2021ಕ್ಕೆ ಪೈಪ್‌ಲೈನ್‌ ಗ್ಯಾಸ್‌ ಸಂಪರ್ಕ ಯೋಜನೆ ಪೂರ್ಣ

ಒತ್ತಡದಿಂದ ಸ್ಫೋಟಗೊಳ್ಳುವ ಸಾಧ್ಯತೆ ಕಡಿಮೆ • ಜನರಿಗೆ ಶಾಸಕ ಜ್ಯೋತಿಗಣೇಶ್‌ ಅಭಯ

Team Udayavani, Aug 17, 2019, 1:16 PM IST

tk-tdy-3

ತುಮಕೂರು: 2021ರ ವೇಳೆ ನಗರದ ಎಲ್ಲಾ ಮನೆಗಳಿಗೆ ಪೈಪ್‌ಲೈನ್‌ ಗ್ಯಾಸ್‌ ಸಂಪರ್ಕ ಯೋಜನೆ ಜಾರಿಯಾಗಲಿದೆ ಎಂದು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್‌ ತಿಳಿಸಿದರು.

ಮೇಘಾ ಇಂಜಿನಿಯರಿಂಗ್‌ ಮತ್ತು ಇನ್ಫ್ರಾಸ್ಟ್ರಕ್ಚರ್‌, ಭವಿತ್‌ ಕನ್‌ಸ್ಟ್ರಕ್ಷನ್‌ ಸಹಯೋಗದಲ್ಲಿ ನಿರ್ಮಾಣ ಗೊಂಡಿರುವ ಮನೆ ಮನೆಗೆ ಪೈಪ್‌ಲೈನ್‌ ಮೂಲಕ ನೈಸರ್ಗಿಕ ಅಡುಗೆ ಅನಿಲ ಸರಬರಾಜು ಮಾಡುವ ಕಾರ್ಯಕ್ಕೆ ಶುಕ್ರವಾರ 26ನೇ ವಾರ್ಡ್‌ನ ಜಯಮ್ಮ ಕವನಯ್ಯ ಅವರ ಮನೆಯಲ್ಲಿ ಗ್ಯಾಸ್‌ ಸ್ಟೌವ್‌ಗೆ ಚಾಲನೆ ನೀಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಹೆಚ್ಚು ಸುಭದ್ರ: ನಗರದಲ್ಲಿ ಹಲವಾರು ಸ್ಮಾರ್ಟ್‌ಸಿಟಿ ಕಾಮಗಾರಿಗಳು ನಡೆಯುತ್ತಿವೆ. ಮನೆಮನೆಗೆ ಗ್ಯಾಸ್‌ ಸಂಪರ್ಕ ನೀಡುವ ಕಾಮಗಾರಿ ಪ್ರಗತಿಯಲ್ಲಿದ್ದು, ಈಗಾಗಲೇ ಹಲವು ಬಡಾವಣೆಗಳಲ್ಲಿ ಮನೆಗಳಿಗೆ ಪೈಪ್‌ಲೈನ್‌ ಗ್ಯಾಸ್‌ ಸಂಪರ್ಕ ನೀಡಲಾಗಿದೆ. ಅಡುಗೆ ಅನಿಲ ಸಿಲಿಂಡರ್‌ಗೆ ಹೋಲಿಸಿದರೆ ಪೈಪ್‌ಲೈನ್‌ ಮೂಲಕ ಸರಬರಾಜು ಹೆಚ್ಚು ಸುಭದ್ರ ಎನ್ನ ಲಾಗುತ್ತಿದೆ. ಇದರಲ್ಲಿ ಸರಬರಾಜಾಗುವುದು ನೈಸರ್ಗಿಕ ಇಥೇನ್‌ ಗ್ಯಾಸ್‌, ಒತ್ತಡದಿಂದ ಸ್ಫೋಟ ಗೊಳ್ಳುವ ಸಾಧ್ಯತೆ ಕಡಿಮೆ ಎಂದು ಹೇಳಿದರು.

