ಜಂಪೇನಹಳ್ಳಿ ಮಗು ಪ್ರಕರಣ ಖಂಡಿಸಿ ಧರಣಿ


Team Udayavani, Mar 26, 2021, 5:06 PM IST

ಜಂಪೇನಹಳ್ಳಿ ಮಗು ಪ್ರಕರಣ ಖಂಡಿಸಿ ಧರಣಿ

ಕುಣಿಗಲ್‌: ಕೊರಟಗೆರೆ ತಾಲೂಕು ಜಂಪೇನ ‌ಹಳ್ಳಿಗ್ರಾಮದಲ್ಲಿ ದಲಿತ ಮೃತ ಮಗುವಿನ ಶವವನ್ನು ಹೊರತೆಗೆದು ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಅಮಾನವೀಯ ಘಟನೆ ಖಂಡಿಸಿ, ಕುಣಿಗಲ್‌ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ತಾಲೂಕು ಕಚೇರಿ ಎದುರು ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.

ಜಂಪೇನಗಹಳ್ಳಿ ಗ್ರಾಮದಲ್ಲಿನ ಘಟನೆಯಿಂದ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತ್ತಾಗಿದೆ. ಘಟನೆಗೆ ಸಂಬಂಧಿಸಿದ ಶಾಹಿ ಗಾರ್ಮೆಂಟ್ಸ್‌ ಮಾಲೀಕರು ಹಾಗೂ ಸರ್ಕಾರಿ ಅಧಿಕಾರಿಗಳ ಮೇಲೆಶಿಸ್ತುಕ್ರಮ ಜರುಗಿಸುವಂತೆ ಆಗ್ರಹಿಸಿ, ಪುರಸಭಾ ಸದಸ್ಯ ಆನಂದ್‌ ಕಾಂಬ್ಲಿ, ಶ್ರೀನಿವಾಸ್‌, ತಾಪಂ ಮಾಜಿ ಅಧ್ಯಕ್ಷ ಎಸ್‌.ಆರ್‌.ಚಿಕ್ಕಣ್ಣ, ಜಿಲ್ಲಾ ಡಿಎಸ್‌ಎಸ್‌ಸಂಚಾಲಕ ವಿ.ಶಿವಶಂಕರ್‌, ದಲಿತ್‌ನಾರಾಯಣ್‌ನೇತೃತ್ವದಲ್ಲಿ ಒಕ್ಕೂಟದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ವಿರುದ್ಧ ಧಿಕ್ಕಾರ ಕೂಗಿದರು.

ಹೀನಾಯ ಕೃತ್ಯ: ಎತ್ತಿನಹೊಳೆ ಕಾಮಗಾರಿ ಬ್ಲಾಸಿಂಗ್‌ ಶಬ್ದಕ್ಕೆ ಜಂಪೇನಹಳ್ಳಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ಮೂರು ತಿಂಗಳ ಹೆಣ್ಣು ಮೃತಪಟ್ಟಿತ್ತು. ಘಟನೆ ಬಗ್ಗೆ ಪ್ರಶ್ನಿಸಲು ಶಕ್ತಿ ಇಲ್ಲದ ದಲಿತ ಕುಟುಂಬ ಸುವರ್ಣ ಮುಖೀ ನದಿಗೆ ಹೊಂದುಕೊಂಡತ್ತೇ ಇರುವ ಸರ್ಕಾರಿ ಜಮೀನಿನಲ್ಲಿ ಮೃತ ಮಗುವಿನ ಶವ ಸಂಸ್ಕಾರವನ್ನು ಮಾಡಿದ್ದರು. ಶಾಹಿ ಗಾರ್ಮೆಂಟ್ಸ್‌ ಮಾಲೀಕರು ನಮ್ಮ ಜಾಗದಲ್ಲಿ ಶವ ಸಂಸ್ಕಾರ ಮಾಡಿದ್ದಾರೆಂದು ಗುಂಡಿಯಿಂದ ಶವವನ್ನು ಸೆಕ್ಯುರಿಟಿ ಮೂಲಕ ಹೊರ ತೆಗೆಸಿ ಇಡೀ ನಾಗರೀಕ ಸಮಾಜ ತಲೆ ತಗ್ಗಿಸುವಂñಹ ‌ ಹೀನಾಯ ಕೃತ್ಯ ಎಸಗಲಾಗಿದೆ ಎಂದು ದಲಿತ ಮುಖಂಡರು ಕಿಡಿಕಾರಿದರು.

