ಮಹಿಳಾ ಸಹಕಾರ ಸಂಘಕ್ಕೆ ಉತ್ತೇಜನ ಕ್ರಮ
Team Udayavani, Nov 19, 2019, 5:31 PM IST
ತುಮಕೂರು: ಮಹಿಳೆಯರು ಅಭಿವೃದ್ಧಿಯಾದರೆ ಕುಟುಂಬ ಸದೃಢವಾಗುತ್ತದೆ ಎಂಬ ದೃಷ್ಟಿಯಿಂದ ಜಿಲ್ಲಾದ್ಯಂತ ಇರುವ ಹಾಲು ಒಕ್ಕೂಟದ ಮಹಿಳಾ ಸಹಕಾರ ಸಂಘಗಳಿಗೆ ಹೆಚ್ಚು ಉತ್ತೇಜನ ನೀಡಲಾಗುತ್ತಿದೆ ಎಂದು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಸಿ.ವಿ.ಮಹಾಲಿಂಗಯ್ಯ ತಿಳಿಸಿದರು. ತುರುವೇಕೆರೆ ತಾಲೂಕು ದ್ವಾರನಹಳ್ಳಿಯಲ್ಲಿ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಮಹಿಳೆಯರಿಗಾಗಿ ಆಯೋಜಿಸಿದ್ದ ಸೌಲಭ್ಯಗಳ ಅರಿವು, ಕಾನೂನು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿ ಲೀಟರ್ಗೆ ಒಕ್ಕೂಟದಿಂದ 26 ರೂ. ಪಾವತಿಸುತ್ತಿದ್ದು, ಸರ್ಕಾರದ ಪ್ರೋತ್ಸಾಹ ಧನ 5 ರೂ. ಸೇರಿ 31 ರೂ. ಉತ್ಪಾದಕ ಪಡೆಯುತ್ತಿದ್ದಾನೆ. ರಾಸುಗಳಿಗೆ ವಿಮೆ ಯೋಜನೆ ಜಾರಿಗೆ ತಂದಿದ್ದು, ರೈತರು ಕೇವಲ 224 ರೂ. ಪಾವತಿಸಿದರೆ ಸಾಕು, ಉಳಿದ ಹಣ ಒಕ್ಕೂಟವೇ ಭರಿಸಲಿದೆ. ಹಾಲು ಉತ್ಪಾದಕರಿಗೂ ವಿಮೆ ಯೋಜನೆ ಜಾರಿಗೆ ತಂದಿದ್ದು, ಒಂದು ಲಕ್ಷ ರೂ.ವರೆಗೆ ಪ್ರಯೋಜನ ಪಡೆಯಲು ಅವಕಾಶ ಕಲ್ಪಿಸಿದೆ. ಪ್ರತಿದಿನ ಜಿಲ್ಲೆಯಲ್ಲಿ ಏಳೂವರೆ ಲಕ್ಷ ಲೀಟರ್ ಹಾಲು ಉತ್ಪಾದನೆ ಯಾಗುತ್ತಿದ್ದು, ಸತತ ಬರಗಾಲ ಹಿನ್ನೆಲೆ ಯಲ್ಲಿ ಈ ವರ್ಷ ಎರಡು ಬಾರಿ ಉತ್ಪಾದಕರಿಗೆ ದರ ಹೆಚ್ಚಿಸಲಾಗಿದೆ ಎಂದು ಹೇಳಿದರು.
ಸ್ಟೆಪ್ ಯೋಜನೆ ಉಪ ವ್ಯವಸ್ಥಾಪಕ ಮಂಜುನಾಥ ನಾಯಕ್, ವಿಸ್ತರಣಾಧಿಕಾರಿ ವೈ.ಎಸ್. ಮಧು, ತುಮಕೂರು ಸಾಂತ್ವನ ಕೇಂದ್ರದ ಸಲಹೆಗಾರ ಸಾ.ಚಿ ರಾಜಕುಮಾರ್ ಮಾತನಾಡಿದರು. ಒಕ್ಕೂಟದ ವಿಸ್ತರಣಾಧಿಕಾರಿ ಗಳಾದ ನೇತ್ರ, ಮಂಜುನಾಥ್,ದ್ವಾರನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಪೂರ್ಣಿಮಾ ದೇವರಾಜ್, ನಿಗಮ ನಿರ್ವಹಣಾಧಿಕಾರಿ ಶಿವಪ್ಪ ಮತ್ತಿತರರಿದ್ದರು. ಮಹಿಳಾ ಸ್ವಸಹಾಯ ಗುಂಪುಗಳಿಗೆ ಸುತ್ತು ನಿಧಿ ಹಾಗೂ ರಾಸುಗಳ ಖರೀದಿಗೆ ಚೆಕ್ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