ಫೈನಾನ್ಸ್‌ ಕಂಪನಿಗಳ ವಿರುದ್ಧ ಪ್ರತಿಭಟನೆ


Team Udayavani, Jul 14, 2020, 11:40 AM IST

ಫೈನಾನ್ಸ್‌ ಕಂಪನಿಗಳ ವಿರುದ್ಧ ಪ್ರತಿಭಟನೆ

ಶಿರಾ: ಸಾಲ ಮರುಪಾವತಿಗೆ ಒತ್ತಾಯಿಸುತ್ತಿರುವ ಮೈಕ್ರೋ ಫೈನಾನ್ಸ್‌ ಕಂಪನಿಗಳು ಮತ್ತು ಖಾಸಗಿ ಲೇವಾದೇವಿದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾ. ದಸಂಸದಿಂದ ಸೋಮವಾರ ಇಲ್ಲಿನ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ತಾಲೂಕಾದ್ಯಂತ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಕಾಲಕ್ಕೆ ಕೆಲಸ, ಕೂಲಿ ಸಿಕ್ಕದೇ ಜನರು ನಿತ್ಯ ಜೀವನಕ್ಕೆ ಪರದಾಡುವಂತಾಗಿದೆ. ಇದರ ನಡುವೆ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಖಾಸಗಿ ಲೇವಾದೇವಿದಾರರು ಜನರಿಗೆ ಪಡೆದಿರುವ ಸಾಲ ಮರುಪಾವತಿಸುವಂತೆ ಒತ್ತಾಯಿಸುತ್ತಿದ್ದು, ತಪ್ಪಿದರೆ ಹೆಚ್ಚು ಬಡ್ಡಿ ಹಾಕಬೇಕಾಗುತ್ತದೆ ಎಂದು ಬೆದರಿಸುತ್ತಿದ್ದಾರೆ.

ಬಲವಂತವಾಗಿ ಸಾಲ ವಸೂಲಿಗೆ ಇಳಿದಿದ್ದಾರೆ. ಜನರು ಸಂಕಷ್ಟದಲ್ಲಿ ಇರುವಾಗ ಮಾನವೀಯತೆ ಮರೆತು, ಸಾಲ ವಸೂಲಾತಿಗೆ ನಿಂತಿರುವ ಫೈನಾನ್ಸ್‌ಗಳು, ಹೆಂಗಸರೂ ಎನ್ನದೇ ಸೌಜನ್ಯವನ್ನೂ ಮೀರಿ ಮಾತನಾಡುತ್ತಾ ಪರಿ ಸ್ಥಿತಿಯ ದುರುಪಯೋಗ ಮಾಡುತ್ತಿದ್ದಾರೆ. ಲೇವಾದೇವಿದಾರರು ಗಿರವಿ ಇಟ್ಟಿರುವ ಚಿನ್ನವನ್ನು ಹರಾಜು ಹಾಕುವ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದರು.

ಸಾಲ ವಸೂಲಾತಿ ನೆಪದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಖಾಸಗಿ ಲೇವಾದೇವಿದಾರ ದೌರ್ಜನ್ಯ ಹೆಚ್ಚಾಗುತ್ತಿದೆ. ತಾಲೂಕು ಆಡಳಿತ ತಕ್ಷಣ ಮಧ್ಯ ಪ್ರವೇಶಿಸಿ, ತಾಲೂಕಿನಲ್ಲಿರುವ ಎಲ್ಲಾ ಮೈಕ್ರೋ ಫೈನಾನ್ಸ್‌ ಕಂಪನಿ ಮತ್ತು ಖಾಸಗಿ ಲೇವಾದೇವಿದಾರರಿಗೆ ತಿಳಿವಳಿಕೆ ಪತ್ರ ನೀಡಿ, ಬಲವಂತದ ಸಾಲ ವಸೂಲಿ ಮಾಡದಂತೆ ಸೂಚನೆ ನೀಡಬೇಕು. ಆಡಳಿತದ ಸೂಚನೆ ಮೀರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದೆ.

ಸಮಿತಿ ತಾ. ಸಂಚಾಲಕ ಟೈರ್‌ ರಂಗನಾಥ್‌, ಶಿವಾಜಿನಗರ ತಿಪ್ಪೇಸ್ವಾಮಿ, ಕೆ.ರಾಜು, ಭೂತರಾಜು, ಕಾರೆಹಳ್ಳಿ ರಂಗನಾಥ್‌ ಸೇರಿದಂತೆ ಹಲವು ಮುಖಂಡರು ತಹಶೀಲ್ದಾರ್‌ ನಾಹಿದಾ ಜಂಜಂ ಅವರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.