ಶೀಘ್ರ ಕೆಂಪೇಗೌಡರ ಪುತ್ಥಳಿ ಸ್ಥಾಪನೆ


Team Udayavani, Jun 28, 2020, 7:09 AM IST

shigra-stapane

ತುಮಕೂರು: ನಾಡಪ್ರಭು ಕೆಂಪೇಗೌಡರ ಅಭಿವೃದ್ಧಿ ಪರ್ವ ಇಂದು ಇಡೀ ವಿಶ್ವವೇ ಕೊಂಡಾಡುತ್ತಿದ್ದು, ಇಂಥ ಮಹಾನ್‌ ವ್ಯಕ್ತಿಯ ಪುತ್ಥಳಿಯನ್ನು ತುಮಕೂರು ನಗರದಲ್ಲಿ ನಿರ್ಮಾಣ ಮಾಡಬೇಕು. ಹಾಗೆಯೇ ಡಾ. ಶ್ರೀ  ಬಾಲಗಂಗಾಧರನಾಥ ಸ್ವಾಮೀಜಿ ಪುತ್ಥಳಿ ಯನ್ನೂ ಅನಾವರಣ ಮಾಡ ಬೇಕು ಎಂಬುದು ನಮ್ಮೆಲ್ಲರ ಆಶಯ ಎಂದು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್‌ ಹೇಳಿದರು.

ನಗರದ ಜಿಲ್ಲಾ ಜೆಡಿಎಸ್‌ ಕಚೇರಿಯಲ್ಲಿ ನಡೆದ ಕೆಂಪೇಗೌಡರ  511ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಇಡೀ ವಿಶ್ವಕ್ಕೆ ಬೆಂಗಳೂರು ಎಂದರೆ ದೊಡ್ಡ ಸಿಟಿ, ಜಾತಿ ಇಲ್ಲ, ಪಕ್ಷ ಇಲ್ಲ, ಹೈಟೆಕ್‌ ಸಿಟಿ, ಸಿಲಿಕಾನ್‌ ಸಿಟಿ ಎಂತೆಲ್ಲಾ ಕರೆಯುವ ಬೆಂಗಳೂರಿ ನಲ್ಲಿ ಕೂಲಿ ಮಾಡುವವನಿಂದ  ಹಿಡಿದು ದೊಡ್ಡ ಶ್ರೀಮಂತರವರೆಗೂ ಜೀವನ ನಡೆಸುವಂತಹ ಶಕ್ತಿ ಕೆಂಪೇಗೌಡರು ಕಲ್ಪಿಸಿಕೊಟ್ಟಿದ್ದಾರೆ ಎಂದರು.

ಗೌಡರ ಕೊಡುಗೆ ಅಪಾರ: ಕೆಂಪೇಗೌಡರ ಬಗ್ಗೆ ಎಷ್ಟು ಅಭಿಮಾನ, ಸ್ವಾಭಿಮಾನ ಇಟ್ಟುಕೊಂಡಿದ್ದೇವೋ ಅದೇರೀತಿ ಶ್ರೀ ಬಾಲಗಂಗಾಧರನಾಥ ಸ್ವಾಮಿಗಳ ಸ್ವರೂಪದಲ್ಲಿ ನಾವು ದೇವರನ್ನು ಕಾಣುತ್ತಿದ್ದೇವೆ. ಅದೇ ರೀತಿ ಜನಾಂಗದಲ್ಲಿ  ಇಡೀ ದೇಶದಲ್ಲಿ ಒಬ್ಬ ಒಕ್ಕಲಿಗರ ಮಗ ಪ್ರಧಾನಿಯಾಗಬಹುದು ಎಂಬುದನ್ನು ರೈತನ ಮಗನಾಗಿ ದೇವೇ ಗೌಡರು ತೋರಿಸಿಕೊಟ್ಟಿದ್ದಾರೆ ಎಂದರು.

ಶ್ರೀಗಳ ಪುತ್ಥಳಿ ನಿರ್ಮಾಣ: ಇಂದು ದೊಡ್ಡ ದೊಡ್ಡ ಇತಿಹಾಸ ಸೃಷ್ಟಿಸಿರುವ ಅನೇಕ ವಿದ್ಯಾಸಂಸ್ಥೆಗಳನ್ನು ಹೊಂದಿ ಅನ್ನದಾಸೋಹ ಮಾಡುತ್ತಿರುವ ಸಿದ್ಧಗಂಗಾ ಮಠ, ಆದಿ ಚುಂಚನಗಿರಿ ಮಠ ಆಗಿರಬಹುದು ಅನೇಕ ಮಠಗಳ ಪೀಠಾಧ್ಯಕ್ಷರ ಪುತ್ಥಳಿಗಳನ್ನು ಅನಾವರಣ ಮಾಡುವಂತಹ ಕಾರ್ಯ ಜಿಲ್ಲೆಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.

