ಖಾಸಗೀಕರಣದಿಂದ ಉತ್ಪಾದನೆ ಸಂಪತ್ತು ಕ್ಷೀಣ

ಜಿಲ್ಲೆಯ ವಿವಿಧೆಡೆ ವಿಶ್ವ ಕಾರ್ಮಿಕರ ದಿನಾಚರಣೆ • ಕಾರ್ಮಿಕರ ಸಾಮಾಜಿಕ ಭದ್ರತೆ, ಸಾರ್ವಜನಿಕ ಉದ್ದಿಮೆಗಳ ಉಳಿವಿಗೆ ಆಗ್ರಹ

Team Udayavani, May 2, 2019, 12:39 PM IST

tumkur-4..

ತುಮಕೂರಿನಲ್ಲಿ ಬುಧವಾರ ನಡೆದ ವಿಶ್ವಕಾರ್ಮಿಕರ ದಿನಾಚರಣೆಯಲ್ಲಿ ಜನಪರ ಚಿಂತಕ ಪ್ರೊ.ಕೆ.ದೊರೈರಾಜ್‌ ಮಾತನಾಡಿದರು.

ತುಮಕೂರು: ನಾವು ಬದುಕುತ್ತಿರುವ ಕಾಲಘಟ್ಟದಲ್ಲಿ ಭಾವೋದ್ವೇಗ ವಿಜೃಂಭಿಸುತ್ತಿದೆ. ಉದ್ಯೋಗಗಳನ್ನು ಕಿತ್ತುಕೊಳ್ಳುವಂತಹ ಖಾಸಗೀಕರಣ ಬಂದಿದೆ. ಗುತ್ತಿಗೆ ಪದ್ಧತಿ ಬಂದಿದೆ. ಇದು ಸರ್ಕಾರವೇ ತಂದಿರುವ ಅಧಿಕೃತ ಜೀತದ ಕೆಲಸವಾಗಿದೆ. ಜನರ ಮಾಲೀಕತ್ವ ಇರುವ ಉದ್ದಿಮೆಗಳನ್ನು ಖಾಸಗೀಕರಣ ಗೊಳಿಸಿ, ಹೆಚ್ಚಾಗಿ ಉತ್ಪಾದನೆಯಾಗುತ್ತಿದ್ದ ಸಂಪತ್ತು ಕ್ಷೀಣ ಗೊಳಿಸಲಾಗುತ್ತಿದೆ ಎಂದು ಜನಪರ ಚಿಂತಕ ಪ್ರೊ.ಕೆ.ದೊರೈರಾಜ್‌ ತಿಳಿಸಿದರು. ನಗರದ ಟೌನ್‌ಹಾಲ್ನಲ್ಲಿ ಸಿಐಟಿಯು ವತಿ ಯಿಂದ ಬುಧವಾರ ಏರ್ಪ ಡಿಸಿದ್ದ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ವನ್ನು ಉದ್ಘಾಟಿಸಿದ ಅವರು ಮಾತನಾಡಿ, ಕಾರ್ಮಿಕರ ಹಕ್ಕುಗಳ ರಕ್ಷಣೆ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ, ಸಾರ್ವ ಜನಿಕ ಉದ್ದಿಮೆಗಳ ಉಳಿವಿಗಾಗಿ ಕ್ರಮ ಕೈಗೊಳ್ಳಬೇಕು. ಗುತ್ತಿಗೆ ನೌಕರರ ಶೋಷಣೆ, ನಿರುದ್ಯೋಗ, ಬಡತನ, ಹಸಿವು ಇರುವಂತಹ ಕಾಲ ಘಟ್ಟದಲ್ಲಿ ನಾವಿದ್ದೇವೆ. ಇವು ಆರ್ಥಿಕ ವಿಷಯಗಳಿಗೆ ಸಂಬಂಧಿಸಿದವು ಗಳಾಗಿವೆ. ಇಂತಹ ಅಪರಾಧಿ ಮನೋಭಾವದಿಂದ ಸಾಂಸ್ಕೃತಿಕ ವಿಕೃತಿ ಉಂಟಾ ಗುತ್ತಿದೆ. ಮಹಿಳೆಯರ ಮೇಲೆ ಅತ್ಯಾಚಾರ ನಡೆಯು ತ್ತಿದೆ. ಕೇವಲ ಆರ್ಥಿಕ ಶೋಷಣೆ ಮಾತ್ರವಲ್ಲದೆ, ಸಾಂಸ್ಕೃತಿಕ ವಿಕೃತಿಯೂ ನಡೆಯುತ್ತಿದ್ದು, ಜನರನ್ನು ಘಾಸಿಗೊಳಿಸಿವೆ ಎಂದು ತಿಳಿಸಿದರು.

