ರಾಜಣ್ಣ ವಿರುದ್ಧದ ಪ್ರತಿಭಟನೆ ಮುಂದೂಡಿಕೆ

ಜಿಲ್ಲಾ ಪಂಚಾಯಿತಿ ಸದಸ್ಯ ಕೆಂಚಮಾರಯ್ಯ ಹೇಳಿಕೆ ಪೊಲೀಸರಿಂದ ಅವಕಾಶ ನಿರಾಕರಣೆ

Team Udayavani, Jun 10, 2019, 4:02 PM IST

tk-tdy-4..

ತುಮಕೂರು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಜಿ.ಪಂ.ಸದಸ್ಯ ಕೆಂಚಮಾರಯ್ಯ ಮಾತನಾಡಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರಾಮಕೃಷ್ಣ, ನಾರಾಯಣಮೂರ್ತಿ ಇತರರು ಇದ್ದರು.

ತುಮಕೂರು: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಮಾಜಿ ಶಾಸಕ ಕೆ.ಎನ್‌.ರಾಜಣ್ಣ ವಿರುದ್ಧ ಪರಮೇಶ್ವರ್‌ ಅಭಿಮಾನಿ ಬಳಗದಿಂದ ಜೂ.12ರಂದು ಹಮ್ಮಿಕೊಂಡಿದ್ದ ಪ್ರತಿಭಟನೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜಿ.ಪಂ.ಸದಸ್ಯ ಕೆಂಚಮಾರಯ್ಯ ತಿಳಿಸಿದರು.

ಅವಕಾಶ ನಿರಾಕರಣೆ: ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸಿಎಂ ಘನತೆಗೆ ಗೌರವ ಕೊಡದೆ, ನನ್ನ ವಿರುದ್ಧ ಧಿಕ್ಕಾರ ಕೂಗಿ ಯಾರಾದರೂ ಪ್ರತಿಭಟಿಸಿದರೆ ಅವರ ನಾಲಿಗೆ ಸೀಳುವುದಾಗಿ ಹೇಳಿದ್ದಕ್ಕೆ ಪ್ರತಿಭಟನೆಗೆ ಮುಂದಾಗಿದ್ದೆವು. ಕಾನೂನು ತೊಡಕಿನಿಂದ ಪ್ರತಿಭಟನೆಗೆ ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಪ್ರತಿಭಟನೆ ಮುಂದೂಡಲಾಗಿದೆ ಎಂದು ಹೇಳಿದರು.

ಹಿರಿಯರ ಸಲಹೆ: ಪ್ರತಿಭಟನೆಗೆ ಹತ್ತು ತಾಲೂಕುಗಳ ಮುಖಂಡರು ಉತ್ತಮ ಸ್ಪಂದನೆ ನೀಡಿದ್ದರು. ಮಾಜಿ ಶಾಸಕ ಕೆ.ಎನ್‌.ರಾಜಣ್ಣ ವಿಷಾದ ವ್ಯಕ್ತಪಡಿಸಿದ ನಂತರ ಪ್ರತಿಭಟನೆಗೂ ಮುನ್ನ ಚಿಂತಿಸುವುದು ಒಳ್ಳೆಯದು, ಆತುರದ ತೀರ್ಮಾನ ಬೇಡ ಎಂಬ ಸಲಹೆ ಹಿರಿಯರು ನೀಡಿದ್ದಾರೆ. ವಿಷಾದದ ಬಗ್ಗೆ ಜಾತ್ಯತೀತವಾಗಿ, ಪಕ್ಷಾತೀತವಾಗಿ ಬೆಂಬಲ ಸೂಚಿಸಿರುವವರೊಂದಿಗೆ ಚರ್ಚಿಸಿ ಪ್ರತಿಭಟನೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಚರ್ಚಿಸಿ ತೀರ್ಮಾನ: ಡಿಸಿಎಂ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಸರ್ವಾಧಿಕಾರಿ ಧೋರಣೆ ವಿರುದ್ಧ ಪಕ್ಷಾತೀತವಾಗಿ ಹೋರಾಟ ರೂಪಿಸಲಾಗಿತ್ತು. ಯಾವುದೇ ಜಾತಿ ಅಥವಾ ಪಕ್ಷದ ವಿರುದ್ಧ ಅಲ್ಲ. ಪ್ರತಿಭಟನೆ ನಿಲ್ಲಿಸುವಂತೆ ಪಕ್ಷದ ಯಾವ ಮುಖಂಡರೂ ನಮಗೆ ಸೂಚಿಸಿಲ್ಲ. ಯಾವುದೇ ಒತ್ತಡಕ್ಕೆ ಮಣಿದು ಪ್ರತಿಭಟನೆ ನಿಲ್ಲಿಸುವುದಿಲ್ಲ. ವಿಷಾದದ ಬಗ್ಗೆ ಚರ್ಚಿಸುವುದು ಅವಶ್ಯಕವಾಗಿರುವುದರಿಂದ ಮುಂದೂಡಲಾಗಿದೆ ಎಂದು ತಿಳಿಸಿದರು.

