ಮರ ಕಡಿದ ಅಧಿಕಾರಿಗಳ ಕ್ರಮ ಖಂಡಿಸಿ ಪ್ರತಿಭಟನೆ


Team Udayavani, Sep 11, 2019, 12:49 PM IST

tk-tdy-2

ತುಮಕೂರು ಶಿರಾಗೇಟ್ ಬಳಿ ಇರುವ ಟಾಮ್ಲಿಸನ್‌ ಚರ್ಚ್‌ ಆವರಣದ ಹಳೆ ಮರಗಳನ್ನು ತೆರವುಗೊಳಿಸಲು ಮುಂದಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಕ್ರಮ ಖಂಡಿಸಿ ಚರ್ಚ್‌ನ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ತುಮಕೂರು: ನಗರದ ಶಿರಾಗೇಟ್ ಬಳಿ ಇರುವ ಟಾಮ್ಲಿಸನ್‌ ಚರ್ಚ್‌ ಆವರಣದಲ್ಲಿ ಹಲವಾರು ವರ್ಷಗಳಿಂದ ಇರುವ ಹಳೆಯ ಮರಗಳನ್ನು ಏಕಾಏಕಿ ತೆರವುಗೊಳಿಸಲು ಮುಂದಾದ ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳ ಕ್ರಮ ಖಂಡಿಸಿ ಮಂಗಳವಾರ ಚರ್ಚ್‌ನ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಟಾಮ್ಲಿಸನ್‌ ಚರ್ಚ್‌ನ ಆವರಣದ ಮರಗಳನ್ನು ಕಡಿದು ಜಾಗ ವಶಪಡಿಸಿಕೊಳ್ಳಲು ಮುಂದಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ ಮೋಹನಕುಮಾರ್‌ ಮತ್ತು ಸಿಬ್ಬಂದಿ ಧೋರಣೆ ವಿರೋಧಿಸಿದ ಚರ್ಚ್‌ನ ಪದಾಧಿಕಾರಿಗಳು, ಮರ ಕಡಿಯುವುದಕ್ಕೆ ಹಾಗೂ ವಿದ್ಯುತ್‌ ಕಂಬಗಳ ಸ್ಥಳಾಂತರಕ್ಕೆ ತಡೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ವಿರೋಧ: ಮರ ಕಡಿಯುವ ಸಂಬಂಧ ಚರ್ಚ್‌ಗೆ ಯಾವುದೇ ನೋಟಿಸ್‌ ನೀಡಿಲ್ಲ. ಚರ್ಚ್‌ನ ದಾಖಲಾತಿ ಪರಿಶೀಲಿಸಿಲ್ಲ. ಏಕಾಏಕಿ ಮರಗಳ ತೆರವಿಗೆ ಬಂದಿರುವುದು ಸರಿಯಲ್ಲ ಎಂದು ವಿರೋಧಿಸಿದರು. ಚರ್ಚ್‌ ಆವರಣಕ್ಕೆ ಅತಿಕ್ರಮ ಪ್ರವೇಶ ಮಾಡಿ ಮರಗಳ ತೆರವಿಗೆ ಮುಂದಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ವಿರುದ್ಧ ಪೊಲೀಸ್‌ ಇಲಾಖೆ, ಅರಣ್ಯ ಇಲಾಖೆ ಹಾಗೂ ಬೆಸ್ಕಾಂಗೆ ದೂರು ನೀಡಿರುವುದಾಗಿ ಜಗದೀಶ್‌ ಮೋಹನ್‌ ತಿಳಿಸಿದರು.

ದೂರು ನೀಡಿದ್ದೇವೆ: ಚರ್ಚ್‌ಗೆ ಸಂಬಂಧಿಸಿದ ಸಿಎಸ್‌ಐ ಸಂಸ್ಥೆ ಇದೆ. ಈ ಬಗ್ಗೆ ನಮ್ಮ ಸಂಸ್ಥೆಗೆ ದೂರು ನೀಡಿದ್ದೇವೆ. ಸಂಸ್ಥೆಯಲ್ಲಿ ಲಭ್ಯ ಇರುವ ದಾಖಲಾತಿ ತಂದು, ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಯಾವುದೇ ಮಾಹಿತಿ ನೀಡದೆ ಏಕಾಏಕಿ ಅತಿಕ್ರಮ ಪ್ರವೇಶ ಮಾಡಿರುವುದು ಸರಿಯಲ್ಲ. ಸಿಎಸ್‌ಐ ಸಮಿತಿ ಒಪ್ಪಿದರೆ ನಮ್ಮ ಜಾಗಕ್ಕೆ ಸೂಕ್ತ ಪರಿಹಾರ ನೀಡಿದರೆ ಮಾತ್ರ ಸಮ್ಮತಿ ಸೂಚಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಚರ್ಚ್‌ನ ಪದಾಧಿಕಾರಿಗಳಾದ ಸಂಜೀವ ಕುಮಾರ್‌, ವಿಜಯರಾಜಕುಮಾರ್‌, ಜಿ.ಕೆ.ವಿನೋದಕುಮಾರ್‌, ನರಸೀಕುಮಾರ್‌, ನೆಲ್ಸನ್‌, ಸ್ಯಾಮ್ಸನ್‌, ಸುನೀಲ್ ಮತ್ತಿತರರು ಇದ್ದರು.

ಅಪಘಾತ ಹೆಚ್ಚಳ: ಟಾಮ್ಲಿಸನ್‌ ಚರ್ಚ್‌ ಮುಂಭಾಗ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗಿ ಸಾವು-ನೋವು ಸಂಭವಿಸುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಚರ್ಚ್‌ ಮುಂಭಾಗ ಇರುವ ಮರಗಳ ಕೊಂಬೆ ಕಡಿದು ವಿದ್ಯುತ್‌ ಕಂಬ ಸ್ಥಳಾಂತ ರಿಸುವಂತೆ ಸೂಚನೆ ನೀಡಿದ್ದರು.

ಹೀಗಾಗಿ ಚರ್ಚ್‌ ಮುಂಭಾಗ ಇರುವ ಮರಗಳ ಕೊಂಬೆ ಕಡಿದು ವಿದ್ಯುತ್‌ ಕಂಬಗಳ ಸ್ಥಳಾಂತರಕ್ಕೆ ಮುಂದಾಗಿದ್ದೆವು. ಆದರೆ ಅಲ್ಲಿನ ಜನತೆ ಬಂದು ಅಡ್ಡಿ ಪಡಿಸಿದರು ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಡಿವೈಎಸ್ಪಿ ಮತ್ತು ಸರ್ಕಲ್ ಇನ್ಸ್‌ಪೆಕ್ಟರ್‌ ಅವರ ಗಮನಕ್ಕೆ ತಂದಾಗ ಅವರು ಒಂದು ದಿನ ಕಾಲಾವಕಾಶ ಕೇಳಿದ್ದು, ಸ್ಥಳೀಯರ ಮನವೊಲಿಸಿ ಈ ಕಾರ್ಯಕ್ಕೆ ಅನುವು ಮಾಡಿಕೊಡುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.