![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಅಭಿವೃದ್ಧಿ ಕಾಮಗಾರಿಗೆ ಜನರ ಸಹಕಾರ ಅಗತ್ಯ
Team Udayavani, Oct 2, 2020, 2:44 PM IST
![ಅಭಿವೃದ್ಧಿ ಕಾಮಗಾರಿಗೆ ಜನರ ಸಹಕಾರ ಅಗತ್ಯ](https://www.udayavani.com/wp-content/uploads/2020/10/tk-tdy-2-620x372.jpg)
ತುಮಕೂರು: ನಗರದ ವಿವಿಧೆಡೆಗಳಲ್ಲಿ ಸರ್ಕಾರ ನೀಡಿದ್ದ 25 ಕೋಟಿ ರೂ. ವಿಶೇಷ ಅನುದಾನದಲ್ಲಿ ಸಿ.ಸಿ.ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿ ಸಂದರ್ಭ ದಲ್ಲಿ ಕೆಲವು ಸಣ್ಣ, ಪುಟ್ಟ ತೊಂದರೆಗಳಾಗುವುದು ಸಹಜ, ಇದಕ್ಕೆ ಜನರು ಸಹಕಾರ ನೀಡಬೇಕು ಎಂದು ಶಾಸಕ ಜಿ.ಬಿ.ಜೋತಿಗಣೇಶ್ ಹೇಳಿದರು.
ನಗರದ ಎಸ್.ಐ.ಟಿ. ಬಡಾವಣೆಯ 1 ರಿಂದ 3 ಅ ಅಡ್ಡ ರಸ್ತೆ ಹಾಗೂ 31ರಿಂದ 35ನೇ ಅಡ್ಡ ರಸ್ತೆಯಲ್ಲಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಿ.ಸಿ.ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಶೇ.90ರಷ್ಟು ತೆರಿಗೆದಾರರಿರುವ ಈ ಬಡಾವಣೆಗೆ ಅತಿ ಹೆಚ್ಚಿನ ರೀತಿಯಲ್ಲಿಯೇ ಅನುದಾನ ಒದಗಿಸಲಾಗಿದೆ ಎಂದರು.
ಹಂತ ಹಂತವಾಗಿ ಅಭಿವೃದ್ಧಿ: ಕೋವಿಡ್ ಸಂಕಷ್ಟದಲ್ಲಿಯೂ ಯಡಿಯೂರಪ್ಪನವರು ಪಾಲಿಕೆಗೆ 25 ಕೋಟಿ ರೂ.ಗಳ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ. ಅದರಲ್ಲಿ ಸಿಂಹಪಾಲು ಅಂದರೆ 5.50 ಕೋಟಿ ಅನುದಾನವನ್ನು ನಗರದಲ್ಲಿ ದೊಡ್ಡ ವಾರ್ಡುಗಳಲ್ಲಿ ಒಂದಾಗಿರುವ 26ನೇ ವಾರ್ಡಿಗೆ ನೀಡಲಾಗಿದೆ. ಆದರೂ ನಾಗರಿಕರಿಂದ ಸಾಕಷ್ಟು ಬೇಡಿಕೆಗಳು ಬರುತ್ತಿವೆ. ಹಂತ ಹಂತವಾಗಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನುಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅಧಿಕಾರಿಗಳೊಂದಿಗೆ ಸಹಕರಿಸಿ: ಪ್ರಸ್ತುತ 80 ಲಕ್ಷ ರೂ. ಅನುದಾನದಲ್ಲಿ ಸುಮಾರು3ಕಿ.ಮೀ. ಉದ್ದದ ಸಿ.ಸಿ.ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. ಕೆಲವು ಕಡೆಗಳಲ್ಲಿ30ಅಡಿಗಳಿಗಿಂತಲೂಕಡಿಮೆಅಗಲವಾದ ರಸ್ತೆಗಳಿವೆ. ಅಂಥ ಕಡೆಗಳಲ್ಲಿ ಚರಂಡಿಗೆ ಅಗೆದಾಗ ವಾಹನಗಳ ತೆಗೆಯಲು ತೊಂದರೆಯಾಗಬಹುದು. ಒಮ್ಮೆ ಸಿ.ಸಿ.ಚರಂಡಿ ನಿರ್ಮಾಣವಾದರೆ ಶಾಶ್ವತವಾಗಿ ಸಮಸ್ಯೆ ಬಗೆಹರಿಯುವುದರಿಂದ ನಾಗರಿಕರು ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಎಲ್ಲಾ ವಾರ್ಡ್ಗಳಿಗೂ ಸೌಲಭ್ಯ: ಮೇಯರ್ ಫರೀದಾ ಬೇಗಂ ಮಾತನಾಡಿ, ನಗರಪಾಲಿಕೆಗೆ ಅನುದಾನದ ಕೊರತೆ ಇದ್ದಾಗ್ಯೂ ಅಭಿವೃದ್ಧಿಕಾರ್ಯಗಳಿಗೆ ಹಿಂದೇಟು ಹಾಕಿಲ್ಲ. ಶಕ್ತಿ ಮೀರಿ ಕೆಲಸ ಮಾಡುತ್ತಿದ್ದೇವೆ. ಇರುವ ಅನುದಾನವನ್ನು ಎಲ್ಲಾ ವಾರ್ಡು ಗಳಿಗೂ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ನಾಗರಿಕರು ಒತ್ತಡ ಹಾಕದೇ, ಹಂತ ಹಂತವಾಗಿ ತಮ್ಮ ವಾರ್ಡಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸಹಕರಿಸಬೇಕು ಎಂದರು.
ವಾರ್ಡ್ ಸ್ವಚ್ಛತೆಗೆ ಒತ್ತು: ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ, ಎಸ್.ಎಫ್.ಸಿ ವಿಶೇಷ ಅನುದಾನದಲ್ಲಿ ಸಿ.ಸಿ.ಚರಂಡಿ ನಿರ್ಮಾಣ ಮಾಡ ಲಾಗಿದೆ. ಶೇ.90ರಷ್ಟು ತೆರಿಗೆ ಕಟ್ಟುವ ಈ ವಾರ್ಡಿನ ಜನತೆ ಸ್ವತ್ಛತೆಗೆ ಹೆಚ್ಚಿನ ಒತ್ತು ನೀಡುತ್ತಿರುವುದು ನಾನು ಗಮನಿಸಿದ್ದೇನೆ. ಕೆಲವೇ ದಿನಗಳಲ್ಲಿ ಸ್ವತ್ಛ ಸರ್ವೇಕ್ಷಣ ಸಮೀಕ್ಷೆ ಆರಂಭವಾಗಲಿದ್ದು, ನಗರದ ನಾಗರಿಕರು ಹೆಚ್ಚಿನ ಅಂಕಗಳನ್ನು ನೀಡುವ ಮೂಲಕ ಸಹಕರಿಸುವಂತೆ ಮನವಿ ಮಾಡಿದರು.
ಪಾಲಿಕೆಯಅಧೀಕ್ಷಕ ಎಂಜಿನಿಯರ್ಮಹೇಶ್, ಮುಖಂಡರಾದ ಮಂಜುನಾಥ್, ಕೊಪ್ಪಲ ನಾಗ ರಾಜು, ಚಂದ್ರಪ್ಪ, ವಿನಯ್, ರಮೇಶ್ಇದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.