ಪದವೀಧರರ ಮತದಾರರ ಪಟ್ಟಿಗೆ ನೋಂದಾಯಿಸಿ


Team Udayavani, Jan 5, 2020, 3:00 AM IST

padavidarara

ತುಮಕೂರು: ಪದವಿ ಹೊಂದಿರುವವರನ್ನು ಮತದಾರರ ಪಟ್ಟಿಗೆ ನೋಂದಣಿಗೆ ಕ್ರಮ ಕೈಗೊಳ್ಳಲು ವಿವಿಧ ಇಲಾಖಾ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2020, ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆಗೆ ಸಂಬಂಧಿಸಿ ಶನಿವಾರ ಸಭೆ ನಡೆಸಿ ಮಾತನಾಡಿ,

ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಮತಪಟ್ಟಿಗೆ ನೋಂದಣಿಯಾದವರ ಪ್ರಮಾಣ ಕಡಿಮೆಯಿದ್ದು, 2016ರ ಅಕ್ಟೋಬರ್‌ 31ಕ್ಕೂ ಮೊದಲು ಪದವಿ ಪೂರ್ಣಗೊಳಿಸಿದವರನ್ನು ತಪ್ಪದೇ ಮತಪಟ್ಟಿಗೆ ನೋಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು. ಅರ್ಹ ಪದವೀಧರ ಮತದಾರರು ನಿಗದಿತ ನಮೂನೆ 18 ಭರ್ತಿ ಮಾಡಿ ಪದವಿ ತೇರ್ಗಡೆ ಪ್ರಮಾಣ ಪತ್ರ ಹಾಗೂ ಭಾವಚಿತ್ರ ಸಲ್ಲಿಸುವ ಮೂಲಕ ಮತಪಟ್ಟಿಗೆ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.

ಎಲ್ಲಾ ರಾಜಕೀಯ ಪಕ್ಷದವರು, ಇಲಾಖಾ ಮುಖ್ಯಸ್ಥರು, ಖಾಸಗಿ ಉದ್ದಿಮೆಗಳ ಮಾಲೀಕರು, ಸರ್ಕಾರಿ, ಅರೆ ಸರ್ಕಾರಿ ಕಚೇರಿ ಅಧಿಕಾರಿಗಳು, ಖಾಸಗಿ ಸಂಸ್ಥೆಗಳು, ಇತರೆ ಸಾರ್ವಜನಿಕ ಉದ್ದಿಮೆಗಳ ಮುಖ್ಯಸ್ಥರು ಅಧೀನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಹ ಪದವೀಧರರನ್ನು ತಪ್ಪದೇ ಮತಪಟ್ಟಿಗೆ ನೋಂದಣಿಗೆ ಸೂಚಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಮತಪಟ್ಟಿ ಪ್ರಕಟ: ಚುನಾವಣಾ ಆಯೋಗದ ನಿರ್ದೇಶನದಂತೆ 2019 ನ.1ನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಿ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಮತಪಟ್ಟಿ ತಯಾರಿಸಲಾಗುವುದು. ಈಗಾಗಲೇ 2019ರ ಡಿ.7ರಂದು ಕರಡು ಮತದಾರರ ಪಟ್ಟಿ ಎಲ್ಲಾ ಮತಗಟ್ಟೆ, ಸಹಾಯಕ ಮತದಾರರ ನೋಂದಣಾಧಿಕಾರಿ, ಮತದಾರರ ನೋಂದಣಾಧಿಕಾರಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ಕರಡು ಮತ ಪಟ್ಟಿಯನುಸಾರ ಜಿಲ್ಲೆಯ ಪಾವಗಡ ತಾಲೂಕಿನಲ್ಲಿ 2191, ಮಧುಗಿರಿ-2137, ಶಿರಾ-3078, ಚಿಕ್ಕನಾಯಕನಹಳ್ಳಿ-1300, ತಿಪಟೂರು-1697, ತುರುವೇಕೆರೆ-1296, ಕುಣಿಗಲ್‌-1105, ಗುಬ್ಬಿ-1411, ತುಮಕೂರು ನಗರ-4981, ತುಮಕೂರು ಗ್ರಾಮಾಂತರ-1626 ಹಾಗೂ ಕೊರಟಗೆರೆ-1250 ಸೇರಿ ಒಟ್ಟು 22072 ಪದವೀಧರ ಮತದಾರರು ಮತಪಟ್ಟಿಗೆ ನೋಂದಾಯಿಸಿಕೊಂಡಿದ್ದಾರೆ ಎಂದರು.

