ರಸ್ತೆ ಅಪಘಾತ: 7 ಮಂದಿ ದುರ್ಮರಣ
Team Udayavani, May 22, 2018, 7:00 AM IST
ಶಿರಾ(ತುಮಕೂರು): ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಜನ ಮೃತಪಟ್ಟು, ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮೃತರನ್ನು ಅನುಷಾ(7), ಸವಿತಾ(21), ರತ್ನಮ್ಮ(38) , ಸುಮಲತಾ(21), ಗಿರಿಜಮ್ಮ ಪಟ್ಟನಾಯಕನಹಳ್ಳಿಗೆ ಸೇರಿದವರಾಗಿದ್ದಾರೆ. ಶಂಕರ(35), ಅಶ್ವತ್ಥನಾರಾಯಣ (40) ಇಲ್ಲಿನ ಜ್ಯೋತಿನಗರ ವಾಸಿಗಳು ಎಂದು ಗುರುತಿಸಲಾಗಿದೆ.
ತಾಲೂಕಿನ ವಿವಿಧ ಭಾಗಗಳಿಂದ ಸಿಗಂದೂರು ಪ್ರವಾಸಕ್ಕೆಂದು ಖಾಸಗಿ ಬಸ್ನಲ್ಲಿ ತೆರಳಿದ್ದ ಸುಮಾರು 55 ಜನರಿದ್ದ ತಂಡ ಪ್ರವಾಸ ಮುಗಿಸಿ ಇನ್ನೇನು ಶಿರಾ ತಲುಪುವ ವೇಳೆ ಅಪಘಾತ ಸಂಭವಿಸಿದೆ. ಶನಿವಾರ ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ತೆರಳಿದ್ದ ತಂಡ ವಾಪಸ್ ಬರುವಾಗ ಶಿರಾ ಹೊರವಲಯದ ಡಾಬಾ ಒಂದರ ಬಳಿ ನಿಲ್ಲಿಸಿದ್ದ ಮೆಕ್ಕೆಜೋಳ ತುಂಬಿದ್ದ ಲಾರಿಯೊಂದಕ್ಕೆ ದುರ್ದೈವಿಗಳಿದ್ದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆ ನಂತರ ಬಸ್ ಚಾಲಕ ನಾಪತ್ತೆಯಾಗಿದ್ದಾನೆ. ರಸ್ತೆ ಬದಿ ನಿಲ್ಲಿಸಿದ್ದ ಲಾರಿ ಇಂಡಿಕೇಟರ್ ಹಾಕದೇ ಇದ್ದದ್ದೇ ಘಟನೆಗೆ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್