ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ


Team Udayavani, Oct 6, 2020, 3:15 PM IST

TK-TDY-1

ಕುಣಿಗಲ್‌: ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಪಟ್ಟಣದ ಕೋಟೆ ಮೊಹಲ್ಲಾ ಪ್ರದೇಶದ ನಾಗರಿಕರು ಪುರಸಭೆ ಎದುರು ಪ್ರತಿಭಟನೆ ನಡೆಸಿದರು. ಪುರಸಭೆ ಆಡಳಿತ ವೈಖರಿಗೆ ಬೇಸತ್ತ ಕೋಟೆ ಪ್ರದೇಶದ ಮೊಹಲ್ಲಾ ವಾಸಿಗಳು ಪುರಸಭೆ ಸದಸ್ಯೆ ಕೆ.ಎಂ ಅಸ್ಮಾ, ಮಾಜಿ ಉಪಾಧ್ಯಕ್ಷ ಅಬ್ದುಲ್‌ ಹಮೀದ್‌ ನೇತೃತ್ವದಲ್ಲಿ ನೂರಾರು ಜನರು ಕೋಟೆಯಿಂದ ಪುರಸಭೆಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಡಳಿತದ ವಿರುದ್ಧ ಧಿಕ್ಕಾರ ಕೂಗಿದರು.

ಪುರಸಭಾ ಮಾಜಿ ಉಪಾಧ್ಯಕ್ಷ ಅಬ್ದುಲ್‌ ಹಮೀದ್‌ ಮಾತನಾಡಿ, ಕೋಟೆ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು 10 -15 ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದ್ದು ಇದರಿಂದಈ ಭಾಗದ ಜನರಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದೆ. ಕುಡಿಯುವ ನೀರಿನ ಪೈಪ್‌ಲೈನ್‌ ಕಾಮಗಾರಿಗೆ ಟೆಂಡರ್‌ ಕರೆದು ಆರು ತಿಂಗಳಾದರೂ ಕಾಮಗಾರಿ ಪೂರ್ಣಗೊಳಿಸಿಲ್ಲ, ಈ ಸಂಬಂಧ ಹಲವು ಬಾರಿ ಮುಖ್ಯಾಧಿಖಾರಿ ಮತ್ತು ಎಂಜಿನಿಯರ್‌ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ, ಈ ಬಡಾವಣೆಯಲ್ಲಿ 400ಕ್ಕೂ ಹೆಚ್ಚು ಮನೆಯಿದ್ದು ಸ್ವಚ್ಛತಾ ಕಾರ್ಯ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.

ಈ ಖಾತೆಗೆ ಅರ್ಜಿ ನೀಡಿ ಹಲವು ದಿನಕಳೆದರೂ ಖಾತೆ ಮಾಡಿಕೊಟ್ಟಿಲ್ಲ, ಯುಜಿಡಿ ಕಾಮಗಾರಿ ಸಂಪೂರ್ಣ ಅವ್ಯವಸ್ಥೆಯ ಆಗರವಾಗಿದ್ದು, ಕಳೆದ ಹಲವು ವರ್ಷಗಳಿಂದ ಸಮರ್ಪಕ ಕಾಮಗಾರಿಹಾಗಿಲ್ಲ, ಗುಂಡಿ ಒಳಗೆ ವೃದ್ಧರು, ಮಹಿಳೆಯರು, ಮಕ್ಕಳು ಬಿದ್ದು ಗಾಯಗೊಂಡಿದ್ದಾರೆ. ಚುನಾಯಿತ ಪ್ರತಿನಿಧಿಗಳು ಇಲ್ಲದ ಕಾರಣ ಈ ಅವ್ಯವಸ್ಥೆಗೆ ಕಾರಣವಾಗಿದೆ ಎಂದು ಆರೋಪಿಸಿದ ಅವರು ಪುರಸಭಾ ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಊರಿನ ಹಿರಿಯ ನಾಗರಿಕರ ಸಭೆ ಕರೆದು ವಾರ್ಡ್‌ ಸಮಸ್ಯೆ ಕೇಳಿಲ್ಲ, ಇದರಿಂದ ನಾಗರಿಕರ ಕೆಲಸ ಕಾರ್ಯಗಳಿಗೆ ತೀವ್ರ ತೊಂದರೆ ಉಂಟಾಗಿದೆ, ಅಲ್ಲದೆ ಪುರಸಭಾ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ದೂರಿದರು.

ಮನವಿಗೆ ಕಿವಿಗೊಡದ ಪ್ರತಿಭಟನಾಕಾರರು: ನಿಮ್ಮ ಸಮಸ್ಯೆಗಳು ಏನು ಇದೆ ಎಂದು ಹೇಳಿ, ಅದಕ್ಕೆ ಸ್ಪಂದಿಸಿ ಕೆಲಸ ಮಾಡಿಕೊಡುತ್ತೇವೆ ಎಂದು ಪುರಸಭಾ ಮುಖ್ಯಾಧಿಕಾರಿ ಜಗರೆಡ್ಡಿ ಹಲವು ಬಾರಿ ಮನವಿ ಮಾಡಿದರೂ ಇದಕ್ಕೆ ಕಿವಿಗೊಡದ ಪ್ರತಿಭಟನಾಕಾರರು ತಹಶೀಲ್ದಾರ್‌ ಅವರು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು, ಬಳಿಕ ವಾರದ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಾಧಿಕಾರಿಗಳು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಟ್ಟರು. ಪ್ರತಿಭಟನೆ ಯಲ್ಲಿ ಮುಖಂಡರಾದ ಅಜಾಂಪಾಷಾ, ನ್ಯಾಮತ್‌, ಆರಿಫ್, ಕಾಜಾವಾಲಿ, ಇಮ್ರಾನ್‌ ಇತರರು ಇದ್ದರು.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.