ಮರಳು ಲಾರಿಗಳಿಂದ ಮಾಲಿನ್ಯ: ಅಪಘಾತ
Team Udayavani, Dec 14, 2020, 6:11 PM IST
ತಿಪಟೂರು: ನಗರದ ಬಿ.ಎಚ್. ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ದೊಡ್ಡ ಲಾರಿಗಳು ಜಲ್ಲಿ ಮತ್ತು ಮರಳನ್ನು ಅಕ್ರಮವಾಗಿ ತುಂಬಿಕೊಂಡು ಹೋಗುವಾಗ ಲಾರಿಯಲ್ಲಿರುವ ಮರಳು, ಜಲ್ಲಿ ಎಲ್ಲೆಂದರಲ್ಲಿ ಚಲ್ಲಾಡಿ ಬೀಳುತ್ತಿರುವುದರಿಂದ ಹಿಂಬದಿ ವಾಹನ ಸವಾರರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ಪೊಲೀಸರು ಹಾಗೂ ಆರ್ಟಿಒ ಜಾಣ ಕುರುಡು ವ್ಯಕ್ತಪಡಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆಕಾರಣವಾಗಿದೆ.
ನಗರದ ಪ್ರಮುಖ ಬಿ.ಎಚ್. ರಸ್ತೆ, ಹಾಲ್ಕುರಿಕೆ, ಹಾಸನ, ತುರುವೇಕೆರೆ ರಸ್ತೆಗಳಲ್ಲಿ ಪ್ರತಿದಿನ ದೊಡ್ಡ ದೊಡ್ಡ ಟಿಪ್ಪರ್ ಲಾರಿ, ಟ್ರಕ್ಗಳಲ್ಲಿ ಅಕ್ರಮವಾಗಿ ನಾನಾಕಾಮಗಾರಿಗಳಿಗಾಗಿಜಲ್ಲಿ,ಮರಳನ್ನುಓವರ್ಲೋಡ್ಮಾಡಿಕೊಂಡು ಸಾಗಾಟ ನಡೆಸುತ್ತಿವೆ. ಆದರೆ, ಸಂಚಾರದ ವೇಳೆ ಲಾರಿಗಳಿಂದ ಮರಳು ಜಲ್ಲಿ ಚೆಲ್ಲಾಡುತ್ತಿರುವ ಕಾರಣ ರಸ್ತೆಯಲ್ಲಿ ಸಂಚರಿಸುವ ಇತರ ವಾಹನ ಸವಾರರಿಗೆ ತೊಂದರೆ ಯಾಗುತ್ತಿದೆ.
ಇಂತಹ ಲಾರಿಗಳು ಬಂದ ತಕ್ಷಣ ಬದಿಯಲ್ಲಿ ನಿಂತುನಂತರ ಸವಾರರು ಹೋಗುವಂತಾಗಿದೆ. ಇದರಿಂದ ವಾಹನ ಚಲಾಯಿಸಲಾಗದೆ ಎಷ್ಟೋ ಅಪಘಾತಗಳು ನಡೆಯುತ್ತಿವೆ. ಅಲ್ಲದೆ ಲಾರಿಗಳಲ್ಲಿರುವ ಜಲ್ಲಿ ಕಲ್ಲು ರಸ್ತೆಯುದ್ದಕ್ಕೂ ಚೆಲ್ಲುವುದರಿಂದ ವಾಹನಗಳು ಆಯಾತಪ್ಪಿ ಬಿದ್ದಿರುವ ನಿದರ್ಶನಗಳೂ ಹೆಚ್ಚಿವೆ.
ಕಿತ್ತು ಬರುತ್ತಿರುವ ಡಾಂಬರು : ನಿಗದಿತ ಪ್ರಮಾಣಕ್ಕಿಂತ ಹೆಚ್ಚು ತೂಕದ ಮರಳು, ಜಲ್ಲಿಹಾಕಿಕೊಂಡು ಓಡಾಡುತ್ತಿರುವ ಲಾರಿಗಳಿಂದ ಚನ್ನಾಗಿರುವ ರಸ್ತೆಗಳೆಲ್ಲಾ ಕಿತ್ತು ಹಾಳಾಗುತ್ತಿವೆ. ಡಾಂಬರು ಹಾಳಾದ ತಕ್ಷಣವೇ ರಸ್ತೆಗಳೆಲ್ಲಾ ಗುಂಡಿ ಬೀಳಿತ್ತಿದ್ದರೂ ಪೊಲೀಸರು ಹಾಗೂ ಆರ್ಟಿಒ ಮತ್ತು ನ್ಯಾಷನಲ್ ಹೈವೇ ಪ್ರಾಧಿಕಾರ ಯಾವುದೇಕ್ರಮ ಜರುಗಿಸದೆ ಲಾರಿಯವರಿಗೇ ಸಹಕಾರ ನೀಡುತ್ತಿದ್ದಾರೆಂಬುದು ಸವಾರರ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆಕಾರಣವಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕ್ರೀಡಾಂಗಣ ಮೇಲ್ಛಾವಣಿ ನಿರ್ಮಾಣ ಕಾರ್ಯ ಚುರುಕು
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ವಯಂಘೋಷಿತ ಮುಖ್ಯಮಂತ್ರಿ: ಈಶ್ವರಪ್ಪ ವ್ಯಂಗ್ಯ
ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ನಂ. 1 : ಸತೀಶ್ ಜಾರಕಿಹೊಳಿ
ಬಾಲಕನಿಗೆ ಹಾವು ಕಡಿತ: ಔಷಧಿ ಇಲ್ಲವೆಂದ ವೈದ್ಯರು, ಬಾಲಕ ಸಾವು
ಅಹಮದಾಬಾದ್, ಸೂರತ್ ನಗರಕ್ಕೆ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಮೋದಿ ಚಾಲನೆ