ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಧರಣಿ


Team Udayavani, Oct 10, 2020, 4:21 PM IST

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಧರಣಿ

ಮಧುಗಿರಿ: ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿ ಹತ್ಯೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ತಾಲೂಕು ನಾಯಕ ಸಮಾಜದವತಿಯಿಂದ ಉಪವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆನಡೆಸಿ ಉತ್ತರ ಪ್ರದೇಶ ಸರ್ಕಾರದ ದಲಿತ ವಿರೋಧಿನೀತಿ ಖಂಡಿಸಿ, ದಲಿತ ಸಮಾಜದ ಪ್ರತಿಭಾವಂತಹೆಣ್ಣುಮಗಳ ಹತ್ಯೆಗೆ ಸರ್ಕಾರ ಕೂಡಲೇ ನ್ಯಾಯಒದಗಿಸಬೇಕೆಂದು ಆಗ್ರಹಿಸಿದವು.

ಯೋಗಿ ವಿರುದ್ಧ ಆಕ್ರೋಶ: ನಂತರ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಜಮಾವಣೆಗೊಂಡು ಸೆ.14 ರಂದು ಯುಪಿಯಲ್ಲಿನಡೆದ ಅತ್ಯಾಚಾರ ಹಾಗೂ ಹತ್ಯೆಯುಅಮಾನವೀಯದಿಂದ ಕೂಡಿದೆ. ಇದುಮನುಕುಲವೇ ಮರುಕ ಪಡುವಂತ ಹೇಯಕೃತ್ಯವಾಗಿದೆ. ಮೃತ ಯುವತಿಯ ಶವ ಸಂಸ್ಕಾರಕ್ಕೂಇಲ್ಲಿನ ಯೋಗಿ ಸರ್ಕಾರ ಹೆತ್ತವರಿಗೆ ಅವಕಾಶನೀಡದೆ ಸುಟ್ಟುಹಾಕಲಾಗಿದ್ದು, ಸಂವಿಧಾನದತ್ತವಾದಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುಪಿ ಪೊಲೀಸರು ಸಹ ಸರ್ಕಾರದ ಕೈಗೊಂಬೆಯಾಗಿದ್ದು, ಮನುಷ್ಯತ್ವವಿಲ್ಲದೆ ನಡೆದುಕೊಂಡಿದ್ದಾರೆ. ಇಂತಹ ಪರಿಸ್ಥಿಯಲ್ಲೂ ಅಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂಪ್ರಧಾನಿ ಮೋದಿ ಈ ಘಟನೆಯ ಬಗ್ಗೆ ತುಟಿ ಬಿಚ್ಚಿಲ್ಲ. ಇಂತವರಿಂದ ಮಹಿಳೆಯ ರಕ್ಷಣೆ ಹೇಗೆ ನಿರೀಕ್ಷಿಸಲು ಸಾಧ್ಯ ಎಂದುಕಿಡಿಕಾರಿದರು.

ಸರ್ಕಾರಕ್ಕೆ ನಾಚಿಕೆಯಾಗಬೇಕು: ತಾಲೂಕು ನಾಯಕ ಸಂಘದ ಕಾರ್ಯದರ್ಶಿ ಶಂಕರನಾರಾಯಣ (ಬಾಬು) ಮಾತನಾಡಿ, ರಾಮ ಹುಟ್ಟಿದ ನೆಲದಲ್ಲಿ ರಾಮ ಹಾಗೂ ಗೋಮಾತೆಯ ಬಗ್ಗೆ ಮಾರುದ್ಧ ಭಾಷಣ ಮಾಡುವ ಬಿಜೆಪಿಗೆ ಈಹೆಣ್ಣುಮಗಳ ನೋವು ಅರ್ಥವಾಗುತ್ತಿಲ್ಲ.ಮಹಿಳೆಯೆಂದರೆ ಕೇವಲ ಮೇಲ್ವರ್ಗದ ಹೆಣ್ಣಿಗಷ್ಟೇ ಬೆಲೆ ಎಂಬಂತಾಗಿದೆ. ಅಹಿಂದ ವರ್ಗದ ಹೆಣ್ಣುಮಗಳ ಸಾವಿಗೆ ಕಿಂಚಿತ್ತೂ ಮರುಗದ ಈಸರ್ಕಾರಕ್ಕೆ ನಾಚಿಕೆಯಾಗಬೇಕು. ಮುಂದೆ ಇದಕ್ಕೆ ತಕ್ಕ ಬೆಲೆ ತರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಠಿಣ ಕ್ರಮಕ್ಕೆ ಆಗ್ರಹ: ನಾಯಕ ನೌಕರರ ಸಂಘದಅಧ್ಯಕ್ಷ ಡಿ.ಓ.ನಾಗರಾಜು ಮಾತನಾಡಿ, ಜನತಂತ್ರ ವ್ಯವಸ್ಥೆಯಲ್ಲಿ ಮಹಿಳೆಗೆ ಸಮಾನ ಹಾಗೂ ಶ್ರೇಷ್ಠ ಸ್ಥಾನವನ್ನು ಭಾರತದ ಸಂವಿಧಾನ ನೀಡಿದೆ. ಇಂತಹ ದೇಶದಲ್ಲಿ ಹುಟ್ಟಿ ಪ್ರತಿಭಾವಂತೆಯಾದ ಸಮಾಜದ ಹೆಣ್ಣುಮಗಳ ಧಾರುಣ ಹತ್ಯೆ ಖಂಡನೀಯ.

ಸಹೋದರತೆ, ಸಹಭಾಳ್ವೆ ಹಾಗೂ ಸಮಾನತೆಗೆ ಧಕ್ಕೆ ತಂದಿರುವ ಅಲ್ಲಿನ ಸರ್ಕಾರ ಹಾಗೂ ವ್ಯವಸ್ಥೆಯ ವೈಫ‌ಲ್ಯವನ್ನು ಗಣನೆಗೆ ಪಡೆದುಕೊಂಡು ಸರ್ಕಾರಹಾಗೂ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕ್ಯಗೊಳ್ಳಬೇಕೆಂದು ಆಗ್ರಹಿಸಿದರು.

ತಾಲೂಕು ನಾಯಕ ಸಂಘದ ಗೌರವಾಧ್ಯಕ್ಷರಂಗಶಾಮಣ್ಣ, ಮಹಿಳಾ ಅಧ್ಯಕ್ಷೆ ಇಂದಿರಮ್ಮ, ಪುರಸಭೆ ಮಾಜಿ ಸದಸ್ಯರಾದ ಭಾಗ್ಯಮ್ಮ,ಕುಶಾಲವತಿ, ಮಾನವ ಬಂಧುತ್ವ ವೇದಿಕೆ ಅಧ್ಯಕ್ಷ ಗರಣಿ ಗಿರೀಶ್‌, ವಕೀಲ ಪಾಂಡುರಂಗಯ್ಯ, ನೌಕರ ವರ್ಗದ ಕೃಷ್ಣಮೂರ್ತಿ, ಚಂದನ್‌, ಕುಮಾರ್‌,ಶಿವಪ್ಪ, ಗಂದಾಧರ ರೆಡ್ಡಿಹಳ್ಳಿ, ಚಿರಂಜೀವಿ,ನಾಗರಾಜು, ಮಂಜುಳಾ, ಲೀಲಾ, ಜಯಮ್ಮ, ಶಾಂತ, ಪಾರ್ವತಮ್ಮ ಹಾಗೂ ದಲಿತ ಪರಸಂಘಟನೆಯ ನೂರಾರು ಸದಸ್ಯರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.