ವಿಷಾದ ವ್ಯಕ್ತಪಡಿಸಿರುವುದರ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಇರಬಹುದು. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಕೆಂಚಮಾರಯ್ಯ ಉತ್ತರಿಸಿದರು.

ತಾಲೂಕು ಪ್ರವಾಸ: ಈ ವಿಚಾರದಲ್ಲಿ ದೊಡ್ಡವರು ರಾಜಿ ಸಂಧಾನ ಮಾಡಿಕೊಂಡರೂ ಒಪ್ಪಿಕೊಳ್ಳವುದಿಲ್ಲ, ಡಿಸಿಎಂಗೆ ಆಗಿರುವ ಅವಮಾನವನ್ನು ಸಮುದಾಯ ಮರೆಯುವುದಿಲ್ಲ. ಸಮುದಾಯದಲ್ಲಿ ಅರಿವು ಮೂಡಿಸಲು ಎಲ್ಲ ತಾಲೂಕುಗಳಲ್ಲಿಯೂ ಪ್ರವಾಸ ಮಾಡುತ್ತೇವೆ. ಎಲ್ಲರಲ್ಲೂ ವಿಶ್ವಾಸ ಮೂಡಿಸುತ್ತೇವೆ. ಯಾವುದೇ ಕಾರಣಕ್ಕೂ ಪ್ರತಿಭಟನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಘಟನೆಯಿಂದ ಮಲಗಿದ್ದ ಸಮುದಾಯದಲ್ಲಿ ಎಚ್ಚರಿಕೆ ಮೂಡಿದ್ದು, ಸಮುದಾಯದ ಜಾಗೃತವಾಗಿದೆ. ನಮ್ಮಲ್ಲಿನ ತಪ್ಪು ಅರಿತುಕೊಂಡಿದ್ದೇವೆ. ಮುಂದೆ ವ್ಯವಸ್ಥಿತವಾಗಿ ಪ್ರತಿಭಟನೆ ರೂಪಿಸುವುದಾಗಿ ತಿಳಿಸಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರಾಮಕೃಷ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣಮೂರ್ತಿ, ಯಾದವ ಸಂಘದ ಅಧ್ಯಕ್ಷ ಚಂದ್ರಶೇಖರ್‌ ಗೌಡ, ಮಾಜಿ ತುಮುಲ್ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್‌, ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ, ಮಾಜಿ ನಗರಸಭಾ ಸದಸ್ಯ ತರುಣೇಶ್‌, ಮುಖಂಡರಾದ ವಾಲೆಚಂದ್ರು, ಸೋಮಣ್ಣ, ಅತೀಕ್‌ ಅಹಮದ್‌, ಪುಟ್ಟರಾಜು, ನಿಂಗರಾಜು, ದಿನೇಶ್‌, ನರಸೀಯಪ್ಪ, ರೇವಣ್ಣ ಸಿದ್ದಪ್ಪ, ನಗರ ಪಾಲಿಕೆ ಸದಸ್ಯ ಮಹೇಶ್‌, ಗೋವಿಂದಗೌಡ ದೀಪು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.