ಸಿಎಂ ಗ್ರಾಮವಾಸ್ತವ್ಯದಿಂದ ಬದಲಾಗದ ಪುರ ಗ್ರಾಮ

ಅಭಿವೃದ್ಧಿ ಮರೀಚಿಕೆ • ಮಾತಿಗೆ ಸೀಮಿತವಾದ ಎಚ್‌ಡಿಕೆ ಆಶ್ವಾಸನೆ • ಉದ್ಯೋಗಕ್ಕೆ ಅಲೆದಾಡುತ್ತಿರುವ ಯೋಗಾನಂದ್‌

Team Udayavani, Jun 20, 2019, 2:54 PM IST

tk-tdy-1..

ಗ್ರಾಮವಾಸ್ತವ್ಯದ ವೇಳೆ ಭೋಜನ ಸ್ವೀಕರಿಸಿದ್ದ ಸಿಎಂ ಎಚ್‌ಡಿಕೆ.

ತುರುವೇಕೆರೆ: ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ 2006ರಲ್ಲಿ ತಾಲೂಕಿನ ಪುರ ಗ್ರಾಮದಲ್ಲಿ 2007ರ ಮೇ 3ರಂದು ಹಿಂದುಳಿದ ವರ್ಗದ ಸಮು ದಾಯದ ಹುಚ್ಚಯ್ಯ ಅವರ ಮನೆಯಲ್ಲಿ ರಾತ್ರಿ ಭೋಜನ ಸ್ವೀಕರಿಸಿ ಆದಿ ಚುಂಚನಗಿರಿ ಸಂಸ್ಥೆಯ ಶಂಭುಲಿಂಗೇಶ್ವರ ಪ್ರೌಢಶಾಲೆಯಲ್ಲಿ ವಾಸ್ತವ್ಯ ಹೂಡಿದ್ದರು.ಬಿಜೆಪಿ ಜೊತೆಗೂಡಿ ಸಮ್ಮಿಶ್ರ ಸರ್ಕಾರ ಮಾಡಿದ್ದ ವೇಳೆ ರಾಜ್ಯದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಜನಪ್ರಿಯತೆ ಗಳಿಸಿತ್ತು. ಅದರಂತೆ ತಾಲೂಕಿ ನಲ್ಲಿ ಗ್ರಾಮವಾಸ್ತವ್ಯ ಮಾಡಿದ್ದ ಎ‍ಚ್ಡಿಕೆ ಅಂದು ನೀಡಿದ್ದ ಭರವಸೆ ಇನ್ನೂ ಈಡೇರದಿರುವುದು ಗ್ರಾಮವಾಸ್ತವ್ಯದ ಬಗ್ಗೆ ಜನರಲ್ಲಿ ನಂಬಿಕೆ ಇಲ್ಲವಾಗಿದೆ.

ಅಂದು ಸಿಎಂ ಆಗಮನದ ಹಿನ್ನೆಲೆಯಲ್ಲಿ ಗ್ರಾಮ ತಳಿರು ತೋರಣಗಳಿಂದ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಅವರು ವಾಸ್ತವ್ಯ ಹೂಡಿದ್ದ ಕಾಂಪೌಂಡ್‌ ಒಳಗೆ ಸುಮಾರು 11 ಶೌಚಗೃಹ ನಿರ್ಮಿ ಸಲಾಗಿತ್ತು. ಅವರು ಮಲಗುವ ಕೊಠಡಿಗೆ ಹೊಂದಿ ಕೊಡಂತೆ ಕಮೋಡ್‌ ಶೌಚಗೃಹ ನಿರ್ಮಿಸಲಾಗಿತ್ತು. ಈಗಲೂ ಆ ಶೌಚಗೃಹ ಸುಸ್ಥಿತಿಯಲ್ಲಿದೆ.

