ಸೌಲಭ್ಯಕ್ಕೆ ವಸತಿ ರಹಿತರ ಧರಣಿ


Team Udayavani, Sep 15, 2020, 2:03 PM IST

ಸೌಲಭ್ಯಕ್ಕೆ ವಸತಿ ರಹಿತರ ಧರಣಿ

ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಕೊಳಚೆ ಪ್ರದೇಶಗಳಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ, ಪಂಗಡ,ಅಲೆಮಾರಿ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೋಮವಾರ ವಸತಿ ರಹಿತರು ಪ್ರತಿಭಟನೆ ನೆಡೆಸಿದರು.

ನಗರದ ವಿವಿಧೆಡೆಯಿಂದ ಆಗಮಿಸಿದ ವಸತಿ ರಹಿತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಮಾವೇಶಗೊಂಡು ವಸತಿ ನೀಡ ಬೇಕೆಂದುಜಿಲ್ಲಾಡಳಿತವನ್ನುಒತ್ತಾಯಿಸಿದರು. ನಗರ ವ್ಯಾಪ್ತಿಯಲ್ಲಿ ಕೂಲಿ ಮಾಡಿಕೊಂಡು ಬಾಡಿಗೆ ಮನೆಗಳಲ್ಲಿ ಜೀವನ ಸಾಗಿಸುತ್ತಿರುವ ವಿವಿಧ ಸಮುದಾಯದ281ಕುಟುಂಬಗಳಿಗೆ ತುರ್ತಾಗಿ ಸರ್ಕಾರಿ ಭೂಮಿ ಗುರುತಿಸಿ ಮಂಜೂರು ಮಾಡಲು ಒತ್ತಾಯಿಸಿದರು.

ಈ ವೇಳೆ ನಮ್ಮ ಮನೆ ಹೋರಾಟ ಸಮಿತಿ ಮತ್ತು ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತ ರಕ್ಷಣಾ ಸಮಿತಿ ಕಾರ್ಯಕರ್ತರು ನಿವೇಶನ ರಹಿತರ ಪಟ್ಟಿ ಹಾಗೂ ರಾಜ್ಯಾದ್ಯಂತ ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡುವ ಸಂಪುಟ ಸಭೆಯ ನಿರ್ಣಯದಂತೆ ಮಾರ್ಗಸೂಚಿ ರೂಪಿಸಲು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕಎ.ನರಸಿಂಹಮೂರ್ತಿನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ರಾಕೇಶ್‌ಕುಮಾರ್‌, ಈ ಹಿಂದೆ ಕೊಳೆಗೇರಿ ಸಮಿತಿಯ ಕುಂದುಕೊರತೆ ಸಭೆಯಲ್ಲಿ ನಿವೇಶನ ರಹಿತರಿಗೆ ಭೂಮಿ ಗುರುತಿಸಲು ತಹಶೀಲ್ದಾರ್‌ಗಳಿಗೆ ಸೂಚಿಸಲಾಗಿದೆ. ಇತ್ತೀಚೆಗೆ ಜಿಲ್ಲೆಗೆ ಕಂದಾಯ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ನಿವೇಶನ ರಹಿತರಿಗೆ ಭೂಮಿ ಗುರುತಿಸಿಕೊಡಲು ಸೂಚಿಸಿದ್ದಾರೆ ಎಂದರು.

ಸಂಸದರು, ನಗರ ಶಾಸಕರು ನಿವೇಶನ ರಹಿತ ಕುಟುಂಬಗಳಿಗೆ ವಸತಿ ಕಲ್ಪಿ ಸಲು ಸರ್ಕಾರಿ ಭೂಮಿಗಳನ್ನು ಗುರುತಿಸಲು ಒತ್ತಾಯಿಸುತ್ತಿದ್ದು, ಕೊಳೆಗೇರಿ ಸಮಿತಿ ನೀಡಿರುವ ನಿವೇಶನ ರಹಿತರ ಪಟ್ಟಿಯನ್ನು ಪರಿಶೀ ಲಿಸಿ ಅರ್ಹ ಕುಟುಂಬಗಳಿಗೆ ನಿವೇಶನ ನೀಡಲು ಕ್ರಮವಹಿಸಲಾಗುವುದು. ಇದಕ್ಕೆ ಬೇಕಿರುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ಕೋವಿಡ್ ನ ಈ ಸಂಕಷ್ಟದಲ್ಲಿ ಬಾಡಿಗೆ ಮನೆಗಳಲ್ಲಿರುವ ಕುಟುಂಬಗಳಿಗೆ ಮಾಲೀಕರು ಕಿರುಕುಳ ನೀಡಬಾರದು ಇಂತಹ ದೂರುಗಳಿದ್ದಲ್ಲಿ ಖುದ್ದು ಭೇಟಿ ಮಾಡುವಂತೆ ತಿಳಿಸಿದರು.

