ಅನುಮತಿ ಇಲ್ಲದೆ ಕೊಳವೆಬಾವಿ ಕೊರೆದರೆ ಶಿಕ್ಷೆ


Team Udayavani, Oct 23, 2020, 5:22 PM IST

tk-tdy-1

ಸಾಂದರ್ಭಿಕ ಚಿತ್ರ

ಮಧುಗಿರಿ: ರಾಜ್ಯದಲ್ಲಿ ಅಂತರ್ಜಲ ಪ್ರಮಾಣ ಕುಸಿಯುತ್ತಿರುವ ಹಿನ್ನೆಲೆ ಅಧಿಸೂಚಿತ ಪ್ರದೇಶಗಳಲ್ಲಿ ಹೊಸ ಕೊಳವೆ ಬಾವಿ(ಬೋರ್‌ವೆಲ್‌) ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಧಿಕಾರ ಅಧಿಸೂಚನೆ ಹೊರಡಿಸಿದೆ. ನಿಯಮ ಉಲ್ಲಂ ಸಿದರೆ ಕ್ರಿಮಿನಲ್‌ ಮೊಕದ್ದಮೆ ಹಾಗೂ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.

ರಾಜ್ಯಾದ್ಯಂತ ಕೊಳವೆಬಾವಿ ಕೊರೆಯಲು ಸರ್ಕಾರದ ಅನುಮತಿ ಅಗತ್ಯವೆಂದು ಸರ್ಕಾರ ಘೋಷಿಸಿ ಆದೇಶಿಸಿದ್ದು, ಜಿಲ್ಲಾವಾರು ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ಜಿಲ್ಲೆಯ ಮಧುಗಿರಿ ಸೇರಿದ್ದು, ಇನ್ಮುಂದೆ ತಾಲೂಕಿನ ರೈತರು ಹಾಗೂ ಸಾರ್ವಜನಿಕರು ಕೊಳವೆಬಾವಿ ಕೊರೆಸಲು ಜಿಲ್ಲಾಧಿಕಾರಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ರಾಜ್ಯ ಅಂತರ್ಜಲ ಅಧಿನಿಯಮ 2011 ಮತ್ತು ನಿಯಮಾವಳಿ 2012 ರ ಅನುಸಾರ ಅತಿ  ಯಾದ ಅಂತರ್ಜಲ ಬಳಕೆಯಲ್ಲಿ ಜಿಲ್ಲೆಯ ಮಧುಗಿರಿ, ಕೊರಟಗೆರೆ, ಚಿಕ್ಕನಾಯ್ಕನಹಳ್ಳಿ, ತುಮಕೂರು ಹಾಗೂ ತಿಪಟೂರು ತಾಲೂಕು ಮಂಚೂಣಿಯಲ್ಲಿದೆ. ಈ ಕ್ಷೇತ್ರಗಳಿಗೆ ರಾಜ್ಯ ಅಂತರ್ಜಲ ಪ್ರಾಧಿಕಾರದ ಈ ಆದೇಶ ಅನ್ವಯವಾಗಲಿದೆ.

