ಮತದಾರರ ಪಟ್ಟಿ ಪರಿಷ್ಕರಣೆಗೆ ವೇಳಾಪಟ್ಟಿ ಪ್ರಕಟ


Team Udayavani, Sep 2, 2019, 4:37 PM IST

tk-tdy-1

ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪೋಸ್ಟರ್‌ ಅನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಬಿಡುಗಡೆ ಮಾಡಿದರು.

ತುಮಕೂರು: ಜಿಲ್ಲಾದ್ಯಂತ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಿ, ದೋಷರಹಿತ ಮತದಾರರ ಪಟ್ಟಿ ತಯಾರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ಕುಮಾರ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪೋಸ್ಟರ್‌ ಬಿಡುಗಡೆ ಮಾಡಿ ಮಾತನಾಡಿದರು.

ಅರ್ಹರು ಮತದಾನದಿಂದ ವಂಚಿತರಾಗದಂತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು. ಬೂತ್‌ ಮಟ್ಟದ ಅಧಿಕಾರಿಗಳು ಕಳುಹಿಸುವ ಪ್ರತಿ ವರದಿ ಕೂಲಂಕಷವಾಗಿ ಪರಿಶೀಲಿಸಿ ತದನಂತರ ಪಟ್ಟಿ ತಯಾ ರಿಸುವಂತೆ ಕಂದಾಯ ನಿರೀಕ್ಷಕರು ಮತ್ತು ಗ್ರಾಮಲೆಕ್ಕಿಗರಿಗೆ ಎಚ್ಚರಿಕೆ ನೀಡಿದರು.

ಬಿಎಲ್ಒಗಳಿಂದ ಪರಿಶೀಲನೆ: ಜಿಲ್ಲಾದ್ಯಂತ ಸೆ.1ರಿಂದ ಅ. 30ರವರೆಗೆ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ಈ ವೇಳೆ ಜಿಲ್ಲೆಯ ಪ್ರತಿ ಮತದಾರರ ಮನೆಗೂ ಬಿಎಲ್ಒಗಳು ಹೋಗಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಒಂದು ವೇಳೆ ಬೇರೆ ಕಡೆಗೆ ಕುಟುಂಬ ಬದಲಾಗಿದ್ದರೆ ಅವರಿದ್ದ ಮನೆಗೆ ನೊಟೀಸ್‌ ಅಂಟಿಸಿ ಅದನ್ನು ವಿಡಿಯೋ ಮಾಡಿ ವರದಿ ಸಲ್ಲಿಸಬೇಕು. ಈ ಎಲ್ಲಾ ಪ್ರಕ್ರಿಯೆಗಳ ನಂತರವೇ ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಿಗದಿತ ಅರ್ಜಿ ನಮೂನೆ: ಸಮಗ್ರ ಮತದಾರರ ವಿಶೇಷ ಪರಿಷ್ಕರಣೆ ಸಂದರ್ಭ ಅ. 1ಕ್ಕೆ 18 ವರ್ಷ ತುಂಬುವ ಪ್ರತಿ ವ್ಯಕ್ತಿಯೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ. ತೆಗೆದು ಹಾಕುವುದು, ಹಾಲಿ ಮತದಾರರು ಗುರುತಿನ ಚೀಟಿಯಲ್ಲಿರುವ ಲೋಪದೋಷ ಸರಿಪಡಿಸಿಕೊಳ್ಳಲು, ಮತಗಟ್ಟೆ ಬದಲಾವಣೆಗೆ ಅವಕಾಶವಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ಜೊತೆಗೆ, ಸಾಮಾನ್ಯ ಸೇವಾ ಕೇಂದ್ರ, ಕರ್ನಾಟಕ ಒನ್‌, ಅಟಲ್ ಜನಸ್ನೇಹ ಕೇಂದ್ರ, ಮತಗಟ್ಟೆ ಅಧಿಕಾರಿ, ಬಾಪೂಜಿ ಸೇವಾ ಕೇಂದ್ರಗಳಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು ಪರಿಷ್ಕರಣೆ ಮಾಡ ಬಹುದಾಗಿದೆ. ಈ ವಿಷಯದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ತಪ್ಪು ಮರುಕಳಿಸದಿರಲಿ: ಮುಂದಿನ ವರ್ಷದ ಫೆಬ್ರವರಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬರುವ ಸಾಧ್ಯತೆಯಿದೆ. ಆ ಸಂದರ್ಭ ಈ ವರ್ಷದ ಅಕ್ಟೋಬರ್‌ನಲ್ಲಿ ಪ್ರಕಟಿಸುವ ಕರಡು ಮತದಾರರ ಪಟ್ಟಿಯೇ ಚಲಾವಣೆಗೆ ಬರಲಿದೆ. ಆದ್ದರಿಂದ ಎಚ್ಚರಿಕೆ ಯಿಂದ ಮತದಾರರ ಪಟ್ಟಿ ತಯಾರಿಸಬೇಕು. ಕಳೆದ ಲೋಕಸಭಾ ಚುನಾವಣೆ ಕೊನೆಯ ಕ್ಷಣದಲ್ಲಿ ತುಮ ಕೂರು ಗ್ರಾಮಾಂತರ, ಕೊರಟಗೆರೆ, ಮಧುಗಿರಿ ಇನ್ನಿ ತರ ಕಡೆ ಪಟ್ಟಿಯಲ್ಲಿ ಹೆಸರಿಲ್ಲದೆ ಕೆಲವರು ಮತ ದಾನದಿಂದ ವಂಚಿತರಾದರು. ಈ ಬಾರಿ ತಪ್ಪು ಮರು ಕಳಿಸದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು.

ತಹಶೀಲ್ದಾರ್‌ ಯೋಗಾನಂದ್‌, ಚುನಾವಣಾ ತಹ ಶೀಲ್ದಾರ್‌ ನಾಗಭೂಷಣ್‌, ನರಸಿಂಹರಾಜು, ಶಿರಸ್ತೆ ದಾರ್‌ ಜಯಪ್ರಕಾಶ್‌, ಆರ್‌.ಐ ಶಿವಣ್ಣ, ಗ್ರಾಮ ಲೆಕ್ಕಿ ಗರಾದ ಮುರಳೀಧರ್‌, ಶ್ರೀನಿವಾಸ್‌, ಸ್ವಿಪ್‌ ಕಮಿಟಿ ಸದಸ್ಯರಾದ ಚಂದ್ರಶೇಖರ್‌, ಶ್ರೀನಿವಾಸ್‌ಮೂರ್ತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.