ರಾಗಿ ಹಣ ರೈತರ ಕೈಗೆ ಸೇರಿಲ್ಲ


Team Udayavani, May 16, 2019, 12:26 PM IST

Udayavani Kannada Newspaper

ತಿಪಟೂರು: ತಾಲೂಕಿನ ರೈತರು ಸರ್ಕಾರದ ರಾಗಿ ಖರೀದಿ ಕೇಂದ್ರಕ್ಕೆ ಸಾವಿರಾರು ಕ್ವಿಂಟಲ್ ರಾಗಿ ಮಾರಿದ್ದು, ಮಾರಾಟ ಮಾಡಿರುವ ರಾಗಿ ಹಣ ಮಾತ್ರ ಇನ್ನೂ ರೈತರ ಕೈಗೆ ಸೇರಿಲ್ಲ. ಆದ್ದ ರಿಂದ ನಮ್ಮ ರಾಗಿ ಮಾರಿರುವ ಹಣಕ್ಕೂ ಚುನಾ ವಣಾ ನೀತಿಸಂಹಿತೆ ಅಡ್ಡಿಯಾಗಬೇಕೆ ಎಂದು ರೈತರು ಜಿಲ್ಲಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 2019 ಜನವರಿ 12ರಿಂದ ಮಾರ್ಚ್‌ ಅಂತ್ಯದವರೆಗೂ ತಾಲೂಕಿನಲ್ಲಿ ನಫೆಡ್‌ನ‌ ರಾಗಿ ಖರೀದಿ ಕೇಂದ್ರದಲ್ಲಿ ರೈತರಿಂದ ಕ್ವಿಂಟಲ್ ರಾಗಿಗೆ 2970ರಂತೆ ಬೆಂಬಲ ಬೆಲೆಗೆ ಸಾವಿರಾರು ಕ್ವಿಂಟಲ್ ರಾಗಿ ಖರೀದಿ ಮಾಡಿ ದ್ದಾರೆ. ಸರ್ಕಾರಕ್ಕೆ ನಾವು ರಾಗಿ ಮಾರಾಟ ಮಾಡುವುದ ರಿಂದ ಬೇಗ ಹಣ ಸಿಕ್ಕಿ, ನಮ್ಮ ಕಷ್ಟ ಗಳಿಗೆ ಅನುಕೂಲವಾಗುತ್ತದೆ ಎಂಬ ಆಸೆಯಿಂದ ರೈತರು ಸಹ ಮಾರಾಟ ಮಾಡಿದ್ದಾರೆ. ಆದರೆ, ಹಣ ಮಾತ್ರ ಇನ್ನೂ ಸಿಕ್ಕಿಲ್ಲ.