ಆ.5, 2020 ರಿಂದ ಜಾರಿಗೆ ಬರುವಂತೆ ಈ ಬಗ್ಗೆಪ್ರಾಧಿಕಾರದ ನಿರ್ದೇಶನಾಲಯ ಹಾಗೂ ಸದಸ್ಯ ಕಾರ್ಯದರ್ಶಿಗಳ ಕಚೇರಿಯಿಂದ ಅಧಿಸೂಚನೆ ಹೊರಡಿಸಲಾಗಿದೆ. ಈ ಕಾನೂನಿನಂತೆ ಮುಂಬರುವ ದಿನಗಳಲ್ಲಿ ಕೊಳವೆಬಾವಿ ಕೊರೆಯಲು ಜಿಲ್ಲಾ ಮಟ್ಟದ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಪ್ರಸ್ತುತ ಬಳಕೆಯಲ್ಲಿರುವ ಬಳಕೆ ದಾರರು ತಮ್ಮ ಹೆಸರನ್ನು ಅಂತರ್ಜಲ ಪ್ರಾಧಿಕಾರದಲ್ಲಿಕಡ್ಡಾಯವಾಗಿ ನೋಂದಾಯಿಸಿ ಕೊಳ್ಳಬೇಕು. ಅನುಮತಿ ಪಡೆಯ ದಿದ್ದರೆ ಯಾವುದೇ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಅನುಮತಿ ಪಡೆಯದೆ ನೂತನವಾಗಿ ಕೊಳವೆಬಾವಿಕೊರೆಯಲು ಮುಂದಾಗುವ ಭೂ ಮಾಲೀಕರು ಹಾಗೂ ಯಂತ್ರದ ಮಾಲೀಕರ ಮೇಲೆ ಅಧಿನಿಯ ಮದ ಪ್ರಕರಣ 32ರಂತೆ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರೈತ ಕತ್ತು ಹಿಸುಕುವ ಆದೇಶಗಳು: ಆನಂದ್‌ :  ಈ ಸರ್ಕಾರದ ಗೊಂದಲದ ಆದೇಶಗಳು ರೈತರಕತ್ತು ಹಿಸುಕುತ್ತಿವೆ. ಅಂತರ್ಜಲ ಅಭಿವೃದ್ಧಿಗೆ ಅಗತ್ಯವಾದ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರುವ ಯೋಗ್ಯತೆಯಿಲ್ಲದೆ ಇಂಥಕೆಲಸಕ್ಕೆ ಕೈ ಹಾಕಬಾರದು. ಅಂತರ್ಜಲ ಬಳಕೆಯಾಗದಿದ್ದರೆ ಬಯಲು ಸೀಮೆಯರೈತರು ಹೇಗೆ ಕೃಷಿ ಮಾಡಬೇಕು. ಈಗಿರುವ ಕಚೇರಿಗಳಿಲ್ಲಿ ರೈತರನ್ನು ಸತಾಯಿಸುತ್ತಿದ್ದು, ಈಗ ಕೊಳವೆಬಾವಿಯ ಅನುಮತಿಗಾಗಿ ರೈತರ ಜೀವ ಹಿಂಡುತ್ತಾರೆ. ಇಂಥ ತಲೆಕೆಟ್ಟ ಆದೇಶಗಳು ರೈತರಿಗೆ ಮಾರಕವೇ ಹೊರತು, ಒಳಿತಲ್ಲ.

ಕೆಲವೊಮ್ಮೆ ತುರ್ತು ಕೊಳವೆಬಾವಿಯ ಅಗತ್ಯವಿದ್ದಲ್ಲಿ ಈ ಆದೇಶ ಮಾನಹಕ್ಕುಗಳ ಉಲ್ಲಂಘನೆಗೂ ಕಾರಣವಾಗಲಿದೆ ಎಂದು ಜಿಲ್ಲಾ ರೈತಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ಆನಂದಪಟೇಲ್‌ ಆಕ್ರೋಶ ವ್ಯಕ್ತಪಡಿಸಿದರು.

ಕೊಳವೆಬಾವಿಯ ನೀರುಕುಡಿಯಲು ಯೋಗ್ಯವಲ್ಲ.ಆದಷ್ಟೂ ಇದನ್ನು ಶುದ್ಧೀಕರಿಸಬೇಕು.ಅಲ್ಲದೆ ಅತಿಯಾದ ನೀರು ಬಳಕೆಯಿಂದ ಅಂತರ್ಜಲ ಕುಸಿಯುತ್ತದೆ. ಇದಕ್ಕಾಗಿ ಸರ್ಕಾರ ಈ ಆದೇಶ ಮಾಡಿದ್ದು, ಎಲ್ಲಬಳಕೆದಾರರು ಕಾನೂನಿನಂತೆ ಹೆಸರು ನೋಂದಾಯಿಸಲು ಮುಂದಾಗಬೇಕು. – ರಾಮದಾಸು, ಎಇಇ, ಗ್ರಾಮೀಣ ಕುಡಿಯುವ ನೀರು ಇಲಾಖೆ, ಮಧುಗಿರಿ.

 

 -ಮಧುಗಿರಿ ಸತೀಶ್‌

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.