ಮಳೆ, ಚಳಿಯಿಂದ ರೈತರಿಗೆ ಸಮಸ್ಯೆಗಳ ಸಾಗರ


Team Udayavani, Nov 15, 2021, 5:55 PM IST

ರೈತರಿಗೆ ಸಮಸ್ಯೆಗಳ ಸಾಗರ

ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಸಾಕಪ್ಪ ಎನ್ನುವಷ್ಟು ಮಳೆ ಆಗದಿದ್ದರೂ, ಜಡಿ ಮಳೆಗೆ ಜನರು ಬೇಸತ್ತು ಹೋಗಿದ್ದಾರೆ. ಜೋರಾಗಿಯೂ ಬರದೆ, ಸುಮ್ಮನೆಯೂ ಇರದೆ ದಿನಪೂರ್ಣ ಮೋಡ ಕವಿದ ವಾತಾವರಣದಿಂದ ದಿನನಿತ್ಯದ ಕೆಲಸ ಕಾರ್ಯಗಳಿಗೆ ತೊಡಕು ಉಂಟಾಗಿದೆ. ಏನಾದರು ನಷ್ಟ ಸಂಭವಿಸಿದರೆ, ಅದನ್ನು ಅನುಭವಿಸುವುದು ಕೃಷಿಕರು ಎಂಬುವುದು ಮತ್ತೋಮ್ಮೆ ಸಾಬೀತಾಗಿದೆ.

ತಾಲೂಕಿನಲ್ಲಿ ಸತತ ಒಂದು ವಾರದಿಂದ ಸುರಿಯುತ್ತಿರುವ ಸೋನೆ ಮಳೆಗೆ ಬೇಯಿಸಿದ ಅಡಕೆ ಕೊಳೆತು ಹೋಗುತ್ತಿದೆ. ರಾಗಿ ಪೈರು ನೆಲಕಚ್ಚಿದೆ. ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದೆ. ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರವಿಲ್ಲದಂತಾಗಿದೆ. ಕೂಲಿ ಕಾರ್ಮಿಕರು ಕೆಲಸ ಮಾಡಲಾಗುತ್ತಿಲ್ಲ. ಮನೆಗಳು ಕುಸಿಯುತ್ತಿವೆ. ಸರ್ಕಾರಿ ಕಟ್ಟಡಗಳ ಮೇಲೆ ನೀರು ನಿಲ್ಲುತ್ತಿದೆ, ರಸ್ತೆಗಳು ಕೆಸರು ಗದ್ದೆಗಳಾಗುತ್ತಿವೆ. ಮಕ್ಕಳು ಆರೋಗ್ಯದ ಸಮಸ್ಯೆ ಎದುರಿಸುತ್ತಿದ್ದಾರೆ.

ಜೊತೆಗೆ ಮಳೆ ಹಾಗೂ ಹೇಮಾವತಿ ನೀರಿನಿಂದ ಭತ್ತಿ ಹೋಗಿದ್ದ ಕೊಳವೆ ಬಾವಿಯಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಮಳೆಯಿಂದ ಉಂಟಾದ ಸಮಸ್ಯೆಯ ಜೊತೆ ತಾಲೂಕಿ ನಲ್ಲಿ ಅಂತರ್ಜಲ ಮಟ್ಟ ವೃದ್ಧಿಯಾಗುತ್ತಿರುವುದು ರೈತರಿಗೆ ನೆಮ್ಮದಿಯ ವಿಷಯವಾಗಿದೆ.

ಕೊಳೆಯುತ್ತಿದೆ ಅಡಕೆ: ತಾಲೂಕಿನಲ್ಲಿ ಸತತ ಸೋನೆ ಮಳೆಯಿಂದ ಅಡಕೆ ಕೊಳೆಯುತ್ತಿದೆ. ಅಡಕೆ ಚೇಣಿ ಮಾಡಿಕೊಂಡವರು ಸಮಸ್ಯೆ ಅನುಭವಿಸುತ್ತಿದ್ದರೆ, ಮರ ದಲ್ಲಿದ್ದ ಅಡಕೆ ಕಿಳದೆ ಗೋಟು ಆಗುತ್ತಿದೆ. ಕಿತ್ತ ಅಡಕೆ ಸುಳಿಯದೆ ಬಿದ್ದಿವೆ, ಸುಳಿದು ಬೇಯಿಸಿದ ಅಡಕೆ ಬಿಸಿಲು ಇಲ್ಲದೆ ಕೊಳೆಯುತ್ತಿದೆ. ತಾಲೂಕಿನ ಬಹುತೇಕ ಭಾಗದಲ್ಲಿ ಈ ಸಮಸ್ಯೆ ಉಂಟಾಗುತ್ತಿದೆ. ಮಳೆ ಖುಷಿ ಜೊತೆ ನಷ್ಟವನ್ನುಂಟು ಮಾಡುತ್ತಿದ್ದು, ಬಹುತೇಕ ಭಾಗ ನಷ್ಟ ಅನುಭವಿಸುತ್ತಿರುವುದು ರೈತ ಆಗಿದ್ದಾನೆ. ನೆಲ ಕಚ್ಚಿದ ರಾಗಿ: ರಾಗಿ ತಾಲೂಕಿನ ಪ್ರಮುಖ ಬೆಳೆ.

