ಅಭಿವೃದ್ಧಿ ಕಾಮಗಾರಿಗೆ ಜನರ ಸಹಕಾರ ಅಗತ್ಯ


Team Udayavani, Oct 2, 2020, 2:44 PM IST

ಅಭಿವೃದ್ಧಿ ಕಾಮಗಾರಿಗೆ ಜನರ ಸಹಕಾರ ಅಗತ್ಯ

ತುಮಕೂರು: ನಗರದ ವಿವಿಧೆಡೆಗಳಲ್ಲಿ ಸರ್ಕಾರ ನೀಡಿದ್ದ 25 ಕೋಟಿ ರೂ. ವಿಶೇಷ ಅನುದಾನದಲ್ಲಿ ಸಿ.ಸಿ.ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿ ಸಂದರ್ಭ ದಲ್ಲಿ ಕೆಲವು ಸಣ್ಣ, ಪುಟ್ಟ ತೊಂದರೆಗಳಾಗುವುದು ಸಹಜ, ಇದಕ್ಕೆ ಜನರು ಸಹಕಾರ ನೀಡಬೇಕು ಎಂದು ಶಾಸಕ ಜಿ.ಬಿ.ಜೋತಿಗಣೇಶ್‌ ಹೇಳಿದರು.

ನಗರದ ಎಸ್‌.ಐ.ಟಿ. ಬಡಾವಣೆಯ 1 ರಿಂದ 3 ಅ ಅಡ್ಡ ರಸ್ತೆ ಹಾಗೂ 31ರಿಂದ 35ನೇ ಅಡ್ಡ ರ‌ಸ್ತೆಯಲ್ಲಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಿ.ಸಿ.ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಶೇ.90ರಷ್ಟು ತೆರಿಗೆದಾರರಿರುವ ಈ ಬಡಾವಣೆಗೆ ಅತಿ ಹೆಚ್ಚಿನ ರೀತಿಯಲ್ಲಿಯೇ ಅನುದಾನ ಒದಗಿಸಲಾಗಿದೆ ಎಂದರು.

ಹಂತ ಹಂತವಾಗಿ ಅಭಿವೃದ್ಧಿ: ಕೋವಿಡ್ ಸಂಕಷ್ಟದಲ್ಲಿಯೂ ಯಡಿಯೂರಪ್ಪನವರು ಪಾಲಿಕೆಗೆ 25 ಕೋಟಿ ರೂ.ಗಳ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ. ಅದರಲ್ಲಿ ಸಿಂಹಪಾಲು ಅಂದರೆ 5.50 ಕೋಟಿ ಅನುದಾನವನ್ನು ನಗರದಲ್ಲಿ ದೊಡ್ಡ ವಾರ್ಡುಗಳಲ್ಲಿ ಒಂದಾಗಿರುವ 26ನೇ ವಾರ್ಡಿಗೆ ನೀಡಲಾಗಿದೆ. ಆದರೂ ನಾಗರಿಕರಿಂದ ಸಾಕಷ್ಟು ಬೇಡಿಕೆಗಳು ಬರುತ್ತಿವೆ. ಹಂತ ಹಂತವಾಗಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನುಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಧಿಕಾರಿಗಳೊಂದಿಗೆ ಸಹಕರಿಸಿ: ಪ್ರಸ್ತುತ 80 ಲಕ್ಷ ರೂ. ಅನುದಾನದಲ್ಲಿ ಸುಮಾರು3ಕಿ.ಮೀ. ಉದ್ದದ ಸಿ.ಸಿ.ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. ಕೆಲವು ಕಡೆಗಳಲ್ಲಿ30ಅಡಿಗಳಿಗಿಂತಲೂಕಡಿಮೆಅಗಲವಾದ ರಸ್ತೆಗಳಿವೆ. ಅಂಥ ಕಡೆಗಳಲ್ಲಿ ಚರಂಡಿಗೆ ಅಗೆದಾಗ ವಾಹನಗಳ ತೆಗೆಯಲು ತೊಂದರೆಯಾಗಬಹುದು. ಒಮ್ಮೆ ಸಿ.ಸಿ.ಚರಂಡಿ ನಿರ್ಮಾಣವಾದರೆ ಶಾಶ್ವತವಾಗಿ ಸಮಸ್ಯೆ ಬಗೆಹರಿಯುವುದರಿಂದ ನಾಗರಿಕರು ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.

ಎಲ್ಲಾ ವಾರ್ಡ್‌ಗಳಿಗೂ ಸೌಲಭ್ಯ: ಮೇಯರ್‌ ಫ‌ರೀದಾ ಬೇಗಂ ಮಾತನಾಡಿ, ನಗರಪಾಲಿಕೆಗೆ ಅನುದಾನದ ಕೊರತೆ ಇದ್ದಾಗ್ಯೂ ಅಭಿವೃದ್ಧಿಕಾರ್ಯಗಳಿಗೆ ಹಿಂದೇಟು ಹಾಕಿಲ್ಲ. ಶಕ್ತಿ ಮೀರಿ ಕೆಲಸ ಮಾಡುತ್ತಿದ್ದೇವೆ. ಇರುವ ಅನುದಾನವನ್ನು ಎಲ್ಲಾ ವಾರ್ಡು ಗಳಿಗೂ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ನಾಗರಿಕರು ಒತ್ತಡ ಹಾಕದೇ, ಹಂತ ಹಂತವಾಗಿ ತಮ್ಮ ವಾರ್ಡಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸಹಕರಿಸಬೇಕು ಎಂದರು.

ವಾರ್ಡ್‌ ಸ್ವಚ್ಛತೆಗೆ ಒತ್ತು: ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ, ಎಸ್‌.ಎಫ್.ಸಿ ವಿಶೇಷ ಅನುದಾನದಲ್ಲಿ ಸಿ.ಸಿ.ಚರಂಡಿ ನಿರ್ಮಾಣ ಮಾಡ ಲಾಗಿದೆ. ಶೇ.90ರಷ್ಟು ತೆರಿಗೆ ಕಟ್ಟುವ ಈ ವಾರ್ಡಿನ ಜನತೆ ಸ್ವತ್ಛತೆಗೆ ಹೆಚ್ಚಿನ ಒತ್ತು ನೀಡುತ್ತಿರುವುದು ನಾನು ಗಮನಿಸಿದ್ದೇನೆ. ಕೆಲವೇ ದಿನಗಳಲ್ಲಿ ಸ್ವತ್ಛ ಸರ್ವೇಕ್ಷಣ ಸಮೀಕ್ಷೆ ಆರಂಭವಾಗಲಿದ್ದು, ನಗರದ ನಾಗರಿಕರು ಹೆಚ್ಚಿನ ಅಂಕಗಳನ್ನು ನೀಡುವ ಮೂಲಕ ಸಹಕರಿಸುವಂತೆ ಮನವಿ ಮಾಡಿದರು.

ಪಾಲಿಕೆಯಅಧೀಕ್ಷಕ ಎಂಜಿನಿಯರ್‌ಮಹೇಶ್‌, ಮುಖಂಡರಾದ ಮಂಜುನಾಥ್‌, ಕೊಪ್ಪಲ ನಾಗ ರಾಜು, ಚಂದ್ರಪ್ಪ, ವಿನಯ್‌, ರಮೇಶ್‌ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.