ಇದೊಂದು ಒಳ್ಳೆಯ ಯೋಜನೆ. ಸ್ಮಾರ್ಟ್‌ ಸಿಟಿ ಯಾಗುತ್ತಿರುವ ತುಮಕೂರು ಮತ್ತಷ್ಟು ಸುಸಜ್ಜಿತವಾಗಿ ಹೊಗೆ ರಹಿತ ನಗರವಾಗಲು ಇದು ಸಹಕಾರಿ. ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೇಯರ್‌ ಲಲಿತಾ ರವೀಶ್‌ ಸಲಹೆ ನೀಡಿದರು.

ಚಾಲ್ತಿಯಲ್ಲಿದೆ ಹಲವು ಯೋಜನೆ: 26ನೇ ವಾರ್ಡ್‌ ಕೌನ್ಸಿಲರ್‌ ಮಲ್ಲಿಕಾರ್ಜುನ ಮಾತನಾಡಿ, 26ನೇ ವಾರ್ಡ್‌ ಪ್ರಾಯೋಗಿಕವಾಗಿ ಅನೇಕ ಹೊಸ ಯೋಜನೆ ಅಳವಡಿಸಿಕೊಳ್ಳುವ ಮೂಲಕ ಇತರ ವಾರ್ಡ್‌ಗಳಿಗೆ ಮಾದರಿಯಾಗಿದೆ. ಕುಡಿಯುವ ನೀರಿಗೆ ಮೀಟರ್‌ ಅಳವಡಿಕೆ, ಮನೆಗಳಿಗೆ ಪೈಪ್‌ಲೈನ್‌ ಮೂಲಕ ಗ್ಯಾಸ್‌ ವಿತರಣೆ ಸೇರಿ ಹಲವು ಯೋಜನೆ ಗಳು ಈಗಾಗಲೇ ಚಾಲ್ತಿಯಲ್ಲಿದ್ದು, ಎಲ್ಲರೂ ನೀರು ಮತ್ತು ಗ್ಯಾಸ್‌ ಸಂಪರ್ಕ ಪಡೆದರೆ ಅನುಕೂಲ ಆಗಲಿದೆ ಎಂದು ಹೇಳಿದರು.

ಶೇ. 40ರಷ್ಟು ಮನೆಗಳಿಗೆ ಈಗಾಗಲೇ ಸಂಪರ್ಕ:

ಇಂಜಿನಿಯರ್‌ ಅಜೇಯ್‌ ರೆಡ್ಡಿ ಮಾತನಾಡಿ, ತುಮಕೂರು ನಗರಕ್ಕೆ 2021ರೊಳಗೆ ಮನೆ ಮನೆಗೆ ಗ್ಯಾಸ್‌ ಪೈಪ್‌ಲೈನ್‌ ಅಳವಡಿಸುವ ಗುತ್ತಿಗೆ ಪಡೆದಿ ದ್ದೇವೆ. ಸಿಲಿಂಡರ್‌ ಮೂಲಕ ಗ್ಯಾಸ್‌ ಪಡೆಯುವುದಕ್ಕೆ ಹೋಲಿಸಿದರೆ ಇದು ಅತ್ಯಂತ ಸುರಕ್ಷಿತ ಮತ್ತು ಉಳಿತಾಯದಾಯಕ. ಈಗಾಗಲೇ ಗೋಕುಲ, ಸಪ್ತಗಿರಿ, ಜಯನಗರ, ಉಪ್ಪಾರಹಳ್ಳಿ, ಎಸ್‌ಐಟಿ, ಸಿದ್ದರಾಮೇಶ್ವರ ಬಡಾವಣೆ ಸೇರಿ ನಗರದ ಶೇ. 40ರಷ್ಟು ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಏನೇ ತೊಂದರೆಯಾದರೂ ಅರ್ಧ ಗಂಟೆಯೊಳಗೆ ಸರಿ ಪಡಿಸುವ ಕೆಲಸವನ್ನು ಕಂಪನಿ ಮಾಡಲಿದೆ ಎಂದು ಭರವಸೆ ನೀಡಿದರು.

ಪಾಲಿಕೆಯ ಆಯುಕ್ತ ಟಿ. ಭೂಬಾಲನ್‌, ಮುಖಂಡರಾದ ಚಂದ್ರಪ್ಪ, ಕೊಪ್ಪಲ್ನಾಗರಾಜು, ಭವಿತ ಕನ್‌ಸ್ಟ್ರಕ್ಷನ್‌ನ ಅಲ್ಲಮಪ್ರಭು ಮತ್ತಿತರರಿದ್ದರು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.