ಗುಣಮಟ್ಟದ ಕಾಮಗಾರಿಗೆ ಆದ್ಯತೆ
Team Udayavani, Nov 28, 2020, 1:57 PM IST
ಮಧುಗಿರಿ: ದೊಡ್ಡೇರಿ ಹೋಬಳಿಯ ಗಡಿಗ್ರಾಮ ಸಜ್ಜೆಹೊಸಹಳ್ಳಿಯ ಸಕಲ ಅಭಿವೃದ್ಧಿಗಾಗಿ 50 ಲಕ್ಷ ರೂ. ವೆಚ್ಚದಲ್ಲಿ ಸುವರ್ಣಗ್ರಾಮ ಯೋಜನೆಯಡಿ ಕಾಮಗಾರಿ ಕೈಗತ್ತಿ ಕೊಂಡಿದ್ದು, ಗುಣಮಟ್ಟದ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ಹೇಳಿದರು.
ತಾಲೂಕಿನ ದೊಡ್ಡೇರಿ ಹೋಬಳಿಯ ಸಜ್ಜೆಹೊಸಹಳ್ಳಿಯಲ್ಲಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಆಂಧ್ರಗಡಿಗೆ ಹೊಂದಿಕೊಂಡಿರುವ ಈ ಗ್ರಾಮದಲ್ಲಿ ಮೂಲಭೌತ ಸೌಕರ್ಯಕ್ಕಾಗಿ ಈ ಸುವರ್ಣಗ್ರಾಮ ಯೋಜನೆಯನ್ನು ಅನುಷ್ಠಾನಗೊಳಿಸಿದ್ದೇವೆ. ಇದು ಹೆಚ್ಚುವರಿ ಅನುದಾನದಿಂದ ತಂದಿದ್ದು, 6 ಸಿಸಿ ರಸ್ತೆ, 6 ಚರಂಡಿ ಒಳಗೊಂಡ ಕಾಮಗಾರಿಯನ್ನು ಕೆಆರ್ ಐಡಿಎಲ್ ಇಲಾಖೆಗೆ ನೀಡಿದ್ದು, ಗುಣಮಟ್ಟದ ಕಾಮಗಾರಿಯನ್ನು ಮಾಡಲು ಸೂಚಿಸಲಾಗಿದೆ ಎಂದರು.
ಈಗಾಗಲೇ 8 ಕೋಟಿ ವೆಚ್ಚದಲ್ಲಿ ಕವಣದಾಲ, ಪೂಜಾರಹಳ್ಳಿ, ಬಡವನಹಳ್ಳಿ ಬಳಿ ಸುವರ್ಣಮುಖೀ ನದಿಯ ಸೇತುವೆಯ ಎರಡೂ ಕಡೆ ಹಾಗೂ ತೆರಿಯೂರು ಗ್ರಾಮಗಳಲ್ಲಿ ಚೆಕ್ಡ್ಯಾಂ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಕೆಲವೇ ದಿನದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಪಿಡಿಒ ಪ್ರಶಾಂತ್, ಬಾವಿಮನೆ ಕಾಂತಣ್ಣ, ವೆಂಕಟೇಶಗೌಡ, ಹನುಮಂತರಾಯಪ್ಪ, ಕುಮಾರ್, ಲೋಕೆಶ್, ಮಾಜಿ ಸದಸ್ಯರಾದ ಶೇಷಣ್ಣ, ಮಹದೇವಪ್ಪ, ಅಜೀಜ್ಖಾನ್, ಇಂಜಿನಿಯರ್ ಹನುಮಂತರಾಯಪ್ಪ ಹಾಗೂ ಇತರರು ಇದ್ದರು.
ವಿನಾಕಾರಣ ಕೆಲವರಿಂದ ಕೈಗಾರಿಕಾ ವಲಯಕ್ಕೆ ಅಡ್ಡಿ : ಮುಖ್ಯವಾಗಿ ಕ್ಷೇತ್ರದ ಹೆಣ್ಣುಮಕ್ಕಳಿಗೆ ಹಾಗೂ ನಿರುದ್ಯೋಗ ಯುವಕರಿಗೆ ಅನುಕೂಲವಾಗಲು ಕುಮಾರಸ್ವಾಮಿ ಅವಧಿಯಲ್ಲಿಕೈಗಾರಿಕಾ ವಲಯ ಮಂಜೂರಾಗಿದ್ದು,ಕೆಲವರು ವಿನಾಕಾರಣ ಅಡ್ಡಿಪಡಿಸುವಕೆಟ್ಟಕೆಲಸಕ್ಕೆಕೈಹಾಕಿದ್ದಾರೆ. ಈ ಯೋಜನೆಯನ್ನು ನಿಲ್ಲಿಸಲು ಯಾವುದೇ ಕಾರಣಕ್ಕೂ ಬಿಡಲ್ಲ. ಅಡ್ಡಿಪಡಿಸಿದವರು ಯಾರೆಂದು ಮುಂದೆ ಜನತೆಯ ಮುಂದೆ ಬಹಿರಂಗ ಮಾಡುತ್ತೇನೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
145 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