ಕುಣಿಗಲ್: ಹೊಟ್ಟೆ ನೋವು ತಾಳಲಾರದೆ ವೃದ್ದ ಆತ್ಮಹತ್ಯೆ
Team Udayavani, Jun 2, 2022, 3:35 PM IST
ಕುಣಿಗಲ್: ಹೊಟ್ಟೆ ನೋವು ತಾಳಲಾರದೆ ವೃದ್ದ ವಿಷ ಸೇವಿಸಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕು ಹುಲಿಯೂರುದುರ್ಗ ಹೋಬಳಿ ಉಜ್ಜಿನಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಾಮಣ್ಣ (70) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಸುಮಾರು ಒಂದು ವರ್ಷದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ರಾಮಣ್ಣ ನಾಟಿ ಔಷಧಿ ತೆಗೆದುಕೊಳ್ಳುತ್ತಿದ್ದರು. ರಾಮಣ್ಣನ ಹೆಂಡತಿ ಪುಟ್ಟಲಿಂಗಮ್ಮ ಅವರು ಮದ್ದೂರು ತಾಲೂಕು ಕೊಪ್ಪ ಗ್ರಾಮದ ತಂಗಿಯ ಮನೆಗೆ ಹೋಗಿದ್ದರು. ಹೊಟ್ಟೆ ನೋವು ಹೆಚ್ಚಾದ ಕಾರಣ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದಾರೆ.
ತಕ್ಷಣ ರಾಮಣ್ಣನನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆದ್ಯೋಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ರಾಮಣ್ಣ ಮೃತಪಟ್ಟಿದ್ದಾರೆ. ಹುಲಿಯೂರು ದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.