ಮಾರ್ಕೋನಹಳ್ಳಿ ಜಲಾಶಯಕ್ಕೆ ಪ್ರವಾಸಿಗರ ನಿರ್ಬಂಧ
Team Udayavani, Aug 5, 2022, 7:45 PM IST
ಕುಣಿಗಲ್: ಕುಣಿಗಲ್ ತಾಲೂಕು ಹಾಗೂ ತುರುವೇಕೆರೆ ತಾಲೂಕಿನಾದ್ಯಂತ ಹೆಚ್ಚು ಮಳೆಯಾಗುತ್ತಿದ್ದು ಮಾರ್ಕೋನಹಳ್ಳಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಜಲಾಶಯಕ್ಕೆ ಪ್ರವಾಸಿಗ ವಿಕ್ಷಣೆಯನ್ನು ಜಿಲ್ಲಾಧಿಕಾರಿಗಳ ಅದೇಶದ ಅನ್ವಯ ನಿರ್ಬಧಿಸಲಾಗಿದೆ ಎಂದು ತಹಶೀಲ್ದಾರ್ ಮಹಬಲೇಶ್ವರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯಕ್ಕೆ ನೀರಿನ ಒಳ ಹಿರಿವು ಹೆಚ್ಚಾಗಿರುತ್ತದೆ. ಜಲಾಶಯದ ಕೆಳ ಭಾಗದ ನದಿ ಪಾತ್ರಕ್ಕೆ ಹೆಚ್ಚಾಗಿ ನೀರು ಬಿಟ್ಟಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಮಾರ್ಕೋನಹಳ್ಳಿ ಜಲಾಶಯಕ್ಕೆ ಪ್ರವಾಸಿಗರಿಗೆ ಜಲಾಶಯ ವೀಕ್ಷಣೆಯನ್ನು ನಿರ್ಬಂಧಿಸಲಾಗಿದೆ ಹಾಗೂ ಜಲಾಶಯದ ಗೇಟಿನ ಮುಂಭಾಗ ವಾಹನ ನಿಲುಗಡೆಯನ್ನು ರದ್ದುಗೊಳಿಸಲಾಗಿದೆ. ಹಾಗಾಗಿ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನದ ಇಮ್ರಾನ್ ಖಾನ್ ಪಕ್ಷಕ್ಕೆ ದೇಣಿಗೆ ನೀಡಿದ ರೊಮಿತಾ ಶೆಟ್ಟಿ!;ಯಾರಿವರು?