ಗ್ರಾಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ

ಕೋವಿಡ್ ತಡೆಗಟ್ಟುವಲ್ಲಿ ಪಿಡಿಒ ಪಾತ್ರ ಮಹತ್ವದ್ದು: ಶಾಸಕ

Team Udayavani, Apr 28, 2020, 4:27 PM IST

ಗ್ರಾಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ

ಸಾಂದರ್ಭಿಕ ಚಿತ್ರ

ಮಧುಗಿರಿ: ಕ್ಷೇತ್ರದಲ್ಲಿ ಕೋವಿಡ್ ಯದ್ಧದ ಹೋರಾಟದಲ್ಲಿ ಪಿಡಿಒಗಳ ಪಾತ್ರ ಮಹತ್ವದ್ದಾಗಿದ್ದು, ಎಲ್ಲರೂ ಒಟ್ಟಾಗಿ ಹೋರಾಡೋಣ ಎಂದು ಶಾಸಕ ಎಂ.ವಿ.ವೀರ ಭದ್ರಯ್ಯ ಪಿಡಿಒಗಳಿಗೆ ಆತ್ಮವಿಶ್ವಾಸ ತುಂಬಿದರು. ಪಟ್ಟಣದ ತಾಪಂನಲ್ಲಿ ನಡೆದ ಪಿಡಿಒಗಳ ಸಭೆಯಲ್ಲಿ ಮಾತನಾಡಿ, ಗ್ರಾಮಗಳಲ್ಲಿ ಸ್ವಚ್ಛತೆಗೆ ಹಾಗೂ ಕುಡಿವ ನೀರಿಗೆ ಆದ್ಯತೆ ನೀಡಿ. 14ನೇ ಹಣಕಾಸು ಅನುದಾನ ಸಂಪೂರ್ಣ ಕೋವಿಡ್ ವಿರುದ್ಧ ಬಳಕೆಯಾಗಲಿ.

ನೂತನ ಬೋರ್‌ವೆಲ್‌ ಬದಲು ದಾಖಲೆ ಪಡೆದು ಖಾಸಗಿಯಾಗಿ ನೀರು ಪಡೆಯಿರಿ. ಈಗಾಗಲೇ ಮಾಸ್ಕ್, ಸ್ಯಾನಿ ಟೈಸರ್‌ ನೀಡಿದ್ದು, ಸಾಮಾಜಿಕ ಅಂತರ ಕಾಪಾಡಿ. 14 ಗ್ರಾಮಗಳಲ್ಲಿ ಕುಡಿವ ನೀರಿಗೆ ಸಮಸ್ಯೆಯಿದ್ದು, ಕಾರ್ಡ್‌ ಇಲ್ಲದಿದ್ದರೂ ಪಡಿತರ ವಿತರಣೆಗೆ ಕ್ರಮವಹಿಸಿ ಎಂದರು. ನೀರಿನ ಸಮಸ್ಯೆಗೆ ಹಣದ ಕೊರತೆಯಿಲ್ಲ. ಕೆಲವು ಕಡೆ ನಿರಂತರ ಜ್ಯೋತಿ ವಿದ್ಯುತ್‌ಗೆ ಬೇಡಿಕೆಯಿದ್ದು, ಸರಿಪಡಿಸಲು ಬೆಸ್ಕಾಂಗೆ ಸೂಚಿಸಿದರು. ಸರ್ಕಾರ ಟ್ಯಾಂಕರ್‌ ನೀರಿಗೆ 625 ರೂ. ನಿಗದಿ ಮಾಡಿದ್ದು, ಯಾರೂ ಮುಂದೆ ಬರುತ್ತಿಲ್ಲ ಎಂದಾಗ ಉಳಿದ ಹೆಚ್ಚುವರಿ 150 ರೂ. ನನ್ನ ಕಿಸೆಯಿಂದಲೇ ನೀಡುತ್ತೇನೆ ದಾಖಲೆಯಿಟ್ಟು ನೀರು ಒದಗಿಸಿ ಎಂದು ತಿಳಿಸಿದರು.

ಮೇ ತಿಂಗಳಲ್ಲಿ ಹೇಮಾವತಿ ಜಲಾಶಯದಿಂದ ತಾಲೂಕಿಗೆ ಮತ್ತೂಂದು ಸುತ್ತಿನಲ್ಲಿ ನೀರು ಹರಿಯಲಿದೆ. ನೀರಿನ ಅನುದಾನ 25 ಲಕ್ಷವಿದ್ದು, ಬೇಗ ಬಿಡುಗಡೆ ಮಾಡಲು ತಹಶೀಲ್ದಾರ್‌ಗೆ ಸೂಚಿಸಿದರು. 35 ಆರ್‌ಒ ಪ್ಲಾಂಟ್‌ಗಳು ದುಸ್ಥಿತಿಯಲ್ಲಿದ್ದು, ಹಣ ಪಡೆದ ಗುತ್ತಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಗ್ರಾಪಂ ವಶಕ್ಕೆ ಪಡೆಯುವಂತೆ ಸೂಚಿಸಿದರು. ಪುರವರ ಹೋಬಳಿ ಕ್ಷೇತ್ರಕ್ಕೆ ಸೇರಿಲ್ಲವಾದರೂ 4 ಕೊಳವೆಬಾವಿ ನೀಡಿದ್ದು, ರಸ್ತೆ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.

ತಹಶೀಲ್ದಾರ್‌ ಡಾ.ವಿಶ್ವನಾಥ್‌, ಇಒ ದೊಡ್ಡಸಿದ್ದಯ್ಯ, ಸದಸ್ಯ ನಾಗಭೂಷಣ್‌, ಮುಖ್ಯಾಧಿಕಾರಿ ಅಮರ ನಾರಾಯಣ್‌, ಆಹಾರ ಶಿರಸ್ತೇದಾರ್‌ ಗಣೇಶ್‌, ಬೆಸ್ಕಾಂ ಇಇ ಹರೀಶ್‌, ಎಇಇ ಕೃಷ್ಣಮೂರ್ತಿ ಹಾಗೂ 33 ಗ್ರಾಪಂಗಳ ಪಿಡಿಒಗಳು ಇದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.