![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಸಿದ್ಧಗಂಗಾ ಮಠಕ್ಕೆ ಶೀಘ್ರ ಹೇಮಾವತಿ ನೀರು
Team Udayavani, May 31, 2020, 7:22 AM IST
![sidd-mutt](https://www.udayavani.com/wp-content/uploads/2020/05/sidd-mutt-620x413.jpg)
ತುಮಕೂರು: ಲಕ್ಷಾಂತರ ಭಕ್ತರ ಪವಿತ್ರ ಕ್ಷೇತ್ರ ಶ್ರೀ ಸಿದ್ಧಗಂಗಾ ಮಠಕ್ಕೆ ಹೇಮಾವತಿ ನೀರು ಕೊಡುವ ಬಹು ದಿನಗಳ ಬೇಡಿಕೆ ಈಗ ಈಡೇರುತ್ತಿದೆ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಹೇಳಿದರು. ತಾಲೂಕಿನ ಊರ್ಡಿಗೆರೆ ಹೋಬಳಿಯಲ್ಲಿ ಶನಿವಾರ ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿ ಇರುವ ಜನರಿಗೆ ಎರಡನೇ ಬಾರಿಗೆ ಕ್ಷೇತ್ರದ ಎಲ್ಲಾ 65 ಸಾವಿರ ಕುಟುಂಬಗಳಿಗೂ ದಿನಸಿ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಿದ್ಧಗಂಗಾ ಮಠಕ್ಕೆ ನೀರನ್ನು ಬುಗುಡನಹಳ್ಳಿಯಿಂದ ದೇವರಾಯಪಟ್ಟಣದ ಮೂಲಕ ಮೈದಾಳ ಕೆರೆಗೆ ನೀರು ತರುವ ಯೋಜನೆ 2009-10ರಲ್ಲಿ ಟೆಂಡರ್ ಆದರೂ ಕೂಡ ಕಾಮಗಾರಿ ಪೂರ್ಣಗೊಳ್ಳದೇ ಕಾಮಗಾರಿ ಅರ್ಧಕ್ಕೆ ನಿಂತು ಹೋಗಿತ್ತು. ಈಗ ಮತ್ತೆ ಕಾಮಗಾರಿಗೆ ಚಾಲನೆ ದೊರೆತಿದೆ ಎಂದು ಹೇಳಿದರು. ಬುಗುಡನಹಳ್ಳಿಯಿಂದ ಮಂಜೂರಾಗಿದ್ದ ಕಾಮಗಾರಿ ಯನ್ನು ರದ್ದುಗೊಳಿಸಿ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆ ಅಲ್ಲಿಂದ ಮೈದಾಳ ಕೆರೆಗೆ ನೀರು ಹರಿಸಿ, ಮೈದಾಳ ಕೆರೆಯಿಂದ ಸಿದ್ಧಗಂಗಾ ಮಠಕ್ಕೆ ನೀರು ಹರಿಸಲಾಗುವುದು ಎಂದು ತಿಳಿಸಿದರು.
ಹೊನ್ನೇನಹಳ್ಳಿ ಕೆರೆಯಿಂದ ಆರಂಭಗೊಂಡ ಕಾಮಗಾರಿಗೆ ಸಚಿವ ಜಗದೀಶ್ ಶೆಟ್ಟರ್ ಶಂಕು ಸ್ಥಾಪನೆ ನೆರವೇರಿಸುವ ಮೂಲಕ ಚಾಲನೆ ನೀಡಿದ್ದು, ಇದರಿಂದ ಸಿದ್ಧಗಂಗಾ ಮಠಕ್ಕೆ ನೀರು ಹರಿಸುವ ಬಹು ದಿನಗಳ ಬೇಡಿಕೆ ಸದ್ಯದಲ್ಲೇ ಈಡೇರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಎರಡನೇ ಬಾರಿಗೆ ದಿನಸಿಕಿಟ್ ವಿತರಿಸಲಾಗುತ್ತಿದೆ, ವಾರಕ್ಕೆ ಎರಡು ಪಂಚಾಯ್ತಿ, ತಿಂಗಳಿಗೆ 8 ಪಂಚಾಯ್ತಿಗಳಲ್ಲಿ ದಿನಸಿ ಕಿಟ್ ವಿತರಣೆ ಮಾಡುವ ಮೂಲಕ ಗ್ರಾಮಾಂತರ ಕ್ಷೇತ್ರದ ಎಲ್ಲಾ 35 ಗ್ರಾಮ ಪಂಚಾಯ್ತಿಗಳಲ್ಲೂ ಮತ್ತೆ ದಿನಸಿ ಕಿಟ್ಗಳನ್ನು ವಿತರಿಸುವುದಾಗಿ ತಿಳಿಸಿದರು.
ಬಸವಾಪಟ್ಟಣ ಬಸವಣ್ಣ ದೇವಾಲಯ ನಿರ್ಮಿಸಿಕೊಡು ವಂತೆ ಗ್ರಾಮಸ್ಥರು ಮನವಿ ಮಾಡಿದ ಮೇರೆಗೆ ಮನವಿಗೆ ಸ್ಪಂದಿಸಿ ಶಾಸಕ ಡಿ.ಸಿ.ಗೌರಿಶಂಕರ್ ಬಸವಣ್ಣ ದೇವಾಲಯ ನಿರ್ಮಾಣ ಮಾಡಿಕೊಡುವ ಆಶ್ವಾಸನೆ ನೀಡಿದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.