ರಾಗಿ ಕೇಂದ್ರಕ್ಕೆ ರೈತರ ಅಲೆದಾಟ: ಮನೆ ಖರ್ಚು, ವಿದ್ಯಾಭ್ಯಾಸದ ಖರ್ಚು, ಮುಂಗಾರು ಹಂಗಾಮಿಗೆ ಗೊಬ್ಬರ-ಬಿತ್ತನೆ ಬೀಜಗಳ ಖರ್ಚಿಗೆ ಹಣ ಸಿಗುವುದು ಎಂಬ ಆಸೆಯಿಂದ ರೈತರು ರಾಗಿ ಮಾರಿ, ನಿತ್ಯವೂ ದುಡ್ಡು ಬಂತಾ ಎಂದು ರೈತರು ನಫೆಡ್‌ ಕೇಂದ್ರಕ್ಕೆ ಅಲೆದಾಡು ವಂತಾಗಿದೆ. ಒಂದು ದಿನ ರಾಗಿ ಖರೀದಿ ಕೇಂದ್ರಕ್ಕೆ ಒಬ್ಬ ರೈತ ಬಂದು ಹೋಗಲು ನೂರು ರೂ. ಬೇಕಾಗುತ್ತದೆ. ಹಾಗಾಗಿ ರೈತರು ಸಿಕ್ಕಿದಷ್ಟು ಬೆಲೆಗೆ ಖಾಸಗಿ ವ್ಯಾಪಾರಿಗಳಿಗೆ ಮಾರಿದ್ದರೆ ಕೈ ಮೇಲೆ ದುಡ್ಡು ಕೊಡುತ್ತಿದ್ದರು. ಆದರೆ, ಸರ್ಕಾರ ನಂಬಿ ರಾಗಿ ಮಾರಿ 3-4 ತಿಂಗಳು ಅಲೆಯ ಬೇಕಾಗಿರುವುದು ಯಾವ ನ್ಯಾಯ. ರೈತನಿಗೆ ಬೇರೆ ಆದಾಯ ಇಲ್ಲವಾಗಿದ್ದು, ಮಾರಿರುವ 8-10 ಕ್ವಿಂಟಲ್ ರಾಗಿಗೂ ಸರ್ಕಾರ ನಮ್ಮನ್ನು ಅಲೆದಾಡಿಸುತ್ತಿರುವುದು ನೋಡಿದರೆ ರೈತರ ಮೇಲೆ ಕಾಳಜಿಯೇ ಇಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿಯಲ್ಲಿ ರಾಗಿ ಬೆಲೆ ಕ್ವಿಂಟಲ್‌ಗೆ 2500 ರೂ. ಇದ್ದು, ಮಾರಿದ ತಕ್ಷಣವೇ ಹಣ ನೀಡುತ್ತಾರೆ. ಆದರೆ, ಈ ಬೆಲೆ ನಮಗೆ ನಷ್ಟ ಎಂದು ಸರ್ಕಾರಕ್ಕೆ 2970 ರೂ.ಗೆ ವಾರಗಟ್ಟಲೆ ಅಲೆದು ರಾಗಿ ಮಾರಿ ಹಣಕ್ಕಾಗಿ ತಿಂಗಳುಗಟ್ಟಲೆ ಕಾಯುವ ಸ್ಥಿತಿ ಬಂದಿದೆ. 1 ಕ್ವಿಂಟಲ್‌ ರಾಗಿ ಬೆಳೆಯಲು 4 ಸಾವಿರಕ್ಕೂ ಹೆಚ್ಚು ಖರ್ಚು ಬರುತ್ತಿದ್ದು, ಸರ್ಕಾರಕ್ಕೆ ಕೇವಲ 2970 ರೂ.ಗಳಿಗೆ ಮಾರಿದರೂ ಹಣ ಸಿಗಲು ಕಾಯಬೇಕಾಗಿದೆ. ನೀತಿ ಸಂಹಿತೆಗೂ ನಾವು ಮಾರಿರುವ ರಾಗಿ ಹಣಕ್ಕೂ ಯಾವ ಸಂಬಂಧವಿದೆ.
●ಕೈಲಾಸಸ್ವಾಮಿ, ಮಾರುಗೊಂಡನಹಳ್ಳಿ ರೈತ
ಹಣ ಜಮಾ ಮಾಡದಿದ್ದರೆ ಪ್ರತಿಭಟನೆ ರೈತರು ಬರಗಾಲದ ನಡುವೆಯೂ ಕಷ್ಟಪಟ್ಟು ಬೆಳೆದ ರಾಗಿಯನ್ನು ತಮ್ಮ ದೈನಂದಿನ ಕಷ್ಟ ಗಳನ್ನು ತೀರಿಸಿಕೊಳ್ಳುವ ಸಲುವಾಗಿ ಹಗಲು  ರಾತ್ರಿ ಖರೀದಿ ಕೇಂದ್ರದ ಮುಂದೆ ಕಾಯ್ದು ಕುಳಿತು ರಾಗಿ ಮಾರಾಟ ಮಾಡಿದ್ದರೂ ಪ್ರಯೋಜನವಾಗಿಲ್ಲ. ವರ್ಷವೆಲ್ಲಾ ಬಂಡ ವಾಳ ಮತ್ತು ಶ್ರಮ ಹಾಕಿ ಬೆಳೆದ ರಾಗಿಯನ್ನು ಕೊಂಡುಕೊಂಡ ನಿಗಮ ರೈತರ ಖಾತೆಗಳಿಗೆ ಹಣ ಜಮಾ ಮಾಡದೆ, ತಮ್ಮ ಕೆಲಸದಲ್ಲಿ ಉದಾಸೀನತೆ ತೋರಿದ್ದಾರೆ. ಕೂಡಲೇ ಹಣ ಜಮಾ ಆಗದ ರೈತರ ವಿವರಗಳನ್ನು ಕಲೆ ಹಾಕಿ, ರಾಗಿ ಖರೀದಿ ಮಾಡಿರುವ ಹಣವನ್ನು ಅವರ ಖಾತೆಗಳಿಗೆ ಜಮಾ ಮಾಡಬೇಕು. ಇಲ್ಲ ವಾದಲ್ಲಿ ರೈತರ ಜೊತೆ ಪ್ರತಿಭಟನೆ ಹಮ್ಮಿ ಕೊಳ್ಳಲಾಗುವುದು ಎಂದು ಜೆಡಿಎಸ್‌ ಮುಖಂಡ ಲೋಕೇಶ್ವರ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.