ರಾಜಕೀಯ ದ್ವೇಶ: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು: ಲಕ್ಷಾಂತರ ಮೀನು ಮಾರಣ ಹೋಮ
Team Udayavani, Nov 27, 2022, 11:07 AM IST
ಕುಣಿಗಲ್: ರಾಜಕೀಯ ದ್ವೇಷದಿಂದಾಗಿ ಕೆರೆಗೆ ವಿಷ ಹಾಕಿ ಲಕ್ಷಾಂತರ ಮೀನುಗಳ ಮಾರಣಹೋಮ ಮಾಡಿದ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿಯ ವಡಾಘಟ್ಟ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಜೋಡಿ ಹೊಸಹಳ್ಳಿ ಗ್ರಾಮದ ಚಂದನ್ ಎಂಬವರು ಈ ಕೆರೆಯನ್ನ ಮೀನು ಸಾಕಾಣಿಕೆ ಮಾಡಲೆಂದು ಗುತ್ತಿಗೆಗೆ ಪಡೆಕೊಂಡಿದ್ದರು. ಚಂದನ್ ಪತ್ನಿ ಚೈತ್ರ ಗ್ರಾಮ ಪಂಚಾಯತ್ ಸದಸ್ಯೆಯಾಗಿದ್ದು, ಈ ಕಾರಣ ರಾಜಕೀಯ ದ್ವೇಷಕ್ಕಾಗಿ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿ ವಿಕೃತಿ ಮೆರೆದಿದ್ದಾರೆ ಎನ್ನಲಾಗಿದೆ.
ಚಂದನ್ ಕಳೆದ ಎರಡು ತಿಂಗಳ ಹಿಂದೆ ಬರೋಬ್ಬರಿ ಐದುವರೆ ಲಕ್ಷ ಮೀನಿನ ಮರಿಗಳನ್ನು ಕೆರೆಗೆ ಬಿಟ್ಟಿದ್ದು, ಹಗಲು ರಾತ್ರಿ ಎನ್ನದೆ ನಿದ್ದೆಗೆಟ್ಟು ಮೀನುಗಳನ್ನು ಸಾಕುತ್ತಿದ್ದರು. ಕೆರೆಗೆ ವಿಷ ಮಿಶ್ರಣವಾದ ಹಿನ್ನೆಲೆ ಕೆರೆಯಲ್ಲಿದ್ದ ಮೀನುಗಳೆಲ್ಲಾ ಮಾರಣಹೋಮವಾಗಿರುವುದು ಬೆಳಗ್ಗೆ ಗ್ರಾಮಸ್ಥರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?
ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ
ಅಫ್ರಿದಿ ಮಗಳನ್ನು ವರಿಸಿದ ಶಾಹೀನ್ ಅಫ್ರಿದಿ: ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾದ ಸಹ ಆಟಗಾರರು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಕಿ ಕೋಚ್ ಹುದ್ದೆಗೆ ವಿದೇಶಿಯರ ರೇಸ್