ದಲಿತರು ಎಲ್ಲ ಸಮುದಾಯವನ್ನು ಪ್ರೀತಿಸುವಂತಹ ಸಮುದಾಯ. ಆದರೆ, ನಮ್ಮಲ್ಲೇ ಎತ್ತುಕಟ್ಟುವಂತಹ ಕೆಲಸ ನಡೆಯುತ್ತಿದೆ. ಇದನ್ನುಖಂಡಿಸುತ್ತೇವೆ. ನಮಗೆ ಎಲ್ಲರ ಸ್ನೇಹ ಬೇಕು ಸಂಘರ್ಷ ಬ್ಯಾಡ ಎಂದ ಮುಖಂಡರು, ದೇಶಕ್ಕೆ ಸ್ವಾತಂತ್ರ ಬಂದು 74 ವರ್ಷ ಕಳೆದರೂ ಇಂತಹಕೃತ್ಯಗಳು ನಿರಂತರವಾಗಿ ನಡೆಯುತ್ತಿದೆ. ದಲಿತನ್ನು ಮನುಷ್ಯರಂತೆ ನೋಡುತ್ತಿಲ್ಲ. ಇದು ನಮ್ಮ ಸಂಸ್ಕೃತಿಯಲ್ಲ ಎಂದು ಆಕ್ರೋಶ ವ್ಯಕಪಡಿ‌¤ ಸಿದರು.

ಪರಿಹಾರದ ಭಿಕ್ಷೆ ಬೇಕಿಲ್ಲ: ನೊಂದ ಸಮಾಜದ ಮನುಷ್ಯರು ಘನತೆಯಿಂದ ಬದುಕುವ ವ್ಯವಸ್ಥೆ ಇಲ್ಲ. ಜಂಪೇನಹಳ್ಳಿ ಘಟನೆ ಹಿನ್ನೆಲೆ ಸಂತ್ರಸ್ತರಿಗೆ ಪರಿಹಾರದಭಿಕ್ಷೆ ನಮಗೆ ಬೇಕಿಲ್ಲ, ಸ್ವಾಭಿಮಾನ ಬೇಕು. ಸಮಾಜದಲ್ಲಿ ಎಲ್ಲರಂತೆ ಸಮಾನತೆಯಿಂದಬದುಕುವಂತಹ ವ್ಯವಸ್ಥೆ ಸರ್ಕಾರ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ತಾಲೂಕು ಕಚೇರಿ ಶಿರಸ್ತೇದಾರ್‌ ಜಯಪ್ಪಚಾರ್‌ ಅವರಿಗೆ ಮನವಿ ಸಲ್ಲಿಸಿದರು. ದಲಿತ ಮುಖಂಡ ಜಿ.ಕೆ.ನಾಗಣ್ಣ, ವರದರಾಜು, ನರಸಿಂಹಮೂರ್ತಿ, ಎಸ್‌.ಟಿ. ಕೃಷ್ಣರಾಜು, ರಾಮಲಿಂಗಯ್ಯ, ಆನಂದ್‌, ಎನ್‌.ರಾಜೇಶ್‌, ನಂಜಪ್ಪ ವಿನಯ್‌, ತಿಮ್ಮಪ್ಪ, ಗೋವಿಂದರಾಜು ಇದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.