ರಮೇಶ್‌ಗೌಡ ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ


Team Udayavani, Apr 25, 2019, 4:48 PM IST

tumkur-5-tdy..

ತುಮಕೂರು: ಶ್ರೀಲಂಕಾದಲ್ಲಿ ಭಾನು ವಾರ ನಡೆದ ಬಾಂಬ್‌ ಸ್ಫೋಟದಲ್ಲಿ ತುಮಕೂರಿನ ಸ್ವರಸ್ಪತಿ ಪುರಂನ ಉದ್ಯಮಿ ಎಲ್.ರಮೇಶ್‌ಗೌಡ ರವರ ಪಾರ್ಥಿವ ಶರೀರ ನಗರದ ಅವರ ನಿವಾಸಕ್ಕೆ ತರುತ್ತಲೇ ಅವರ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ರಮೇಶ್‌ಗೌಡರ ಮೃತದೇಹ ಬುಧವಾರ ಸಂಜೆ ಅವರ ತುಮಕೂರಿನ ಸರಸ್ವತಿಪುರಂ ಮನೆಗೆ ಆಗಮಿಸಿತು. ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಗಮಿಸಿ, ರಮೇಶ್‌ಗೌಡ ಮೃತದೇಹವನ್ನು ಎಕ್ಸ್‌ಕಾರ್ಟ್‌ ಮೂಲಕ ನೆಲಮಂಗಲ ಮಾರ್ಗವಾಗಿ ತುಮಕೂರಿಗೆ ಸಂಜೆ 5-30ರ ವೇಳೆಗೆ ತಲುಪಿತು.ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಜಿಲ್ಲಾಡಳಿತ ವತಿಯಿಂದ ತಹಶೀಲ್ದಾರ್‌ ನಾಗರಾಜ್‌, ಶಿರ‌ಸ್ತೇದಾರ ಜಯ ಪ್ರಕಾಶ್‌, ಡಾ. ಎಸ್‌.ಶರತ್‌ಚಂದ್ರ ಅವರು ತುಮಕೂರು ಸರಸ್ವತಿ ಪುರಂ ನಲ್ಲಿರುವ ಅವರ ನಿವಾಸಕ್ಕೆ ತರಲಾಗಿತ್ತು. ತಾಯಿ ರತ್ನಮ್ಮ, ಪತ್ನಿ ಮಂಜುಳಾ, ಮಗಳು ದೀಕ್ಷಾ, ಮಗ ಶೋಭಿತ್‌, ಸಹೋದರ ಪ್ರಕಾಶ್‌ ಸೇರಿ ದಂತೆ ಅವರ ಕುಟುಂಬದವರು, ಸ್ನೇಹಿ ತರು ಸೇರಿದಂತೆ ಅವರ ಬಂಧುಗಳ ರೋದನೆ ಹೆಚ್ಚಾಗಿತ್ತು.

