ಪಾವಗಡದಲ್ಲಿ ಪ್ರತ್ಯೇಕ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ
Team Udayavani, Oct 5, 2022, 1:22 PM IST
ಪಾವಗಡ : ದಸರಾ ಹಬ್ಬದ ಅಯುಧ ಪೂಜಾ ದಿನಾ ಮಂಗಳವಾರ ರಾತ್ರಿ ಪಾವಗಡ ಪಟ್ಟಣ ಸಮೀಪ ಮೂರು ಅಪಘಾತಗಳು ನಡೆದಿದ್ದು ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಮೃತ ಪಟ್ಟಿದ್ದು 4 ಜನರಿಗೆ ತೀವ್ರತರಹ ಗಾಯಗಳಾಗಿದ್ದು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ತುಮಕೂರು ಹಾಗೂ ಬೆಂಗಳೂರಿಗೆ ರವಾನಿಸಿಲಾಗಿದೆ.
ಘಟನೆ ಒಂದು : ಪಟ್ಟಣದ ಶಿರಾ ರಸ್ತೆಯಲ್ಲಿಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಕನ್ನಮೇಡಿಯ 37 ವರ್ಷದ ರವಿ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದು , ಹಿಂಬದಿ ಸವಾರ ಮಲ್ಲಕಾರ್ಜುನ್ ಮತ್ತು ಮತ್ತೊಂದು ಬೈಕ್ ನಲ್ಲಿದ್ದ ಕೃಷ್ಣಗಿರಿ ಆಲದಮರದಹಟ್ಟಿಯ ಶಿವಲಿಂಗ ಮತ್ತು ಗಂಗಮ್ಮ ಎಂಬುವವರಿಗೆ ಗಾಯಗಳಾಗಿದ್ದು ಅವರನ್ನು ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.
ಘಟನೆ ಎರಡು : ಕುರುಬರ ಹಳ್ಳಿ ಗೇಟ್ ಬಳಿ ನಡೆದುಕೊಂಡು ಹೋಗುತ್ತಿದ್ದಗಂಗಸಾಗರದ ನಲ್ಲಪ್ಪ ಎನ್ನುವವರಿಗೆ ಅಪರಿಚಿತ ಬೈಕ್ ಗುದ್ದಿ ಪರಾರಿಯಾಗಿದ್ದು ನಲ್ಲಪ್ಪ ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ರವಾನಿಸಲಾಗಿದೆ.
ಘಟನೆ ಮೂರು : ತುಮಕೂರು ರಸ್ತೆಯ ಮಾರ್ಗದ ಕಣೀವೇನಹಳ್ಳಿ ಗೇಟ್ ಬಳಿ ಬೈಕ್ ಗೆ ಅಪರಿಚಿತ ಕಾರೊಂದು ಗುದ್ದಿ ಪರಾರಿಯಾಗಿದ್ದು, ಸ್ಥಳದಲ್ಲಿ ಮಡಕಶಿರಾ ತಾಲ್ಲೂಕಿನ ಶಿವಾಪುರದ 36 ವರ್ಷದ ಈರಲಿಂಗಪ್ಪ ಎನ್ನುವರು ಸ್ಥಳದಲ್ಲೇ ಮೃತ ಪಟ್ಟಿದ್ದು, ರಮೇಶ್ ಎನ್ನುವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,
ಪಾವಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ : ಆಸ್ಪತ್ರೆಯ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ: ವೈದ್ಯ ಸೇರಿ ಇಬ್ಬರು ಮಕ್ಕಳು ಬೆಂಕಿಗಾಹುತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