ಉದ್ಯೋಗ, ಹಸಿವೆ ನೀಗಿಸಲು ಹೋರಾಟ: ಉದ್ಯೋಗ, ಹಸಿವೆ ನೀಗಿಸಲು, ಅತ್ಯಾಚಾರ ವಿರುದ್ಧ ಹೋರಾಟ ಮಾಡುತ್ತೇವೆ. ಆದರೆ, ಈಗ ಹೊಸ ದೊಂದು ಸವಾಲು ಎದುರಾಗಿದ್ದು, ಜನರನ್ನು ಧರ್ಮ, ಭಾಷೆ, ಪ್ರಾದೇಶಿಕತೆ ಹೆಸರಿನಲ್ಲಿ ಭಾವೋ ದ್ವೇಗಗೊಳಿಸಿ ಓಟು ಪಡೆದು ಅಧಿಕಾರ ಹಿಡಿಯುವ ತಂತ್ರ ಹೆಚ್ಚಾಗುತ್ತಿದೆ. ಈ ಮೂಲಕ ಬಂಡವಾಳ ಶಾಹಿಗಳಿಗೆ ವ್ಯವಸ್ಥೆಯನ್ನು ಒತ್ತೆ ಇಡುವ ಕೆಲಸ ನಡೆ ಯುತ್ತಿದೆ. ಸರ್ವಾಧಿಕಾರದ ಕಡೆಗೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದರ ಬಗ್ಗೆ ಕಾರ್ಮಿ ಕರು ಮತ್ತು ಜನರು ಎಚ್ಚರದಿಂದ ಇರಬೇಕು. ಬಂಡವಾಳ ಶಾಹಿ, ಕಾರ್ಪೋರೇಟ್ ಶಕ್ತಿಗಳು ಮತ್ತು ಕೋಮುವಾದಿಗಳನ್ನು ಹಿಮ್ಮೆಟ್ಟಿಸಬೇಕು. ಇಲ್ಲದಿದ್ದರೆ ನಮಗೆ ಉಳಿಗಾಲವಿಲ್ಲ. ಎಲ್ಲಾ ಶ್ರಮಿಕರ ಐಕ್ಯತೆ ಮೂಲಕ ಇದು ಸಾಧ್ಯ. ಧರ್ಮ, ಜಾತಿ, ಮತವನ್ನು ಪ್ರಾದೇಶಿಕತೆ ಮತ್ತು ಭಾಷೆಯನ್ನು ಮೆಟ್ಟಿ ನಿಲ್ಲಬೇಕು. ಸಮಾಜದಲ್ಲಿ ದ್ವೇಷವನ್ನು ಉಂಟು ಮಾಡುವ ಶಕ್ತಿಗಳನ್ನು ಸೋಲಿಸಬೇಕು. ಇದನ್ನು ಸಾವು ಬದುಕಿನ ನಡುವಿನ ಹೋರಾಟ ಎಂದರು.