ನಂತರ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಹೊಂಬಯ್ಯನ ಪಾಳ್ಯದ ಶ್ವೇತಾ ಶಿರಾ ಗೇಟ್‌ ನಲ್ಲಿ40 ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ಕೊರೊನಾ ಸಂಕಷ್ಟಕ್ಕೆ ಸಿಲುಕಿ ದುಡಿಮೆಯಿಲ್ಲದೇ ನನ್ನ ಮಾಂಗಲ್ಯ ಮಾರಿ ಬಾಡಿಗೆ ಹಣ ಕಟ್ಟಿದ್ದೇನೆ ಎಂದು ಅಳಲು ತೋಡಿಕೊಂಡರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸ್ಲಂ ಜನಾಂದೋಲನಾ ಸಂಚಾಲಕರ ಎ,ನರಸಿಂಹ ಮೂರ್ತಿ ಮಾತನಾಡಿ ಕಳೆದ 20 ವರ್ಷ ಗಳಿಂದ ರಾಜ್ಯದಲ್ಲಿ ನಿವೇಶನ ನೀಡುವ ಪ್ರಕ್ರಿಯೆ ನಗರಪ್ರದೇಶಗಳಲ್ಲಿ ಸ್ಥಬ್ದಗೊಂಡಿದೆ, ದುರ್ಬಲ ವರ್ಗಗಳಿಗೆ ಮತ್ತು ನಗರ ಪ್ರದೇಶದಲ್ಲಿರುವ ನಿವೇಶನ ರಹಿತರಿಗೆ ಕರ್ನಾಟಕ ಭೂ ಮಂಜೂರಾತಿ ನಿಯಮ 1969ರ ಕಲಂ 18ಎ ರಡಿಯಲ್ಲಿ ಸರ್ಕಾರಿ ಭೂಮಿಗಳನ್ನು ಗುರುತಿಸಿ ನಿವೇಶನ ಹಂಚಿಕೆ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದರು.

ಅದರಂತೆ ನಗರದ ವಿವಿಧ ವಾರ್ಡ್‌ಗಳಲ್ಲಿ ಲಭ್ಯವಿರುವ ಸರ್ಕಾರಿ ಭೂಮಿಗಳ ವಿವರವನ್ನು ಫ‌.5 ರಂದು ಸ್ಲಂ ಜನರಕುಂದುಕೊರತೆ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ನೀಡಿದ್ದು ತಕ್ಷಣಕ್ಕೆ 281 ಕುಟುಂಬಗಳಿಗೆ ನಿವೇಶನ ಮಂಜೂರು ಮಾಡಬೇಕು ತಪ್ಪಿದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದೆಂದರು. ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದಶಂಕರಯ್ಯ , ಮೊಹಮ್ಮದ್‌ ಹಯತ್‌, ತಿರು ಮಲಯ್ಯ, ರಂಗನಾಥ್‌,ಮೋಹನ್‌, ಶಾರ ದಮ್ಮ, ಗಂಗಮ್ಮ, ಪುಟ್ಟರಾಜು ಹಾಗೂ ನಮ್ಮ ಮನೆ ಹೋರಾಟ ಸಮಿತಿಯ ಮಂಗಳಮ್ಮ, ಚಂದ್ರಿಕಾ,ಹನುಮಕ್ಕ, ಸುನಂದಮ್ಮ, ಗೋಪಾಲಯ್ಯ ಸೇರಿದಂತೆ ವಸತಿ ರಹಿತರಿದ್ದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.