ಮಾದರಿ ಕ್ಷೇತ್ರ ನಿರ್ಮಾಣ ಗುರಿ


Team Udayavani, Sep 27, 2022, 5:13 PM IST

ಮಾದರಿ ಕ್ಷೇತ್ರ ನಿರ್ಮಾಣ ಗುರಿ

ತುಮಕೂರು: ಕಳೆದ 20 ವರ್ಷಗಳಿಂದ ಯಾವುದೇ ರೀತಿಯ ಅಭಿವೃದ್ಧಿ ಕಾಣದೆ ನನೆ ಗುದಿಗೆ ಬಿದ್ದಿದ್ದ ಅನೇಕ ರಸ್ತೆಗಳ ಅಭಿವೃದ್ಧಿಗೆ ಪ್ರಸ್ತುತ ಆದ್ಯತೆ ನೀಡಲಾಗಿದ್ದು, ಮುಂದೆಯೂ ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿಯಾಗಿದ್ದು, ತುಮಕೂರು ಗ್ರಾಮಾಂತರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ ಎಂದು ಶಾಸಕ ಡಿ.ಸಿ. ಗೌರಿಶಂಕರ್‌ ತಿಳಿಸಿದರು.

ಋಣ ತೀರಿಸುವ ಕೆಲಸ: 13 ಕೋಟಿ ರೂ. ವೆಚ್ಚದಲ್ಲಿ ಗ್ರಾಮಾಂತರ ಕ್ಷೇತ್ರದ ಬಸವಣ್ಣನ ಗುಡಿ ಸರ್ಕಲ್‌ನಿಂದ ಹಾದು ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತ ನಾಡಿದ ಅವರು, ಜನರ ಮೂಲಭೂತ ಸೌಲಭ್ಯ ಕಲ್ಪಿಸುವುದೇ ನನ್ನ ಆದ್ಯತೆಯಾಗಿದೆ. ಮತದಾರ ಪ್ರಭುಗಳ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.

13 ಕೋಟಿ ರೂ. ವೆಚ್ಚ: ಬಸವಣ್ಣನ ಗುಡಿ ಸರ್ಕಲ್‌ನಿಂದ ಕೌತಮಾರನಹಳ್ಳಿ, ದಿಣ್ಣೆಪಾಳ್ಯ, ಕೊಟ್ಟಿಗೆ ಗೊಲ್ಲಹಳ್ಳಿ, ದೊಡ್ಡೆ ಗೌಡನಪಾಳ್ಯ, ಆದಿಶಕ್ತಿ ಕೆಂಪಮ್ಮನ ದೇವಾಲಯ, ಗುಣಿ ಗೊಲ್ಲಹಳ್ಳಿ, ಐನಾಪೂರ, ನೇರಳಾಪುರ ಗ್ರಾಮದ ಮೂಲಕ ಹಾದು ಹೋಗಿ ಸಾಸಲು ಗ್ರಾಮ ಸಂಪರ್ಕಿಸುವ ರಸ್ತೆ ಹದಗೆಟ್ಟಿದ್ದು, ಈ ಭಾಗದಲ್ಲಿ ಜನರು ಓಡಾಡಲು ಸಾಧ್ಯವಿಲ್ಲದ ಸ್ಥಿತಿ ಇತ್ತು. ಕಳೆದ 20 ವರ್ಷಗಳಿಂದ ಈ ರಸ್ತೆ ಅಭಿವೃದ್ಧಿಪಡಿಸಬೇಕು ಎನ್ನುವ ಬೇಡಿಕೆ ಯಿತ್ತು. ಜನರ ಭಾವನೆಗಳಿಗೆ ಸ್ಪಂದಿಸಿ 13 ಕೋಟಿ ರೂ. ವೆಚ್ಚದಲ್ಲಿ ಈ ರಸ್ತೆ ಡಾಂಬರೀ ಕರಣ ಮಾಡುವ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ನುಡಿದರು. ಈ ರಸ್ತೆ ಅಭಿವೃದ್ಧಿಯಿಂದಾಗಿ ಸಾವಿರಾರು ರೈತರಿಗೆ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನುಕೂಲವಾಗಿದ್ದು, ಈ ರಸ್ತೆಯನ್ನು 13 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುತ್ತಿರುವುದು ಹರ್ಷ ತಂದಿದೆ ಎಂದರು.

ಗ್ರಾಮಸ್ಥರಿಂದ ಅಭಿನಂದನೆ: ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿಪಡಿಸಲು ಒತ್ತು ನೀಡಿರುವ ಶಾಸಕ ಡಿ.ಸಿ.ಗೌರಿಶಂಕರ್‌ ಅವರಿಗೆ ಗ್ರಾಮಸ್ಥರು, ವಿದ್ಯಾರ್ಥಿಗಳು ಅಭಿನಂದಿಸಿದರು. ಜನರ ಸಮಸ್ಯೆ ಆಲಿಸಿದ ಶಾಸಕರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಡಿ.ಸಿ.ಗೌರಿಶಂಕರ್‌ ಅವರು ಸಾರ್ವ ಜನಿಕರ ಕುಂದುಕೊರತೆ ಆಲಿಸಿ, ಸ್ಥಳದಲ್ಲಿ ಸೂಕ್ತ ಪರಿಹಾರ ಒದಗಿಸಿದರು.

ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್‌ ಅಧ್ಯಕ್ಷರಾದ ರಾಮಚಂದ್ರಪ್ಪ, ಗೂಳೂರು ಜಿಲ್ಲಾ ಪಂಚಾಯತ್‌ ಉಸ್ತುವಾರಿಗಳಾದ ಪಾಲನೇತ್ರಯ್ಯ, ತಾಲೂಕು ಪಂಚಾಯತ್‌ ಮಾಜಿ ಸದಸ್ಯರಾದ ಗೋವಿಂದರಾಜು, ಮಸ್ಕಲ್‌ ಗ್ರಾಪಂ ಮಾಜಿ ಅಧ್ಯಕ್ಷರಾದ ರೂಪಾ, ಮೋಹನ್‌ ಕುಮಾರ್‌, ಗ್ರಾಪಂ ಸದಸ್ಯರು ಗಳಾದ ಪವಿತ್ರ ಶಿವಪ್ರಸಾದ್‌, ಲೋಕೇಶ್‌, ಹೇಮಂತ್‌, ವೆಂಕಟೇಶ್‌, ಮುಖಂಡರುಗಳಾದ ನಾಗರಾಜು, ಬಸವ ರಾಜು, ಶಿವಣ್ಣ, ನಾಗಣ್ಣ, ರವಿಕಿರಣ್, ಕುಶಾಲ್ ಗೋಪಾಲ್ ಹಾಗೂ ನೂರಾರು ಕಾರ್ಯಕರ್ತರು ಮತ್ತು ಗ್ರಾಮಸ್ಥರು ಹಾಜರಿದ್ದರು.

ಗ್ರಾಮಾಂತರ ಕ್ಷೇತ್ರದ ಜನರ ಭಾವನೆಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿದ್ದೇನೆ. ನನ್ನ ಈ ಅವಧಿಯಲ್ಲಿ ನಿರೀಕ್ಷೆಗೂ ಮೀರಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ನಿಮ್ಮ ಮನೆಯ ಮಗನಾಗಿ ಕೆಲಸ ಮಾಡುತ್ತಿದ್ದೇನೆ. ಡಿ.ಸಿ.ಗೌರಿಶಂಕರ್‌, ಶಾಸಕ

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.