ಆಧಾರ್‌ ತಿದ್ದುಪಡಿಗೆ ಜನರ ಪರದಾಟ

ಕಾವೇರಿ ಗ್ರಾಮೀಣ ಬ್ಯಾಂಕ್‌ ಮುಂದೆ ಮಾರುದ್ದದ ಸಾಲು • ದಿನಕ್ಕೆ 25 ಜನರಿಗೆ ಆದ್ಯತೆ

Team Udayavani, Jun 12, 2019, 1:07 PM IST

tk-tdy-1..

ಹುಳಿಯಾರು: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಕಾರ್ಡ್‌ನಲ್ಲಿರುವ ಎಲ್ಲ ಸದಸ್ಯರ ಕೆವೈಸಿ ಅಪ್ಲೋಡ್‌ ಮಾಡಲು ಸಾರ್ವಜನಿಕರು ಪರದಾಡುವಂತಾಗಿದೆ.

ಜನಜಂಗುಳಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ನಿಯಮದಂತೆ ಆಹಾರ ಧಾನ್ಯ ಪಡೆಯುತ್ತಿರುವ (ಬಿಪಿಎಲ್, ಎಎವೈ, ಎಪಿಎಲ್) ಕಾರ್ಡುದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಕಾರ್ಡ್‌ನಲ್ಲಿರುವ ಎಲ್ಲ ಸದಸ್ಯರ ಕೆವೈಸಿಯನ್ನು ಅಪ್ಲೋಡ್‌ ಮಾಡಬೇಕಾಗಿದ್ದು, ಇದಕ್ಕಾಗಿ ಆಧಾರ್‌ ತಿದ್ದುಪಡಿ ಮಾಡಿಸಲು ಹೋಬಳಿಯ ಏಕೈಕ ಆಧಾರ್‌ ಕೇಂದ್ರ ಯಳನಾಡು ಕಾವೇರಿ ಗ್ರಾಮೀಣ ಬ್ಯಾಂಕ್‌ ಮುಂದೆ ಬೆಳಗ್ಗೆ ಯಿಂದಲೇ ಜನಜಂಗುಳಿ ಕಂಡುಬರುತ್ತಿದೆ.

ಬೆಳಗ್ಗೆಯಿಂದಲೇ ವೃದ್ಧರು, ಮಹಿಳೆಯರಾದಿ ಯಾಗಿ ಪ್ರತಿಯೊಬ್ಬರೂ ಸರತಿ ಸಾಲಿನಲ್ಲಿ ನಿಂತು ಆಧಾರ್‌ ತಿದ್ದುಪಡಿಯಾಗದೆ ಹಿಂದಿರುಗುತ್ತಿರುವುದು ಸಾಮಾನ್ಯವಾಗಿದೆ. ಈ ಹಿಂದೆ ಪಡಿತರ ಚೀಟಿದಾರರ ಕುಟುಂಬದ ಒಬ್ಬ ಸದಸ್ಯ ಬಯೋಮೆಟ್ರಿಕ್‌ ನೀಡಿ ಆಹಾರ ಪಡೆಯಬೇಕಾಗಿತ್ತು. ಈ ಪದ್ಧತಿಯಿಂದ ಇನ್ನುಳಿದವರ ಅವಶ್ಯಕತೆ ಇರಲಿಲ್ಲ.

ಅಕ್ರಮ ಪತ್ತೆಗೆ ಜಾರಿ: ಪಡಿತರ ಚೀಟಿಯ ಕುಟಂಬ ದಲ್ಲಿ ಯಾರೇ ಸದಸ್ಯರು ಸತ್ತರೂ ಅಂವರ ಹೆಸರಲ್ಲಿ ಪಡಿತರ ಆಹಾರ ಪಡೆಯುತ್ತಿದ್ದ ಪ್ರಕರಣಗಳು ಗಮನಕ್ಕೆ ಬಂದಿದ್ದರಿಂದ ನೈಜ ಪಡಿತರ ಫಲಾನು ಭವಿಗಳ ಪತ್ತೆಗೆ ಹಾಗೂ ನಕಲಿ ಪಡಿತರದಾರನ್ನು ನಿಯಂತ್ರಿಸಲು ರಾಜ್ಯಾದ್ಯಂತ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇ-ಕೆವೈಸಿ ಜಾರಿಗೊಳಿಸಿದೆ. ಆದ್ದರಿಂದ ಹೆಬ್ಬಟ್ಟಿನ ಗುರುತು ನೀಡಬೇಕಾಗಿದ್ದು, ಜುಲೈ 31 ಗಡುವು ನಿಗದಿ ಪಡಿಸಲಾಗಿದೆ.

