![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಪಟ್ಟನಾಯಕನಹಳ್ಳಿ ಬಸ್ ನಿಲ್ದಾಣದ ರಸ್ತೆ ಅವ್ಯವಸ್ಥೆ
Team Udayavani, Dec 28, 2019, 4:17 PM IST
![tk-tdy-1](https://www.udayavani.com/wp-content/uploads/2019/12/tk-tdy-1-13-620x342.jpg)
ಶಿರಾ: ತಾಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದ ಬಸ್ ನಿಲ್ದಾಣದ ರಸ್ತೆ ಅಭಿವೃದ್ಧಿ ಕಾಮಗಾರಿ ಅನುಮೋದನೆಯಾಗಿ ಒಂದು ವರ್ಷ ಕಳೆದರೂ ನನೆಗುದಿಗೆ ಬಿದ್ದಿದೆ.
ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನ ಮಠಕ್ಕೆ ಬರುವ ಭಕ್ತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ 11 ಕೋಟಿ ಮತ್ತು 8 ಕೋಟಿ ಪ್ರತ್ಯೇಕ ಕಾಮಗಾರಿಗೆ ಮಂಜೂರಾತಿ ನೀಡಿತ್ತು. ಆದರೆ ವರ್ಷ ಕಳೆದರೂ ರಸ್ತೆ ಕಾಮಗಾರಿ ನಡೆದಿಲ್ಲ. ಬಾಕ್ಸ್ ಚರಂಡಿ ನಿರ್ಮಿಸಿ ಹಳೆಯ ಡಾಂಬರ್ ರಸ್ತೆ ಹಾಳು ಮಾಡಲಾಗಿದೆ. ಇದರಿಂದ ಸ್ಥಳೀಯರು ದೂಳಿನ ಸಮಸ್ಯೆ ಅನುಭವಿಸಬೇಕಾಗಿದೆ.
ಕಾಣೆಯಾದ ಗುತ್ತಿಗೆದಾರ: 2018ರಲ್ಲಿ ಪಟ್ಟನಾಯಕನಹಳ್ಳಿ ಬಸ್ ನಿಲ್ದಾಣದ 150 ಮೀಟರ್ ರಸ್ತೆ ಕಾಮಗಾರಿಗೆ 1 ಕೋಟಿ ರೂ. ಮಂಜೂರಾಗಿತ್ತು. ಅದರಂತೆ ಕಾಮಗಾರಿ ಆರಂಭಿಸಿದ ಗುತ್ತಿಗೆದಾರ ಹಳೆ ರಸ್ತೆ ತೆಗೆದು ರಸ್ತೆಯ ಅಕ್ಕ ಪಕ್ಕ ಬಾಕ್ಸ್ ಚರಂಡಿ ಕಾಮಗಾರಿ ಮುಗಿಸಿ ಹಿಂದೆ ಇದ್ದ ಡಾಂಬರ್ ರಸ್ತೆ ಕಿತ್ತು ಹಾಕಿಸಿದ್ದಾನೆ. ಶೀಘ್ರ ಡಾಂಬರಿಕರಣ ಕಾಮಗಾರಿ ಮುಗಿಸುತ್ತೇವೆ ಎಂದು ಹೇಳಿ ಹೋದ ಗುತ್ತಿಗೆದಾರ ವರ್ಷ ಕಳೆದರೂ ಇತ್ತ ಸುಳಿದಿಲ್ಲ. ಇದೀದ ರಸ್ತೆ ಸಂಪೂರ್ಣ ಮಣ್ಣಿನ ರಸ್ತೆಯಾಗಿದ್ದು, ವಾಹನಗಳು ಸಂಚರಿಸಿದರೆ ದೂಳಿನ ಅಭಿಷೇಕವಾಗುತ್ತದೆ. ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು, ಅಸ್ಪತ್ರೆಗೆ ಬರುವಂತ ವೃದ್ಧರು, ಪ್ರಯಾಣಿಕರು ನರಕಯಾತನೆ ಅನುಭವಿಸುವಂತಾಗಿದೆ.
2019ರ ನವೆಂಬರ್ನಲ್ಲಿ ಪಟ್ಟನಾಯಕನಹಳ್ಳಿಯಿಂದ ಉದ್ದರಾಮನಹಳ್ಳಿ ಕ್ರಾಸ್ವರೆಗೆ 8 ಕೋಟಿ ರೂ. ವೆಚ್ಚದ ಕಾಮಗಾರಿಯೂ ಕಳಪೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ. ಇಷ್ಟಾದರೂ ನಿರ್ಲಕ್ಷ್ಯ ವಹಿಸಿರುವ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಡೆ ಸಾರ್ವಜನಿಕರ ಅನುಮಾನಗಳಿಗೆ ಕಾರಣವಾಗಿದೆ. ತಕ್ಷಣ ಬಸ್ ನಿಲ್ದಾಣ ರಸ್ತೆಗೆ ಡಾಂಬರೀಕರಣ ಮಾಡುವ ಮೂಲಕ ದೂಳಿನಿಂದ ರಕ್ಷಿಸುವಂತೆ ಸಾರ್ವಜನಿಕರು ಅಗ್ರಹಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.