ಲದ ಕಾರಣ ಹೊಸ ಕಚೇರಿ ಉದ್ಘಾಟನೆ ಅನಿವಾರ್ಯವಾಗಿದೆ. ಸರ್ಕಾರ ವಯೋವೃದ್ಧರ ಪಿಂಚಣಿ ಯೋಜನೆ ನೂತನ ಮಾದರಿಯನ್ನು ರೂಪಿಸಿದ್ದು, ಹೊಸ ಮಂಜೂರಾತಿ ಆಧಾರ್ಕಾರ್ಡ್ ನೋಂದಣಿಯಂತೆ ಸ್ವಯಂಚಾಲಿತವಾಗಿ ಜಾರಿಗೊಳ್ಳುತ್ತದೆ ಎಂದು ವಿವರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಮಧ್ಯೆ ಇರುವ ಗೊಂದಲಗಳನ್ನು ಬಗೆಹರಿಸಿ ರೈತರುಸಾಗುವಳಿ ಮತ್ತು ಮನೆ ಕಟ್ಟಿಕೊಂಡಿರುವ ಭೂಮಿಯನ್ನು ಸಕ್ರಮಗೊಳಿಸಲು ಅರಣ್ಯ ಇಲಾಖೆ ಸಚಿವರು ಕಂದಾಯ ಸಚಿವರು ಒಪ್ಪಿಗೆ ನೀಡಿದ್ದಾರೆಂದು ಹೇಳಿದರು. ಅರಣ್ಯ ಸಚಿವ ಆನಂದ್ ಸಿಂಗ್, ವಿಧಾನ ಪರಿಷತ್ ಸದಸ್ಯರಾದವೈ.ಎ.ನಾರಾಯಣಸ್ವಾಮಿ, ಎನ್.ರವಿಕುಮಾರ್,ಜಿಲ್ಲಾಧಿಕಾರಿ ರಾಖೇಶ್ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಕೋನಂ ವಂಶೀಕೃಷ್ಣ ಇತರರಿದ್ದರು.