ಪ್ಯಾಸೆಂಜರ್‌ ರೈಲು ಸಂಚಾರಕ್ಕೆ ಮನವಿ


Team Udayavani, Jan 8, 2019, 11:42 AM IST

tmk-1.jpg

ತುಮಕೂರು: ಬೆಂಗಳೂರಿನಿಂದ ತುಮಕೂರಿಗೆ ರಾತ್ರಿ 8 ಗಂಟೆಗೆ ಒಂದು ಪ್ಯಾಸೆಂಜರ್‌ ರೈಲು ಸಂಚಾರಕ್ಕೆ ಅನುವಾಗುವಂತೆ ರೈಲ್ವೆ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತುಮಕೂರು ಸಂಸದ ಎಸ್‌.ಪಿ.ಮುದ್ದ ಹನುಮೇಗೌಡ ಅವರನ್ನು ರೈಲ್ವೆ ಪ್ರಯಾಣಿಕರ ವೇದಿಕೆ ಮನವಿ ಮಾಡಿದೆ. 

ಸಂಸದರ ಹೆಬ್ಬೂರು ನಿವಾಸದಲ್ಲಿ ಭೇಟಿ ಮಾಡಿದ ತುಮಕೂರು-ಬೆಂಗಳೂರು ರೈಲ್ವೆ ಪ್ರಯಾಣಿಕರ ವೇದಿಕೆ ಪದಾಧಿಕಾರಿಗಳು ರಾತ್ರಿ ರೈಲು ಆರಂಭದಿಂದ ತುಮಕೂರಿನ ಪ್ರಯಾಣಿಕರಿಗಷ್ಟೇ ಅಲ್ಲದೇ, ಬೆಂಗಳೂರು-ತುಮಕೂರು ನಡುವಿನ ಗ್ರಾಮಗಳ ಸಾವಿರಾರು ಜನರಿಗೆ ಅನುಕೂಲವಾಗ ಲಿದೆ ಎಂದು ಮನವರಿಕೆ ಮಾಡಿಕೊಟ್ಟರು. 

ಎಲ್ಲರಿಗೂ ಅನುಕೂಲ: ಸಂಜೆ 6.20 ರ ನಂತರ ಬೆಂಗಳೂರಿನಿಂದ ತುಮಕೂರಿಗೆ ಇರುವ ಪ್ಯಾಸೆಂಜರ್‌ ರೈಲು ಬಿಟ್ಟರೆ ಮತ್ತೆ ರಾತ್ರಿ 11 ಗಂಟೆ ಯವರೆಗೆ ಪ್ಯಾಸೆಂಜರ್‌ ರೈಲಿನ ಅನುಕೂಲವಿಲ್ಲ. ಇದರಿಂದ ಸಾವಿರಾರು ಪ್ರಯಾಣಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ರಾತ್ರಿ ರೈಲು ಆರಂಭದಿಂದ ಎಲ್ಲರಿಗೂ ಅನುಕೂಲವಾಗಲಿದೆ ಎಂದು ವಿವರಿಸಿದರು. 

ಮನವಿ: ಬೆಂಗಳೂರಿಗೆ ಅತ್ಯಂತ ಸಮೀಪವಿರುವ ಮತ್ತು ವಾಣಿಜ್ಯ ವಹಿವಾಟು ನಗರವಾಗಿರುವ ತುಮಕೂರಿಗೆ ಉಪನಗರ ರೈಲು ಯೋಜನೆಯನ್ನು ಎರಡನೇ ಹಂತಕ್ಕೆ ನಿಗದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಮೊದಲ ಹಂತದಲ್ಲೇ ತುಮಕೂರು ನಗರವನ್ನು ಸೇರಿಸಲು ಒತ್ತಾಯಿಸಬೇಕೆಂದು ಮನವಿ ಮಾಡಿದರು.
 
ಲಿಫ್ಟ್ ಅಳವಡಿಕೆಗೆ ಯೋಜನೆ: ತುಮಕೂರು ರೈಲು ನಿಲ್ದಾಣದಲ್ಲಿ ಪಾದಚಾರಿ ಮೇಲ್ಸೇತುವೆ ಇದ್ದು, ಇದಕ್ಕೆ ರ್‍ಯಾಂಪ್‌ ಅಳವಡಿಸದೇ ನಿರ್ಲಕ್ಷಿಸಲಾಗಿದೆ. ಇದರಿಂದ ತೀವ್ರ ತೊಂದರೆಯಾಗಿದೆ.  ಪ್ರಸ್ತುತರ್‍ಯಾಂಪ್‌ ಅಳ ವಡಿಸಲು ಅವಕಾಶವಿಲ್ಲದಿ ರುವುದರಿಂದ ಎರಡು ಮತ್ತು 3-4ನೇ ಪ್ಲಾಟ್‌ ಫಾರಂಗಳಲ್ಲಿ ಲಿಫ್ಟ್ ಅಳವಡಿಕೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಸ್ಥೆಗಳು, ಸಾಮಾಜಿಕ ಕಾಳಜಿಯ ಸಂಘಟನೆಗಳ ಹಾಗೂ ಜನಪ್ರತಿನಿಧಿಗಳ ದೇಣಿಗೆಯಿಂದ ಲಿಫ್ಟ್ ಅಳವಡಿಸಲು ವೇದಿಕೆ ಯೋಜನೆ ರೂಪಿಸುತ್ತಿದೆ. ಇದಕ್ಕೆ ಸಂಸದರ ನಿಧಿಯಿಂದ ಆರಂಭಿಕ ಕೊಡುಗೆ ನೀಡಬೇಕೆಂದು ಮನವಿ ಮಾಡಲಾಯಿತು.

ಭರವಸೆ: ವೇದಿಕೆಯ ಎಲ್ಲ ಬೇಡಿಕೆಗಳನ್ನು ಆಲಿಸಿದ ಸಂಸದ ಮುದ್ದಹನುಮೇಗೌಡ ಅವರು ಸಂಸತ್‌ ಅಧಿವೇಶನದ ನಂತರ ಎಲ್ಲ ಬೇಡಿಕೆಗಳ ಈಡೇರಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ವೇಳೆ ವೇದಿಕೆ ಕಾರ್ಯದರ್ಶಿ ಕರಣಂ ರಮೇಶ್‌, ಹಿರಿಯ ಉಪಾಧ್ಯಕ್ಷರಾದ ಪರಮೇಶ್ವರ್‌, ಖಜಾಂಚಿ ಆರ್‌.ಬಾಲಾಜಿ ಹಾಗೂ ನಿರ್ದೇಶಕರಾದ ಸಿ.ನಾಗರಾಜ್‌ ಮತ್ತು ಎಚ್‌.ಆರ್‌.ರಘು ಇದ್ದರು. 

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.