ಮಿಂಚಿನ ನೋಂದಣಿ ಕಾರ್ಯಕ್ರಮದಡಿ ಸಂಬಂಧಿಸಿದ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ನಿಗಧಿತ ದಿನಾಂಕಗಳಂದು ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ಹಾಜರಿದ್ದು, ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಿದ್ದಾರೆ. ಸ್ವೀಕೃತವಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇಪಡಿಸಿ ಫೆ. 7 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಮಿಂಚಿನ ನೋಂದಣಿ ಅವಧಿಯಲ್ಲಿ 18 ರಿಂದ 19 ವರ್ಷ ವಯಸ್ಸಿನವರು ನಮೂನೆ 6 ಹಾಗೂ ಅರ್ಹ ಪದವೀಧರರು ನಮೂನೆ-18ರಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಮತಪಟ್ಟಿಗೆ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಎಲ್ಲಾ ಅಧಿಕಾರಿಗಳಿಗೆ ನಮೂನೆ-18 ವಿತರಿಸಲಾಯಿತು. ಭಾರತ್‌ ಕಮ್ಯೂನಿಸ್ಟ್‌ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗಿರೀಶ್‌, ಭಾರತ್‌ ಕಮ್ಯೂನಿಸ್ಟ್‌ ಪಕ್ಷ(ಮಾರ್ಕ್ಸ್ವಾದಿ)ದ ಜಿಲ್ಲಾ ಕಾರ್ಯದರ್ಶಿ ಉಮೇಶ್‌, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ, ಚುನಾವಣಾ ತಹಶೀಲ್ದಾರ್‌ ನಾಗಭೂಷಣ್‌, ಲೀಡ್‌ಬ್ಯಾಂಕ್‌ ಮ್ಯಾನೇಜರ್‌ ಜ್ಯೋತಿಗಣೇಶ್‌, ಡಿಡಿಪಿಐ ಎಂ.ಆರ್‌. ಕಾಮಾಕ್ಷಿ, ಜಿಲ್ಲಾ ನೋಂದಣಾಧಿಕಾರಿ ಎಂ. ಶ್ರೀದೇವಿ ಮತ್ತಿತರರಿದ್ದರು.

ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2020: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2020 ಜ.1ನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2020 ಕಾರ್ಯ ಪ್ರಗತಿಯಲ್ಲಿದ್ದು, ಈಗಾಗಲೇ 2019ರ ಡಿ. 16ರಂದು ಕರಡು ಮತದಾರರ ಪಟ್ಟಿ ಎಲ್ಲಾ ಮತಗಟ್ಟೆ, ಸಹಾಯಕ ಮತದಾರರ ನೋಂದಣಾಧಿಕಾರಿ, ಮತದಾರರ ನೋಂದಣಾಧಿಕಾರಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಈ ಕರಡು ಮತದಾರರ ಪಟ್ಟಿ ಅನ್ವಯ ಜಿಲ್ಲೆಯಲ್ಲಿ 1104451 ಪುರುಷ ಮತ್ತು 1093094 ಮಹಿಳೆಯರು ಸೇರಿ ಒಟ್ಟು 2197545 ಮತದಾರರು ನೋಂದಣಿಯಾಗಿರುತ್ತಾರೆ. ಕರಡು ಮತ ಪಟ್ಟಿಗೆ ಸಂಬಂಧಿಸಿ ಜ. 15ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು ಎಡಿಸಿ ಕೆ.ಚನ್ನಬಸಪ್ಪ ತಿಳಿಸಿದರು.

ಜ.6ರಿಂದ ಮಿಂಚಿನ ನೋಂದಣಿ: ಜಿಲ್ಲೆಯಲ್ಲಿ 18 ರಿಂದ 19 ವರ್ಷ ವಯಸ್ಸಿನ ಮತದಾರರ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸುವ ಸಲುವಾಗಿ ಜ. 6ರಿಂದ 8ರವರೆಗೆ ಎಲ್ಲಾ ಮತಗಟ್ಟೆ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ, ಶಿಕ್ಷಣ ಸಂಸ್ಥೆ, ಪ್ರಮುಖ ಸ್ಥಳಗಳಲ್ಲಿ ಮಿಂಚಿನ ನೋಂದಣಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಕೂಡಲೇ ಮತಗಟ್ಟೆ ಮಟ್ಟದ ಏಜೆಂಟರುಗಳನ್ನು ಎಲ್ಲಾ ಮತಗಟ್ಟೆಗಳಿಗೆ ನೇಮಿಸಲು ಕ್ರಮ ವಹಿಸಬೇಕೆಂದು ಎಡಿಸಿ ಕೆ.ಚನ್ನಬಸಪ್ಪ ಸೂಚಿಸಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.