ರಸ್ತೆ ಕಾಮಗಾರಿಗೆ ಸಚಿವರಿಂದ ಚಾಲನೆ
Team Udayavani, Oct 20, 2019, 6:03 PM IST
ಹುಳಿಯಾರು: ಹುಳಿಯಾರಿನಿಂದ ಅಣೆಕಟ್ಟೆಯವರೆಗಿನ ರಸ್ತೆಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದರು.
ಹುಳಿಯಾರು ಮತ್ತು ಹಂದನಕೆರೆ ಹೋಬಳಿಯ ಅನೇಕ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ರಸ್ತೆಯು ಹದಗೆಟ್ಟಿದ್ದರಿಂದ ಸುಗಮ ಸಂಚಾರಕ್ಕೆ ತೊಡಕಾಗಿತ್ತು. ಚುನಾವಣಾ ಪ್ರಚಾರದ ಸಂದರ್ಭ ರಸ್ತೆ ಅಭಿವೃದ್ಧಿಪಡಿಸುವ ಆಶ್ವಾಸನೆ ನೀಡಿದ್ದ ಸಚಿವರು ಎಸ್ಎಚ್ಡಿಪಿ ಯೋಜನಯಡಿ ಈ ರಸ್ತೆಗೆ 19 ಕೋಟಿ ರೂ. ಮಂಜೂರು ಮಾಡಿಸಿದ್ದರು.
ಸಚಿವರು ಮಾತನಾಡಿ, ಚಿ.ನಾಹಳ್ಳಿ ತಾಲೂಕಿನ ರಸ್ತೆ ಕಾಮಗಾರಿಗೆ 72 ಕೋಟಿ ರೂ. ಮಂಜೂರು ಮಾಡಿಸಿದ್ದು, ಪಿಡಬ್ಲ್ಯುಡಿ ಇಲಾಖೆಯಿಂದ ತುರ್ತು ಅಗತ್ಯವಿರುವ ಹದಗೆಟ್ಟ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದರು. ಕುಪ್ಪೂರು ಮಠದ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ, ಕುಪ್ಪೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿ ಸ್ವಾಮಿ, ತಾಪಂ ಸದಸ್ಯ ಕೇಶವಮೂರ್ತಿ, ಮಾಜಿ ಸದಸ್ಯ ನಿರಂಜನ ಮೂರ್ತಿ, ಎಇಇ ಚಂದ್ರಶೇಖರ್, ಗುತ್ತಿಗೆದಾರ ರಘುಪತಿ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