ಸಂಕುಚಿತ ಭಾವನೆ ಬಿಟ್ಟು ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ


Team Udayavani, Jan 6, 2020, 12:56 PM IST

sdanckuchita

ತಿಪಟೂರು: ಮಹಿಳೆ ಸಂಕುಚಿತ ಮನೋಭಾವದಿಂದ ಹೊರಬಂದು ಆತ್ಮಸ್ಥೈರ್ಯ ಹಾಗೂ ಪ್ರಶ್ನಿಸುವ ಗುಣ ಬೆಳೆಸಿಕೊಂಡಾಗ ಸಮಾಜದಲ್ಲಿ ಧೈರ್ಯ, ಆತ್ಮವಿಶ್ವಾಸದಿಂದ ಬದುಕು ನಡೆಸಲು  ಸಾಧ್ಯ ಎಂದು ತಾಲೂಕಿನ ಕೊನೇಹಳ್ಳಿ ಆಯುಷ್‌ ವೈದ್ಯಾಧಿಕಾರಿ ಡಾ. ಸುಮನಾ ತಿಳಿಸಿದರು. ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಅರಳ ಗುಪ್ಪೆಯ ಮಹಿಳಾ ತಂತ್ರಜ್ಞಾನ ಉದ್ಯಮದಲ್ಲಿ ಬೆಂಗಳೂರು ಟೈಡ್‌ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಮಹಿಳಾ ನಾಯಕತ್ವ ತರಬೇತಿ ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರ ಗೌರವಿಸಿ: ಎಲ್ಲಾ ರಂಗಗಳಲ್ಲಿಯೂ ಸಾಧನೆಗೈಯುತ್ತಿರುವ ಉತ್ತಮ ಸ್ಥಾನಮಾನ  ಪಡೆದಿರುವ ಮಹಿಳೆಯರು ಶಿಕ್ಷಣವಂತರು, ಪ್ರಜ್ಞಾವಂತರಾಗಿದ್ದರೂ ಸಂಕುಚಿತ ಮನೋಭಾವ ಗಳಿಂದ ಆತ್ಮಸ್ಥೈರ್ಯ ಕಳೆದುಕೊಳ್ಳುತ್ತ ತಮಗೆ ತಾವೇ ನಿರ್ದಿಷ್ಟ ಗುರಿ-ಗೆರೆ ಹಾಕಿಕೊಳ್ಳುತ್ತಿರುವುದು ನೋವಿನ ಸಂಗತಿ. ಮಹಿಳೆ ಎಲ್ಲಾ ತ್ರಗಳಲ್ಲಿಯೂ  ಸಾಧನೆ ಮಾಡುವ ಮೂಲಕ ಕುಟುಂಬದ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದಾಳೆ.

ಯಶಸ್ವಿಪುರುಷನ ಹಿಂದೆ ಒಬ್ಬ ಯಶಸ್ವಿ ಮಹಿಳೆ  ಇದ್ದೇ  ಇರುತ್ತಾಳೆ. ಈ ನಿಟ್ಟಿನಲ್ಲಿ ಸಮಾಜದಲ್ಲಿ ಮಹಿಳೆಯರನ್ನು ಗೌರವಿಸುವ ಮೂಲಕ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದು ಸಲಹೆ  ಡಿದರು. ಬೆಂಗಳೂರು ಟೈಡ್‌ ಸಂಸ್ಥೆ ಹಿರಿಯ ವ್ಯವಸ್ಥಾಪಕಿ ಎಸ್‌. ಪ್ರಮೀಳಾ ಮಾತನಾಡಿ, ಮಹಿಳೆ ಅಬಲೆ ಯಲ್ಲ ಸಬಲೆ. ಆತ್ಮಸ್ಥೈರ್ಯದಿಂದ  ವುದೇ ಕೆಲಸ ಮಾಡಿದರೂ ಯಶಸ್ಸು ಕಟ್ಟಿಟ್ಟ ಬುತ್ತಿ.

ಮಹಿಳೆಯರು ಹಲವು ಸಂಘ-ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದುವ ಜತೆಗೆ  ಕುಟುಂಬ ನಿರ್ವಹಣೆ ಜವಾಬ್ದಾರಿಯನ್ನೂ ಹೊತ್ತಿದ್ದಾಳೆ. ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂಬ ದೃಷ್ಟಿಯಿಂದ ಟೈಡ್‌ ಸಂಸ್ಥೆ ಹಲವು ಕಾರ್ಯಕ್ರಮ ಆಯೋಜಿಸುವ ಮೂಲಕ ಮಹಿಳೆಯರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದರು.

ಆರ್ಥಿಕ ಸಾಕ್ಷರತೆ, ಸ್ವ ಉದ್ಯಮ ಅವಕಾಶಗಳು,  ಮಾರುಕಟ್ಟೆ ಕುರಿತು ಜ್ಞಾನಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರದ ಹಿರಿಯ ಸಮಾಲೋಚಕಿ ಪಿ. ರೇಖಾ, ಸಂಪನ್ಮೂಲ ವ್ಯಕ್ತಿ ಸುಧಾ ಮಾಹಿತಿ ಹಕ್ಕು ಅಧಿನಿಯಮ, ಗ್ರಾಮ ಪಂಚಾಯತ್‌ ವಿವಿಧ ಯೋಜನೆಗಳು, ಸಾಮಾಜಿಕ ಭದ್ರತಾ ಯೋಜನೆ ಗಳು ಹಾಗೂ ಮಹಿಳಾ ನಾಯಕತ್ವ ಕುರಿತು ಮಾಹಿತಿ  ನೀಡಿದರು. ಮಹಿಳಾ ಮತ್ತು ಮಕ್ಕಳಅಭಿವೃದ್ದಿ ಇಲಾಖೆ ವಿವಿಧ ಯೋಜನೆಗಳ ಬಗ್ಗೆ ತುಮಕೂರು ಮಹಿಳಾ ಶಕ್ತಿ ಕೇಂದ್ರದ ಮಹಿಳಾ ಕಲ್ಯಾಣ ಧಿಕಾರಿ  ಸುನೀತಾ ತಿಳಿಸಿದರು.

ವಿದ್ಯಾನಂದ ಯೋಗ ಮತ್ತು ಆರೋಗ್ಯದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಡಾ. ಸಂಜಯ್‌, ಜಿಲ್ಲಾ  ಒಕ್ಕೂಟದ ಅಧ್ಯಕ್ಷೆ ಶಾಂತಕುಮಾರಿ, ತುಮಕೂರು, ಗುಬ್ಬಿ, ತಿಪಟೂರು, ತುರುವೇಕೆರೆ, ಚಿಕ್ಕನಾಯಕನ ಹಳ್ಳಿ ವಿವಿಧ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಮಹಿಳೆಯರು, ಕ್ವೀನ್‌ ಕಾರ್ಯ ಕ್ರಮದ ಪ್ರೇರಕರು ಮತ್ತಿತರರಿದ್ದರು.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.