ಮೂರು ಇಲಾಖೆ ವಿಲೀನದ ಬಗ್ಗೆ ಚರ್ಚೆ


Team Udayavani, Sep 1, 2020, 3:30 PM IST

ಮೂರು ಇಲಾಖೆ ವಿಲೀನದ ಬಗ್ಗೆ  ಚರ್ಚೆ

ತುಮಕೂರು: ಪ್ರವಾಸೋದ್ಯಮ, ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಗಳನ್ನು ವಿಲೀನಗೊಳಿಸಿ ಒಂದೇ ಸಚಿವಾಲಯದಡಿ ತರುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆದಿದೆ. ಈ ಸಂಬಂಧ ಕಂದಾಯ ಸಚಿವರ ಗಮನಕ್ಕೆ ತರಲಾಗಿದೆ ಎಂದು ಪ್ರವಾಸೋದ್ಯಮ , ಕನ್ನಡ ಮತ್ತು ಸಂಸ್ಕೃತಿ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಸಿ.ಟಿ.ರವಿ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದರು. ಮೂರು ಇಲಾಖೆಗಳ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಮೂರು ಇಲಾಖೆಗಳಲ್ಲಿ ಶೇ. 62ರಿಂದ 65ರಷ್ಟು ಹುದ್ದೆಗಳು ಖಾಲಿಯಿರುವುದರಿಂದ ಇಲಾಖೆಗಳ ವಿಲೀನ ಗೊಳಿಸುವ ಸಂಪುಟದಲ್ಲಿ ಚರ್ಚೆಯಾಗಿ ಅನುಮೋದನೆ ದೊರೆತರೆ ಆಡಳಿತ ಸುಧಾರಣೆಯಾಗಲು ಸಾಧ್ಯವಾಗು ತ್ತದೆ ಎಂದರು.

ಆರ್ಥಿಕ ಉಳಿತಾಯ ಸಾಧ್ಯ: ಇಲಾಖೆ ಗಳನ್ನು ವಿಲೀನಗೊಳಿಸುವುದರಿಂದ ಸಮರ್ಪಕ ಕಾರ್ಯ ಹಾಗೂ ಆರ್ಥಿಕ ಉಳಿತಾಯವಾಗು ತ್ತದೆ. ಹಲವಾರು ಇಲಾಖೆಗಳಲ್ಲಿ ವಾರ್ಷಿಕ ವೆಚ್ಚದ ಶೇ.90ರಷ್ಟು ಭಾಗ ವೇತನ ಪಾವತಿಗಾಗಿ ಹಾಗೂ ಉಳಿದ ಶೇ. 10ರಷ್ಟು ಮಾತ್ರ ಕ್ರಿಯಾ ಯೋಜನೆಗೆ ಖರ್ಚಾಗುತ್ತಿದೆ. ವಾರ್ಷಿಕ ವೆಚ್ಚದ ಶೇ. 25 ಭಾಗ ಮಾತ್ರ ವೇತನ ಪಾವತಿ ಹಾಗೂ ಶೇ. 75ರಷ್ಟು ಕ್ರಿಯಾ ಯೋಜನೆಗಳಿಗೆ ವೆಚ್ಚ ಮಾಡಿದಾಗ ಮಾತ್ರ ಆರ್ಥಿಕ ಉಳಿತಾಯ ಸಾಧ್ಯ ಎಂದು ತಿಳಿಸಿದರು.

ಪ್ರವಾಸೋದ್ಯಮ ಅಭಿವೃದ್ಧಿಗೆ 39.41 ಕೋಟಿ: ಜಿಲ್ಲೆಯ ಪ್ರವಾಸೋದ್ಯಮ ಅಭಿ ವೃದ್ಧಿಗಾಗಿ 2017-18ನೇ ಸಾಲಿನಿಂದ ಈವರೆಗೂ 39.41 ಕೋಟಿ ರೂ.ಗಳ ಅನುದಾನವನ್ನು ಮಂಜೂರು ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ 85 ಕಾಮಗಾರಿಗಳು ಅನುದಾನ ಮಂಜೂರು ಮಾಡಲಾಗಿದೆ ಎಂದರು.

9 ಕಾಮಗಾರಿಗಳು ಪೂರ್ಣ: ಈ ಪೈಕಿ 42 ಕಾಮಗಾರಿಗಳು ಪ್ರಗತಿಯಲ್ಲಿವೆ. ಉಳಿದಂತೆ 9 ಕಾಮಗಾರಿಗಳು ಪೂರ್ಣಗೊಂಡಿದ್ದು, 36 ಕಾಮಗಾರಿಗಳನ್ನು ತಾಂತ್ರಿಕ ಕಾರಣಗಳಿಂದ ಈವರೆಗೂ ಪ್ರಾರಂಭಿಸಿರುವುದಿಲ್ಲ. ಪ್ರಾರಂಭ ವಾಗದ ಕಾಮಗಾರಿಗಳಲ್ಲಿ ನಿವೇಶನ ಸಮಸ್ಯೆಯಿರುವ ಕಾಮಗಾರಿಗಳನ್ನು ಕೂಡಲೇ ರದ್ದುಪಡಿಸಲು ಸೂಚನೆ ನೀಡಲಾಗಿದೆ. ಉಳಿದ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಕಲಾವಿದರಿಗೆ ನೆರವು: ಕೋವಿಡ್‌-19 ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಸುಮಾರು 17 ಸಾವಿರ ಕಲಾವಿದರ ಬ್ಯಾಂಕ್‌ ಖಾತೆಗೆ ತಲಾ 2 ಸಾವಿರ ರೂ.ನಂತೆ ಆರ್ಥಿಕ ನೆರವನ್ನು ಒದಗಿಸಲಾಗಿದೆ ಎಂದರು. ಇತ್ತೀಚೆಗಷ್ಟೇ ಕೇಂದ್ರದ ಪ್ರವಾಸೋದ್ಯಮ ಹಾಗೂ ಕ್ರೀಡಾ ಖಾತೆ ಸಚಿವರನ್ನು ಭೇಟಿ ಮಾಡಿ ಪ್ರವಾಸೋದ್ಯಮದ ಹೊಸ ಯೋಜನೆಗಳಿಗೆ ಅನುಮೋದನೆ ನೀಡ ಬೇಕೆಂದು ಮನವಿ ಮಾಡಿದ್ದೇನೆ. ರಾಜ್ಯದಲ್ಲಿ ಜೈನ್‌ ಸರ್ಕ್ನೂಟ್‌, ಕೋಸ್ಟಲ್‌(ಕರಾವಳಿ) ಸರ್ಕ್ನೂಟ್‌, ಡೆಕ್ಕನ್‌ ಸೆರ್ಕ್ನೂಟ್‌, ಜೋಗ್‌ ಮತ್ತು ಚಿತ್ರದುರ್ಗ ಸರ್ಕ್ನೂಟ್‌ ಯೋಜನೆಗಳಿಗೆ ಕೇಂದ್ರದಿಂದ ಅನುಮೋದನೆ ದೊರೆಯುವ ಬಗ್ಗೆ ಸಕಾರಾತ್ಮಕ ವಿಶ್ವಾಸವಿದ್ದು, ಕೇಂದ್ರವು ಹೆಚ್ಚಿನ ಅನುದಾನ ಒದಗಿಸಲಿದೆ ಎನ್ನುವ ಭರವಸೆ ಇದೆ ಎಂದು ಹೇಳಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಜಿ.ಪಂ. ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಮತ್ತಿತರರು ಇದ್ದರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.