ಶೀಘ್ರದಲ್ಲಿಯೇ ಸ್ಥಳ ನಿಗದಿ: ಈಗಾಗಲೇ ತುಮಕೂರಿನ ಟೌನ್‌ಹಾಲ್‌ ವೃತ್ತಕ್ಕೆ ಬಿಜಿಎಸ್‌ ವೃತ್ತ ಎಂದು ನಾಮಕರಣ ಮಾಡಲಾಗಿದೆ. ಅಲ್ಲಿ ಡಾ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಗಳ ಪುತ್ಥಳಿ ನಿರ್ಮಿಸುವುದರ ಜೊತೆಗೆ ಪಾಲಿಕೆ  ಆವರಣದಲ್ಲಿರುವ ಉದ್ಯಾನ ವನದಲ್ಲಿ ಕೆಂಪೇಗೌಡರ ಪ್ರತಿಮೆ ಅನಾ ವರಣ ಮಾಡಲು ಪಾಲಿಕೆ ಮೇಯರ್‌ಗೆ ಮನವಿ ಸಲ್ಲಿಸಲಾಗಿದೆ. ಆಯುಕ್ತ ರೊಂದಿಗೂ ಮಾತ ನಾಡಿದ್ದೇನೆ ಜುಲೈ ತಿಂಗಳಲ್ಲಿ ನಡೆಯುವ ಪಾಲಿಕೆಯ ಸಾಮಾನ್ಯ  ಸಭೆಯಲ್ಲಿ ಸದರಿ ವಿಷಯ ವನ್ನು ಮಂಡಿಸಿ, ಸದಸ್ಯರು ಒಪ್ಪಿಗೆ ಪಡೆದು ಶೀಘ್ರದಲ್ಲಿಯೇ ಜಾಗ ಗೊತ್ತು ಮಾಡಿ ತಿಳಿಸಲಾಗುವುದು ಎಂಬ ಭರವಸೆಯನ್ನು ನೀಡಿದ್ದಾರೆ ಎಂದರು.

ಕೈಲಾದಷ್ಟು ಸಹಾಯ ಮಾಡಿ: ಎಷ್ಟು ಅಡಿ ಪುತ್ಥಳಿ ನಿರ್ಮಾಣ ಮಾಡಬೇಕು ಎಂಬುದನ್ನು ಜಾತ್ಯತೀತ, ಪಕ್ಷಾತೀತವಾಗಿ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿ ಚರ್ಚಿಸ ಲಾಗುವುದು. ಪುತ್ಥಳಿ ನಿರ್ಮಾಣಕ್ಕೆ ಅಂದು ನಿಮ್ಮ  ಕೈಲಾದಷ್ಟು ಸಹಾಯ ಮಾಡಬಹುದು ಎಂದರು. ಬಾಲಗಂಗಾಧರನಾಥ ಸ್ವಾಮೀಜಿ ಪುತ್ಥಳಿಯನ್ನು ನಿರ್ಮಾಣ ಮಾಡಬೇಕೆ ನ್ನುವ ನಿಟ್ಟಿನಲ್ಲಿ ಆದಿಚುಂಚನಗಿರಿ ಶ್ರೀಗಳನ್ನು ನಿಯೋಗದಲ್ಲಿ ಭೇಟಿ ಮಾಡಿ, ಸರ್ಕಾರಕ್ಕೆ ಮನವಿ ಸಲ್ಲಿಸಿ  ಸೂಕ್ತವಾದ ಜಾಗ ಸರ್ಕಾರ ಕಲ್ಪಿಸಿಕೊಟ್ಟರೆ, ಈಗಿರುವ ಬಿಜಿಎಸ್‌ ವೃತ್ತದಲ್ಲಿ ಪುತ್ಥಳಿ ನಿರ್ಮಾಣ ಮಾಡಲು ಸಿದ್ಧರಿರುವುದಾಗಿ ತಿಳಿಸಿದರು.

ಜೆಡಿಎಸ್‌ ಕಾರ್ಯಾಧ್ಯಕ್ಷ ಟಿ.ಆರ್‌. ನಾಗರಾಜು, ಮಹಾಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ, ತಾಲೂಕು ಜೆಡಿಎಸ್‌  ಅಧ್ಯಕ್ಷ ಹಾಲನೂರು ಅನಂತಕುಮಾರ್‌, ರಾಜ್ಯ ಹಿರಿಯ ಉಪಾಧ್ಯಕ್ಷ ಗಂಗಣ್ಣ, ಜಿಲ್ಲಾ ಉಪಾಧ್ಯಕ್ಷ ಆರ್‌.ದೇವರಾಜು, ನಗರಾಧ್ಯಕ್ಷ ಬೆಳ್ಳಿ ಲೋಕೇಶ್‌ ಇದ್ದರು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.