ದುಬೈಗೆ ಹೋಗುತ್ತೇನೆ ಅಮ್ಮ ..
ರಮೇಶ್‌ಗೌಡ ಲೋಕಸಭಾ ಚುನಾವಣೆ ಮುಗಿಸಿಕೊಂಡು ಪ್ರವಾಸ ಮಾಡಲು ಶ್ರೀಲಂಕಾಕ್ಕೆ ತೆರಳಿದಿದ್ದರು. ಆದರೆ, ಶ್ರೀಲಂಕಾದಲ್ಲಿ ಸಂತಸದಿಂದ ಪ್ರವಾಸ ಮಾಡುವ ಮೊದಲೇ ಭಯೋತ್ಪಾದಕರ ಬಾಂಬ್‌ ಸ್ಫೋಟಕ್ಕೆ ಬಲಿಯಾಗಿದ್ದಾರೆ. ರಾಜ್ಯದಿಂದ ಪ್ರವಾಸಕ್ಕೆ ತೆರಳಿದ 7 ಜನರಲ್ಲಿ ಸರಸ್ವತಿಪುರಂ ನಿವಾಸಿ ರಮೇಶ್‌ ಗೌಡ ಒಬ್ಬರಾಗಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್‌ಗೌಡರ ತಾಯಿ ರತ್ನಮ್ಮ, ತನ್ನ ಒಡಲ ನೋವನ್ನು ತೊಡಿಕೊಂಡು ನನ್ನ ಮಗನಿಗೆ ಇಬ್ಬರು ಮಕ್ಕಳು ಇಬ್ಬರು ಮಕ್ಕಳೂ ತಬ್ಬಲಿಯಾಗಿ ಬಿಟ್ಟರು ಎಂದು ಕಣ್ಣೀರು ಹಾಕಿದ್ದು ಎಂಥವರ ಮನ ಕಲಕುತ್ತಿತು. ದುಬೈಗೆ ಹೋಗುತ್ತೇನೆ ಅಮ್ಮ ಎಂದು ಹೇಳಿ ಶ್ರೀಲಂಕಾಗೆ ಹೋಗಿದ್ದಾನೆ. ಶನಿವಾರ 3ಗಂಟೆಗೆ ಮನೆ ಬಿಟ್ಟವನು, ಸಂಜೆ 7ಗಂಟೆಗೆ ಅಲ್ಲಿ ತಲುಪಿದ್ದ, ಅದು ಆದ ಮೇಲೆ ಒಮ್ಮೆಯೂ ಕರೆ ಮಾಡಲಿಲ್ಲ ಎಂದು ಕಣ್ಣೀರು ಹಾಕಿದರು.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌, ಸಚಿವ ಎಸ್‌.ಆರ್‌.ಶ್ರೀನಿವಾಸ್‌, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಶಾಸಕ ಜಿ.ಬಿ.ಜ್ಯೋತಿ ಗಣೇಶ್‌, ಸೇರಿದಂತೆ ಅಪರ ಬಂಧುಮಿತ್ರರು, ಸಾರ್ವಜನಿಕರು ಅವರ ಅಂತಿಮ ದರ್ಶನ ಪಡೆದರು. ಶ್ರೀಲಂಕಾದಲ್ಲಿ ನಡೆದ ಕೃತ್ಯ ಇಡೀ ವಿಶ್ವವೇ ಖಂಡಿಸುತ್ತಿದೆ. ಇಂಥ ಘಟನೆ ಎಲ್ಲಿಯೂ ನಡೆಯಬಾರದು. ವಿಧ್ವಂಸಕ ಕೃತ್ಯ ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು. ರಮೇಶ್‌ ಗೌಡ ಆತ್ಮಕ್ಕೆ ಶಾಂತಿ ಸಿಗಲಿಮ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದರು.

ತುಮಕೂರಿನ ಸರಸ್ವತಿ ಪುರಂನಿಂದ ಮೃತದೇಹವನ್ನು ಕುಣಿಗಲ್ನ ಅವರ ನಿವಾಸದಲ್ಲಿ ಸ್ವಲ್ಪ ಸಮಯ ಸಾರ್ವ ಜನಿಕರ ದರ್ಶನಕ್ಕಿಟ್ಟು ಅಲ್ಲಿಂದ ನಾಗಮಂಗಲ ತಾಲೂಕು ಬೆಳ್ಳೂರು ಹೋಬಳಿಯ ಅವರ ಸ್ವಗ್ರಾಮವಾದ ಬೆಟ್ಟದ ಕೋಟೆಯಲ್ಲಿ ಅಂತ್ಯಕ್ರಿಯೆ ಮೃತ ರಮೇಶ್‌ಗೌಡನ ತಂದೆಯ ಸಮಾಧಿ ಪಕ್ಕದಲ್ಲಿ ನೆರವೇರಿತು.

ಟಾಪ್ ನ್ಯೂಸ್

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.