ತುಮಕೂರು: ಪ್ರತ್ಯೇಕ ಅಪಘಾತದಲ್ಲಿ 6 ಮಂದಿ ಸಾವು
Team Udayavani, Nov 27, 2022, 11:53 PM IST
ತುಮಕೂರು: ಜಿಲ್ಲೆಯ ಕುಣಿಗಲ್ ಹಾಗೂ ಶಿರಾ ತಾಲೂಕಿನ ವಿವಿಧೆಡೆ ನಡೆದ 4 ಪ್ರತ್ಯೇಕ ಅಪಘಾತಗಳಲ್ಲಿ 6 ಮಂದಿ ಮೃತಪಟ್ಟು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ರವಿವಾರ ಸಂಭವಿಸಿದೆ.
ಶಿರಾ ನಗರದ ಮಧುಗಿರಿ ರಸ್ತೆಯ ಮಾಗೋಡು ಗೇಟ್ ಬಳಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಢಿಕ್ಕಿ ಹೊಡೆದು ಅರೇಹಳ್ಳಿ ಗ್ರಾಮದ ರಾಕೇಶ್ (22) ಹಾಗೂ ಗುಳಿಗೇನಹಳ್ಳಿ ಗ್ರಾಮದ ವಾಸಿ ನಾಗರಾಜು (21) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿರಾ ತಾಲೂಕು ಕಳ್ಳಂಬೆಳ್ಳ ಸಮೀಪದ ಬಾಲೇನಹಳ್ಳಿ ಗೇಟ್ ಬಳಿ ರಸ್ತೆ ದಾಟುತ್ತಿದ್ದ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಹಾಳೆಕೊಪ್ಪ ಗ್ರಾಮದ ಫಕೀರಯ್ಯರ ಪತ್ನಿ ಮಾಯಮ್ಮ (35) ಅವರಿಗೆ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕುಣಿಗಲ್ ತಾಲೂಕಿನ ಅಂಚೇಪಾಳ್ಯ ರಾಷ್ಟ್ರೀಯ ಹೆದ್ದಾರಿ 75ರ ಬಿ.ಎಂ. ರಸ್ತೆ ಬಳಿ ಹಂಪ್ಸ್ ಗಮನಿಸದೆ ಸಾಗಿದ ಕಾರೊಂದು ಪಲ್ಟಿಯಾಗಿ ಬೆಂಗಳೂರಿನ ವಿಜಯನಗರ ನಿವಾಸಿ ನರಸಿಂಹ (29) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಾಯಿ ಅಡ್ಡ ಬಂದ ಕಾರಣ ಬೈಕ್ ಪಲ್ಟಿಯಾಗಿ ಸವಾರ, ಮಾಗಡಿ ತಾಲೂಕು ತಿಪ್ಪಸಂದ್ರ ಹೋಬಳಿ ರಂಗಯ್ಯನಪಾಳ್ಯ ಗ್ರಾಮದ ಧನಂಜಯ್ಯ (30) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನೊಂದು ಘಟನೆಯಲ್ಲಿ ಟ್ರ್ಯಾಕ್ಟರ್ ಹಾಗೂ ಬೈಕ್ ಪರಸ್ಪರ ಢಿಕ್ಕಿ ಹೊಡೆದು ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ಸಹನಾ (22) ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ಕಸಬಾ ಹೋಬಳಿ ಟಿ.ಎಂ. ರಸ್ತೆ 33 ಗಿರಿಗೌಡನಪಾಳ್ಯ ಗೇಟ್ ಬಳಿ ಸಂಭವಿಸಿದೆ.
ಟ್ಯಾಂಕರ್ ಢಿಕ್ಕಿ: ಮೂವರ ಸಾವು
ಹೊಸದುರ್ಗ: ಡೀಸೆಲ್ ಟ್ಯಾಂಕರೊಂದು ಬೈಕ್ಗೆ ಢಿಕ್ಕಿ ಹೊಡೆದು, ಬಳಿಕ ಪಾದಚಾರಿ ಮೇಲೆ ಹರಿದ ಪರಿಣಾಮ ಮೂವರು ಮೃತಪಟ್ಟ ಘಟನೆ ತಾಲೂಕಿನ ಕೈನಡು ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಕೈನಡು ಗ್ರಾಮದ ಹುಚ್ಚವೀರಪ್ಪ (50), ರವಿಚಂದ್ರನ್ (36) ಹಾಗೂ ಗಿರೀಶ್ ಆಚಾರ್ (38) ಮೃತಪಟ್ಟವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