ಸಿಕ್ಕಿಲ್ಲ ಉದ್ಯೋಗ: ಹುಚ್ಚಯ್ಯ ಎಂಬುವವರ‌ ಮನೆ ಯಲ್ಲಿ ಸಸ್ಯಾಹಾರಿ ಮತ್ತು ಶಾಖಾಹಾರಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಈ ನೆನಪಿಗೋಸ್ಕರ ಹುಚ್ಚಯ್ಯ ಅವರ ಪುತ್ರ ಯೋಗಾನಂದ್‌ಗೆ ಉದ್ಯೋಗ ಕೊಡಿಸು ವುದಾಗಿ ಭರವಸೆ ನೀಡಿದ್ದರು. ಮುಖ್ಯಮಂತ್ರಿ ಕಚೇರಿ ಯಿಂದ ಶಿಫಾರಸು ಪತ್ರ ಸಹ ನೀಡಿದ್ದರೂ ಈವರೆಗೆ ಉದ್ಯೋಗ ಸಿಕ್ಕಿಲ್ಲ. ಶಿಫಾರಸು ಪತ್ರ ಹಿಡಿದು ಮುಖ್ಯ ಮಂತ್ರಿ ಕಚೇರಿಗೆ ತೋರಿಸಿದರೂ ಪ್ರಯೋಜವಾಗಿಲ್ಲ. ಅಲೆದಾಟ ತಪ್ಪಿಲ್ಲ ಎಂದು ಯೋಗಾನಂದ್‌ ಅಳಲು ತೋಡಿಕೊಳ್ಳುತ್ತಾರೆ. ಅಂದು ಪುರ ಗ್ರಾಮಕ್ಕೆ ರಸ್ತೆ, ಚರಂಡಿ, ಪುರ ಗ್ರಾಮದಿಂದ ಮಾದಿಹಳ್ಳಿಗೆ ಸಂಪರ್ಕ ರಸ್ತೆ, ಸಮುದಾಯ ಭವನ, ಶಾಲಾಭಿವೃದ್ಧಿಗೆ ಅನುದಾನ ನೀಡುವುದಾಗಿ ನೀಡಿದ್ದ ಆಶ್ವಾಸನೆ ಇಂದಿಗೂ ಈಡೇರಿಲ್ಲ.

ಅರ್ಧಕ್ಕೆ ನಿಂತ ರಸ್ತೆ ನಿರ್ಮಾಣ: ಇತಿಹಾಸ ಪ್ರಸಿದ್ಧ ಪಂಚಲಿಂಗ ದೇವಸ್ಥಾನವಿರುವ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಸಂಕ್ರಾತಿಯಲ್ಲಿ ನಡೆಯುವ ದನಗಳ ಜಾತ್ರೆ ರಾಜ್ಯದಲ್ಲೆ ಪ್ರಸಿದ್ಧಿ ಪಡೆದಿದ್ದು, ಇಲ್ಲಿಯ ರಾಸುಗಳನ್ನು ಖರೀದಿಸಲು ದೂರದ ಜಿಲ್ಲೆಗಳಿಂದ ರೈತರು ಆಗಮಿಸುತ್ತಾರೆ. ಇಲ್ಲಿಯ ರಾಸುಗಳು ಸುಮಾರು 10 ಲಕ್ಷಕ್ಕೂ ಹೆಚ್ಚಿನ ಹಣಕ್ಕೆ ವ್ಯಾಪಾರವಾಗಿ ರುವ ಉದಾಹರಣೆಗಳು ಇವೆ. ಇಂತಹ ದೇವಾ ಲಯದ ಅಭಿವೃದ್ಧಿಗೆ ಅನುದಾನ ನೀಡಿಲ್ಲ. ಸಿಎಂ ಆಗಮಿಸುವ ವೇಳೆ ಪುರ ಗ್ರಾಮದಲ್ಲಿ ಕೇವಲ 10 ಮೀಟರ್‌ ಡಾಂಬರು ರಸ್ತೆ ಮಾತ್ರ ನಿರ್ಮಿಸಲಾಗಿತ್ತು. ಸಿಎಂ ಬಂದು ತೆರಳಿದ ನಂತರ ರಸ್ತೆ ನಿರ್ಮಾಣ ಪೂರ್ತಿಗೊಳಿಸದೆ ಅರ್ಧಕ್ಕೆ ನಿಲ್ಲಿಸಿದ್ದಾರೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.