ಹೋರಾಟದಿಂದ ಕಾರ್ಮಿಕರಿಗೆ ನ್ಯಾಯ: ಮನುಷ್ಯರ ಘನತೆಯ ಬದುಕಿಗಾಗಿ ಶತಮಾನದ ಹಿಂದಿನಿಂದಲೂ ಕಾರ್ಮಿಕರು ಹೋರಾಟ ನಡೆಸಿದ ಪರಿಣಾಮ ಇಂದು ಕಾರ್ಮಿಕರು ಉಸಿರಾಡುವ, ನ್ಯಾಯ ಪಡೆಯುವಂತಹ ವಾತಾವರಣ ನಿರ್ಮಾಣ ವಾಗಿದೆ. ಇದಕ್ಕೆ ಎಡಪಂಥೀಯ ಹೋರಾಟವೇ ಕಾರಣವಾಗಿದೆ. ಪ್ರತಿವರ್ಷದ ಮೇ 1ರಂದು ಕಾರ್ಮಿಕ ದಿನವನ್ನು ಅಚರಣೆ ಮಾಡುವಂತಹ ಕಾಲ ಘಟ್ಟದಲ್ಲಿ ನಾವಿಲ್ಲ. ಹೀಗಾಗಿ ನಮ್ಮ ಚಿಂತನೆಗಳನ್ನು ವಿಸ್ತಿರಿಸಿಕೊಳ್ಳುವಂತಹ, ನಮ್ಮ ಹೋರಾಟಕ್ಕೆ ಹೆಚ್ಚಿನ ಬಲವನ್ನು ಚೈತನ್ಯವನ್ನು ತುಂಬಿಕೊಳ್ಳುವಂತಹ ಕೆಲಸವನ್ನು ನಾವಿಂದು ಮಾಡಬೇಕಾಗಿದೆ. ಈ ಬಗ್ಗೆ ವ್ಯಾಪಕ ಚರ್ಚೆ ನಡೆಸಿ ಹೋರಾಟ ಮಾಡಬೇಕಾಗಿದೆ. ನಾವು ಬದುಕುತ್ತಿರುವ ಕಾಲಘಟ್ಟದಲ್ಲಿನ ಸವಾಲು ಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ನೌಕರರಿಗೆ ಕನಿಷ್ಠ ವೇತನ ಜಾರಿಯಾಗಿಲ್ಲ: ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್‌ ಮುಜೀಬ್‌ ಮಾತನಾಡಿ, ಉಪಮುಖ್ಯ ಮಂತ್ರಿಗಳ ವಿದ್ಯಾಸಂಸ್ಥೆಗಳಲ್ಲಿ ದುಡಿಯುತ್ತಿರುವ ನೌಕರರಿಗೆ ಕನಿಷ್ಠ ವೇತನ ಜಾರಿಯಾಗಿಲ್ಲ. ಕಾರ್ಮಿಕ ಸಚಿವ ವೆಂಕಟರವಣಪ್ಪ ಕಾರ್ಮಿಕರ ಸಂಘದ ಪ್ರಮುಖರ ಜೊತೆ ಇದುವರೆಗೂ ಸಭೆ ನಡೆಸಿ ಕಾರ್ಮಿಕರ ಅಹವಾಲನ್ನು ಕೇಳುವ ಗೋಜಿಗೆ ಹೋಗಿಲ್ಲ. ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕ ಅಧಿಕಾರಿ, ಇನ್ಸ್‌ಪೆಕ್ಟರ್‌ ಹುದ್ದೆಗಳ ಖಾಲಿ ಇದ್ದರೂ ಗಮನಹರಿಸುತ್ತಿಲ್ಲ ಎಂದು ದೂರಿದರು.

ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಬಿ.ಉಮೇಶ್‌, ಬಿಎಸ್‌ಎನ್‌ಎಲ್ ನೌಕರರ ಸಂಘದ ಮುಖಂಡ ನರೇಶ್‌ರೆಡ್ಡಿ, ಜೀವ ವಿಮಾ ನೌಕರರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ, ಯುವ ಮುಖಂಡ ಎಸ್‌.ರಾಘವೇಂದ್ರ, ಪ್ರಾಂತ ರೈತ ಸಂಘದ ಸಂಚಾಲಕ ಸಿ. ಅಜ್ಜಪ್ಪ, ಅಂಗನವಾಡಿ ನೌಕರರ ಸಂಘದ ಜಿ.ಕಮಲ, ಬೋಧಕೇತರ ನೌಕರರ ಸಂಘದ ಟಿ.ಜಿ.ಶಿವಲಿಂಗಯ್ಯ, ಸಿಐಟಿಯ ಪ್ರಧಾನ ಕಾರ್ಯ ದರ್ಶಿ ಎನ್‌.ಕೆ.ಸುಬ್ರಮಣ್ಯ, ಆಸ್ಪತ್ರೆ ನೌಕರರ ಸಂಘದ ರಂಗಮ್ಮ, ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.