ಮಕ್ಕಳ ಹೆಬ್ಬೆಟ್ಟೂ ಬೇಕು: ಆದರೆ ರೇಷನ್‌ಕಾರ್ಡ್‌ಗೆ ಇ-ಕೆವೈಸಿ ಮಾಡಲು ಈ ಮೊದಲೇ ಆಧಾರ್‌ ಕಾರ್ಡ್‌ ನಲ್ಲಿ ಬಯೋಮೆಟ್ರಿಕ್‌ (ಹೆಬ್ಬೆಟ್ಟು ದಾಖಲಿಸುವುದು) ಮಾಡಬೇಕಿತ್ತು. 5 ವರ್ಷದ ಒಳಗಿನ ಮಕ್ಕಳಿಗೆ ಆಧಾರ್‌ ಪಡೆಯುವಾಗ ಬಯೋಮೆಟ್ರಿಕ್‌ ಮಾಡಿ ರೋದಿಲ್ಲ. ಹಾಗಾಗಿ ಇ-ಕೈವೈಸಿ ಮಾಡಲು ಮಕ್ಕಳ ಹೆಬ್ಬೆಟ್ಟು ಸ್ಕಾನ್‌ ಮಾಡಲು ಸಾಧ್ಯವಾಗದೆ ರಿಜೆಕ್ಟ್ ಆಗುತ್ತಿದೆ. ಈ ನಿಟ್ಟಿನಲ್ಲಿ ಆಧಾರ್‌ ಕಾರ್ಡ್‌ಗೆ ಮಕ್ಕಳ ಹೆಬ್ಬೆಟ್ಟು ದಾಖಲಿಸುವುದು ಅನಿವಾರ್ಯ. ಅಲ್ಲದೆ ಹೊಸದಾಗಿ ಮದುವೆಯಾಗಿ ಬಂದವರು ತಮ್ಮ ವಿಳಾಸ ಬದಲಿಸುವುದು, ಹುಟ್ಟಿದ ದಿನಾಂಕ, ಫೋನ್‌ ನಂಬರ್‌ ಹೀಗೆ ಅನೇಕ ಬಗೆಯ ತಿದ್ದುಪಡಿ ಅಗತ್ಯ ವಿದ್ದು, ಈಗ ಇದಕ್ಕಾಗಿ ಹೋಬಳಿಯ ಮೂಲೆ ಮೂಲೆಗಳಿಂದ ಜನರು ಸಂಸಾರ ಸಮೇತ ಯಳನಾಡುವಿಗೆ ಆಗಮಿಸುತ್ತಿದ್ದಾರೆ.

20 ಕಿಮೀ ದೂರದಿಂದ ಬರುತ್ತಿದ್ದಾರೆ: ಈ ಹಿಂದೆ ಖಾಸಗಿ ಸರ್ವೀಸ್‌ ಸೆಂಟರ್‌ಗಳಲ್ಲಿ ಆಧಾರ್‌ ತಿದ್ದು ಪಡಿಗೆ ಅವಕಾಶ ಕೊಟ್ಟಿದ್ದರಿಂದ ಜನರು ಸುಸೂತ್ರವಾಗಿ ಆಧಾರ್‌ ತಿದ್ದುಪಡಿ ಮಾಡಿಸಿಕೊಳ್ಳುತ್ತಿದ್ದರು. ಆದರೆ ಈಗ ಇವರ ಅನುಮತಿ ನಿಲ್ಲಿಸಿ ಬ್ಯಾಂಕ್‌ಗಳಿಗೆ ಮಾತ್ರ ಅನುಮತಿ ನೀಡಿರುವುದು ಸಮಸ್ಯೆ ಇನ್ನಷ್ಟು ಬಿಗಡಾಯಿಸುವಂತಾಗಿದೆ.

ಯಳನಾಡುವಿನ ಕೆಜೆಬಿಯಲ್ಲಿ ಆಧಾರ್‌ ಕೇಂದ್ರ ತೆರೆದಿದ್ದಾರೆ. ಹಾಗಾಗಿ ಯಳನಾಡುವಿಗೆ 15ರಿಂದ 20 ಕಿಮೀ ದೂರ ಅಂದರೆ ದಸೂಡಿ, ಹೊಯ್ಸಳಕಟ್ಟೆ, ಗಾಣಧಾಳು ಗ್ರಾಪಂ ವ್ಯಾಪ್ತಿಯ ಜನರು ಆಧಾರ್‌ ತಿದ್ದುಪಡಿಗೆ ಬರುತ್ತಿದ್ದಾರೆ. ಊಟ ತಿಂಡಿ ಬಿಟ್ಟು ಬೆಳಿಗ್ಗೆಯಿಂದಲೇ ಕೆಜಿಬಿ ಬ್ಯಾಂಕ್‌ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ರೈತರಂತೂ ಹೊಲದ ಕೆಲಸ ಬಿಟ್ಟು ಬ್ಯಾಂಕ್‌ ಮುಂದೆ ಜಮಾಯಿಸುತ್ತಿದ್ದಾರೆ.

ಎಚ್.ಬಿ.ಕಿರಣ್‌ ಕುಮಾರ್‌

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.