ಈ ಬಾರಿ ಉತ್ತಮ ಫ‌ಸಲು ನಿರೀಕ್ಷೆಯಲ್ಲಿದ್ದ ರೈತರಿಗೆ ವಾಯುಬಾರ ಕುಸಿತದ ಏಟು ಬಲು ಜೋರಾಗಿ ಬಿದ್ದಿದೆ. ಎದೆಯ ಮಟ್ಟಕ್ಕೆ ಬೆಳೆದಿದ್ದ ರಾಗಿ ನೆಲ ಕಚ್ಚಿದೆ. ಮಳೆ ನೀರಿಗೆ ರಾಗಿ ತೆನೆ ಮೊಳಕೆ ಹೊಡೆಯುತ್ತಿದೆ. ಅಧಿಕ ದರಗಳ ನಡುವೆ ಬೆಳೆದ ರಾಗಿ ಸಂಪೂರ್ಣ ರೈತರ ಕೈಸೇರುವುದು ಅನುಮಾನವಾಗಿದೆ. ಇದನ್ನು ಬಳಸಿ ಕೊಳ್ಳುವ ಮಧ್ಯವರ್ತಿಗಳು ರಾಗಿಯ ಧರವನ್ನು ಸಮಯ ಕಾಯ್ದು ಏರಿಸುವುದರಲ್ಲಿ ಸಂಶಯವಿಲ್ಲವಾಗಿದೆ.

ಬೀದಿ ಬದಿ ವ್ಯಾಪಾರಿಗಳಿಗೂ ಕಷ್ಟ: ಮಳೆ ಬರು ವುದು, ಹೋಗುವುದು ಯಾವುದು ತಿಳಿಯುತ್ತಿಲ್ಲ, ಸೂರ್ಯನ ದರ್ಶನವಾಗಿ ಒಂದು ವಾರ ಕಳೆಯು ತ್ತಿದೆ. ಹಣ್ಣು, ಹೂ, ಎಲೆ, ತರಕಾರಿ ಹಾಗೂ ತಳ್ಳುವ ಗಾಡಿಯ ಹೋಟೆಲ್‌, ಪಾನಿಪುರಿ, ಕಬಾಬ್‌ ವ್ಯಾಪಾರಿಗಳು ಸೋನೆ ಮಳೆಯ ಆಟಕ್ಕೆ ಸುಸ್ತಾಗಿ ಹೋಗಿದ್ದಾರೆ. ಮಳೆ ಇಲ್ಲವೆಂದು ವ್ಯಾಪಾರ ಆರಂಭಿಸಿದರೆ, ಮಳೆ ಬಂದು ಮಾಡಿದ ತಿನಿಸುಗಳು ವ್ಯಾಪಾರವಿಲ್ಲದೆ ಉಳಿಯುತ್ತಿದೆ. ದುಬಾರಿ ದಿನಸಿ ಸಾಮಗ್ರಿಗಳ ಆರ್ಭಟದಲ್ಲಿ ಒಪ್ಪತ್ತಿನ ಊಟಕ್ಕಾಗಿ ದುಡಿಯುವ ಕೈಗಳು ನಷ್ಟ ಅನುಭವಿಸುತ್ತಿವೆ.

ಮುಂದಿನ ದಿನದಲ್ಲೂ ಮಳೆ ನಿರೀಕ್ಷೆ : ಚಿಕ್ಕನಾಯಕನ ಹಳ್ಳಿ ತಾಲೂಕಿನಲ್ಲಿ ಜಿಲ್ಲಾ ಕೃಷಿ ಹವಾಮಾನ ಘಟಕದಿಂದ ಮಳೆಯ ಮುನ್ಸೂಚನೆ ವಿವರವನ್ನು ಪ್ರಕಟಗೊಳಿಸಿದೆ. ಸೋಮವಾರ 29 ಮಿ.ಮೀ, ಮಂಗಳವಾರ 36.1 ಮಿ.ಮೀ, ಬುಧವಾರ 32.0 ಮಿ.ಮೀ ಮಳೆಯಾಗುವ ಸಾಧ್ಯತೆಯ ಬಗ್ಗೆ ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ.

“ಮಳೆಯಾಗುತ್ತಿರುವುದು ಖುಷಿಯ ವಿಚಾರ. ಅಡಕೆ ಕಟಾವಿಗೆ ಬಂದಿದೆ. ಆದರೆ, ಮಳೆಯಿಂದ ಕಟಾವಿಗೆ ತೊಂದರೆಯಾಗಿದೆ. ರಾಗಿ ಪೈರು ಹಾಳಾಗುತ್ತಿದೆ. ಎಲ್ಲಾ ಕಡೆಯಿಂದ ರೈತರು ತೊಂದರೆಪಡು ವಂತಾಗಿದೆ. ಸರ್ಕಾರ ಇದನ್ನು ಗಂಭಿರವಾಗಿ ಪರಿಗಣಿಸಿ, ರೈತರಿಗೆ ಸೂಕ್ತ ಅನುಕೂಲ ಮಾಡಿಕೊಡಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ.” – ರವೀಂದ್ರ.ಟಿ, ಅಧ್ಯಕ್ಷ, ತಾಲೂಕು ಬಿಜೆಪಿ

ರೈತ ಮೋರ್ಚಾ, ಚಿಕ್ಕನಾಯಕನಹಳ್ಳಿ

  • – ಚೇತನ್

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.